ಲುಡೋ ಆಡುವಾಗ ಇಬ್ಬರ ಮಧ್ಯೆ ಜಗಳ: ಚೂರಿಯಿಂದ ಇರಿದು ಬಾಲಕನ ಕೊಲೆ
Team Udayavani, Jun 9, 2022, 12:08 PM IST
ಕಲಬುರಗಿ: ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದಲ್ಲಿ ಲುಡೋ ಗೇಮ್ ಆಡುವಾಗ ಉಂಟಾದ ಜಗಳ ಬಾಲಕನ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.
ಶಾಮರಾಯ ಪರೀಟ್ (16) ಕೊಲೆಯಾದ ಬಾಲಕ ಎಂದು ಗುರುತಿಸಲಾಗಿದೆ.ಸಚಿನ್ ಕಿರಸಾವಳಗಿ (22) ಎಂಬಾತ ಕೊಲೆ ಮಾಡಿದ್ದಾನೆ ಎಂದು ತಿಳಿದಿದೆ.
ಬುಧವಾರ ಸಂಜೆ ಲುಡೋ ಆಡುವಾಗ ನಾನು ಗೆದ್ದೆ, ನಾನು ಗೆದ್ದೆ ಎಂದು ಜಗಳವಾಡಿದ್ದಾರೆ. ಈ ವೇಳೆ ಶಾಮರಾಯ ಸಹೋದರ ಜಗಳ ಬಿಡಿಸಿ ಸಮಾಧಾನ ಮಾಡಿದ್ದರು. ಆದರೂ, ಸಚಿನ್ ಸಮಾಧಾನಗೊಳ್ಳದೆ ಮನೆಯಿಂದ ಚಾಕು ತಂದು ಶಾಮರಾಯನ ಎದೆಗೆ ಇರಿದಿದ್ದಾನೆ. ಇರಿತದಿಂದ ಗಾಯಗೊಂಡ ಶಾಮರಾಯನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಮಾಡಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್