ಜೇವರ್ಗಿಯಲ್ಲಿ ಕಮಲ ಜಾತ್ರೆ ಆರಂಭ
Team Udayavani, Feb 17, 2018, 12:16 PM IST
ಜೇವರ್ಗಿ: ಪಟ್ಟಣದ ವಿಜಯಪುರ ರಸ್ತೆ ಶಿಕ್ಷಕರ ಕಾಲೋನಿ ಹತ್ತಿರದ ಗೋಗಿ ಲೇಔಟ್ ಬಡಾವಣೆಯಲ್ಲಿ ಆಯೋಜಿಸಲಾದ ಕಮಲ ಜಾತ್ರೆಗೆ ಶುಕ್ರವಾರ ಅದ್ಧೂರಿ ಚಾಲನೆ ದೊರಕಿದೆ.
ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜೇವರ್ಗಿ ಪಟ್ಟಣದಲ್ಲಿ ಆಯೋಜಿಸಲಾದ ಕಮಲ ಜಾತ್ರೆಗೆ ಮಾಜಿ ಸಚಿವ ರೇವುನಾಯಕ ಬೆಳಮಗಿ, ಮಾಜಿ ಶಾಸಕರಾದ ಎಂ.ವೈ. ಪಾಟೀಲ, ಶಶೀಲ ನಮೋಶಿ, ದೊಡ್ಡಪ್ಪಗೌಡ ಪಾಟೀಲ ಜಂಟಿಯಾಗಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿದ ಬಜೆಟ್ ಕುರಿತು ಹಾಗೂ ಕೇಂದ್ರದ ಮೋದಿ ಸರ್ಕಾರದ ಯೋಜನೆಗಳ ಕುರಿತು ಚಾಯ್ ಪೇ ಚರ್ಚಾ ನಡೆಸಲಾಯಿತು. ಬೆಂಗಳೂರಿನ ಖ್ಯಾತ ಕಲಾವಿದರಿಂದ ಜಾದು ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಬಿಸಿಲಿನ ಕಾರಣ ಜನ ಹೆಚ್ಚಾಗಿ ಜಾತ್ರೆಗೆ ಆಗಮಿಸಿರಲಿಲ್ಲ. ಸಂಜ ಎ ಸಹಸ್ರಾರು ಕುಟುಂಬದ ಸದಸ್ಯರೊಡನೆ ಆಗಮಿಸಿದ್ದು ಕಂಡು ಬಂತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದ ಸಾಧನೆಗಳ ಕುರಿತು ಛಾಯಾಚಿತ್ರ ಪ್ರದರ್ಶನ ಜತೆಗೆ ಚಿಕ್ಕ ಚಿಕ್ಕ ಮಕ್ಕಳು ಹಾಗೂ ಯುವಕರು ಕೈ ಮೇಲೆ ಕಮಲ ಚಿತ್ರ ಬಿಡಿಸಿಕೊಂಡು ಸಂತಸ ಪಟ್ಟರು. ಕಡಿಮೆ ದರದಲ್ಲಿ ಆಹಾರ ಮಳಿಗೆ ಕೂಡ ತೆರೆಯಲಾಗಿತ್ತು. ಒಟ್ಟಾರೆ ಪಟ್ಟಣ ಸೇರಿದಂತೆ ತಾಲೂಕಿನ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕಮಲ ಜಾತ್ರೆ ಒಂದು ಹೊಸ ಅನುಭವ ನೀಡಿದಂತಾಗಿದೆ.
ಸೆಲ್ಫಿಗೆ ಮುಗಿಬಿದ್ದ ಜನರು: ಜಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಬಿಎಸ್ವೈ ಭಾವಚಿತ್ರಗಳೊಂದಿಗೆ ಯುವಕರು ಸೆಲ್ಫಿ ತೆಗೆದುಕೊಂಡರು.
ಸೆಲ್ಫಿತೆಗೆದುಕೊಂಡ ಕ್ಷಣಾರ್ಧದಲ್ಲಿಯೇ ಚಿತ್ರ ಪ್ರತಿಗಳನ್ನು ಉಚಿತವಾಗಿ ನೀಡುವ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳು ಬಲೂನ್ ಒಡೆದು, ಜೋಕಾಲಿ, ಉಯ್ನಾಲೆ ಆಟ ಆಡಿ ಸಂತಸ ಪಟ್ಟರೆ ವೃದ್ದರು ಚಾಯ್ ಪೇ ಚರ್ಚಾದಲ್ಲಿ ಬಿಜಿಯಾಗಿದ್ದರು. ಮಹಿಳೆಯರು ಬಣ್ಣ ಬಣ್ಣದ ಬಳೆ ತೊಟ್ಟು ಖುಷಿಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ