ನಡುಗಟ್ಟೆಗೆ ದೇವಿ-ಇಂದು ರಥೋತ್ಸವ
Team Udayavani, Oct 30, 2021, 9:24 AM IST
ಜೇವರ್ಗಿ: ಪಟ್ಟಣದ ಆರಾಧ್ಯ ದೇವತೆ ಶ್ರೀ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಅಂಗವಾಗಿ ಜಿಲ್ಲೆಯ ವಿವಿಧ ಭಾಗಗಳಿಂದ ದೇವಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ.
ಮಹಾಲಕ್ಷ್ಮೀ ಜಾತ್ರೆಗೆ ಕಳೆದ ಮಂಗಳವಾರ ಅದ್ಧೂರಿ ಚಾಲನೆ ಸಿಕ್ಕಿದ್ದು, ಬುಧವಾರ, ಗುರುವಾರ ಬಡಿಗೇರ ಮನೆಯಲ್ಲಿ ದೇವಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಗುರುವಾರ ರಾತ್ರಿ ಚಿಕ್ಕಜೇವರ್ಗಿ ಪೊಲೀಸ್ ಗೌಡರ ಮನೆಯಿಂದ ವಿವಿಧ ಬಾಜಾ ಭಜಂತ್ರಿ ಹಾಗೂ ಕಲಾ ತಂಡಗಳ ಮೆರವಣಿಗೆ ಮೂಲಕ ದೇವಿ ಮಂಟಪ ಬಡಿಗೇರ ಮನೆಗೆ ಬಂದು ತಲುಪಿತು.
ರಾತ್ರಿ 11 ಗಂಟೆಗೆ ಬಡಿಗೇರ ಮನೆಯಿಂದ ಹೊರಟ ದೇವಿಯ ರಥ ಶುಕ್ರವಾರ ಬೆಳಗ್ಗೆ 5:30 ಗಂಟೆಗೆ ನಡುಗಟ್ಟೆಗೆ ಆಗಮನವಾಯಿತು. ನಂತರ ಸಾಗರೋಪಾದಿಯಲ್ಲಿ ಭಕ್ತರು ಸಾಲುಗಟ್ಟಿ ನಿಂತು ದರ್ಶನ ಪಡೆಯುವ ದೃಶ್ಯ ಕಂಡುಬಂತು.
ಮಹಿಳೆಯರು, ಮಕ್ಕಳು ದೀಡ್ ನಮಸ್ಕಾರ, ಉಡಿ ತುಂಬಿ ಹರಕೆ ತೀರಿಸಿದರು. ಜಾತ್ರೆ ಅಂಗವಾಗಿ ಮಹಾಲಕ್ಷ್ಮೀ ಟ್ರಸ್ಟ್ ಕಮಿಟಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ. ಅಖಂಡೇಶ್ವರ ಸರ್ಕಲ್ನಿಂದ ದೇವಸ್ಥಾನಕ್ಕೆ ತೆರಳುವ ಒಂದು ಕಿ.ಮೀ ರಸ್ತೆಯಲ್ಲಿ ವಾಹನಗಳಿಗೆ ನಿಷೇಧ ಹೇರಲಾಗಿದೆ.
ಇದನ್ನೂ ಓದಿ: ಪುನೀತ್ ಸಾವಿನಿಂದ ಆಘಾತಗೊಂಡ ಅಭಿಮಾನಿ ಹೃದಯಾಘಾತದಿಂದ ನಿಧನ
ಶುಕ್ರವಾರ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಮಹಾಲಕ್ಷ್ಮೀ ಟ್ರಸ್ಟ್ ಕಮಿಟಿ, ಪಟ್ಟಣದ ವಿವಿಧ ಸಂಘಟನೆಗಳು ಹಾಗೂ ಉದ್ಯಮಿಗಳು ಅನ್ನ ಪ್ರಸಾದ, ಹಣ್ಣು ವಿತರಣೆ ಮಾಡಿದರು. ಶನಿವಾರ ಸಾವಿರಾರು ಭಕ್ತಾದಿಗಳ ನಡುವೆ ಅದ್ಧೂರಿ ರಥೋತ್ಸವ ಜರುಗುವುದು.
ಶಾಸಕ ಡಾ| ಅಜಯಸಿಂಗ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಟ್ರಸ್ಟ್ ಕಮಿಟಿ ಬಸವರಾಜ ಸಾಹು ಗೋಗಿ, ಮುಖಂಡರಾದ ಸೋಮಣ್ಣ ಕಲ್ಲಾ, ದಂಡಪ್ಪಗೌಡ ಪೊಲೀಸ್ ಪಾಟೀಲ, ನೀಲಕಂಠ ಅವಂಟಿ, ರವಿ ಕೋಳಕೂರ, ಗುಂಡಣ್ಣ ಬಡಿಗೇರ, ಜಗಧೀಶ ಬಡಿಗೇರ, ಮಲ್ಲಿಕಾರ್ಜುನ ಪತ್ತಾರ, ರಾಮಣ್ಣ ಪೂಜಾರಿ, ಶರಣಗೌಡ ಸರಡಗಿ, ಸಂಗಮೇಶ ಕೊಂಬಿನ್, ಚಂದ್ರು ಕೊಡಚಿ, ರಾಜು ತಳವಾರ, ಭೀಮು ತಳವಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ