ಅಪೌಷ್ಟಿ ಕತೆ: ಪೋಷಕರಿಗೆ ಸಿಗುತ್ತೆ ದಿನದ ಭತ್ಯೆ


Team Udayavani, Jul 4, 2021, 3:07 PM IST

werghgfrerhgtnhgt11

ಕಲಬುರಗಿ: ಕೊರೊನಾ ಸೋಂಕಿನ ಸಂಭವನೀಯ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚಿನ ಪ್ರಮಾಣ ಬೀರುತ್ತದೆ ಎನ್ನುವ ತಜ್ಞರ ಹೇಳಿಕೆ ಹಿನ್ನೆಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಹೆಚ್ಚು ಗಮನ ಹರಿಸಲಾಗುತ್ತಿದೆ.

ಗಂಭೀರ ಪರಿಸ್ಥಿತಿಯಲ್ಲಿ ಸರ್ಕಾರದ ಮಕ್ಕಳ ಆರೋಗ್ಯ ಪುನಶ್ಚೇತನ ಕೇಂದ್ರ (ಎನ್‌ಆರ್‌ಸಿ) ಕ್ಕೆ ಮಕ್ಕಳು ದಾಖಲಾದರೆ, ಮಗುವಿನೊಂದಿಗೆ ಇರುವ ತಾಯಿ ಅಥವಾ ತಂದೆಗೆ ದಿನದ ಭತ್ಯೆ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಸರಾಸರಿ ಎರಡೂವರೆ ಲಕ್ಷ ಮಕ್ಕಳು ಆರು ವರ್ಷದೊಳಗಿನವರು ಇದ್ದಾರೆ. ಇದರಲ್ಲಿ 26,571 ಮಕ್ಕಳು ಸಾಧಾರಣ ಅಪೌಷ್ಟಿಕ ಮತ್ತು 607 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ತೀವ್ರವಾಗಿ ನರಳುತ್ತಿರುವ ಮಕ್ಕಳಿಗಾಗಿ ನಾಲ್ಕು ಪುನಶ್ಚೇತನ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ನಗರದ ಹಳೆ ಜಿಲ್ಲಾಸ್ಪತ್ರೆ (ಜಿಮ್ಸ್‌ ಆವರಣ)ಯಲ್ಲಿ 10 ಬೆಡ್‌ ಹಾಗೂ ಚಿಂಚೋಳಿ, ಚಿತ್ತಾಪುರ, ಸೇಡಂನಲ್ಲಿ ತಲಾ ಐದು ಬೆಡ್‌ಗಳ ಶಾಶ್ವತ ಪುನಶ್ಚೇತನ ಕೇಂದ್ರಗಳು ಇವೆ. ಈ ನಾಲ್ಕು ಕೇಂದ್ರಗಳಲ್ಲಿ ಈಗಾಗಲೇ 79 ಜನ ಅಪೌಷ್ಟಿಕ ಮಕ್ಕಳನ್ನು ದಾಖಲಿಸಲಾಗಿದೆ ಎನ್ನುತ್ತಾರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶರಣಬಸಪ್ಪ ಗಣಜಲಖೇಡ್‌. ಚಿಂಚೋಳಿಯಲ್ಲಿ ಪ್ರತ್ಯೇಕವಾದ ಹಾಸ್ಟೆಲ್‌ ನಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ 48 ಮಕ್ಕಳನ್ನು ದಾಖಲಿಸಲಾಗಿದೆ.

ಕೊರೊನಾ ಭೀತಿಯಿಂದ ಆಸ್ಪತ್ರೆಗೆ ಮಕ್ಕಳನ್ನು ಕರೆದುಕೊಂಡು ಬರಲು ಪೋಷಕರು ಹಿಂದೇಟು ಹಾಕುತ್ತಿರುವ ಕಾರಣಕ್ಕೆ ಹಾಸ್ಟೆಲ್‌ ವ್ಯವಸ್ಥೆ ಮಾಡಲಾಗಿದೆ. ಇತ್ತ, ಸೇಡಂ-13, ಕಲಬುರಗಿ-12 ಮತ್ತು ಚಿತ್ತಾಪುರದಲ್ಲಿ ಆರು ಮಕ್ಕಳು ದಾಖಲಾಗಿದ್ದಾರೆ. ಉಳಿದ ತಾಲೂಕು ಆಸ್ಪತ್ರೆಗಳಲ್ಲೂ ಇಂತಹ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪೌಷ್ಟಿಕ ಆಹಾರ: ಪುನಶ್ಚೇತನ ಕೇಂದ್ರಗಳಿಗೆ ದಾಖಲಾಗುವ ಮಕ್ಕಳಿಗೆ ಮುಖ್ಯವಾಗಿ ಅವರ ಆರೈಕೆ ಮತ್ತು ಅವರಿಗೆ ಪೂರಕವಾದ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಮಕ್ಕಳ ತಜ್ಞರು ಮತ್ತು ಆಹಾರ ಪದ್ಧತಿ ತಜ್ಞರು ಪರೀಕ್ಷಿಸಿ ಮಕ್ಕಳಿಗೆ ಅಗತ್ಯವಾದ ಆಹಾರ ಪೂರೈಸಲಾಗುತ್ತದೆ. ಮಕ್ಕಳ ತೂಕದ ಆಧಾರ ಮೇಲೆ ಪೌಷ್ಟಿಕ ಆಹಾರ ಕೊಡಲಾಗುತ್ತದೆ ಎಂದು ಜಿಲ್ಲಾ ಶಸ್ತ್ರಜ್ಞ ಡಾ| ಎ.ಎಸ್‌. ರುದ್ರವಾಡಿ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಅಪೌಷ್ಟಿಕ ಮಕ್ಕಳಿಗಾಗಿ ಯೇ ಪ್ರತ್ಯೇಕ ಅಡುಗೆ ಕೋಣೆ ಇದೆ. ಆಹಾರ ಪದ್ಧತಿ ತಜ್ಞರು ಸಲಹೆಯಂತೆ ಆಹಾರ ಪೂರೈಸುವ ಉದ್ದೇಶದಿಂದಲೇ ಈ ವ್ಯವಸ್ಥೆ ಮಾಡಲಾಗಿದೆ.

ಮಕ್ಕಳಿಗೆ ಹಾಲು, ಮೊಟ್ಟೆ, ಶೇಂಗಾ ಉಂಡೆ, ಮೊಳಕೆ ಕಾಳು, ಅಗತ್ಯವಾದಲ್ಲಿ ಗಂಜಿ ವಿತರಿಸಲಾಗುತ್ತದೆ. ಪ್ರತಿ ಮಗುವಿನೊಂದಿಗೆ ಒಬ್ಬ ಪೋಷಕರು ಇರಲು ಅವಕಾಶವಿದೆ ಎನ್ನುತ್ತಾರೆ ಅವರು.

ಪಾಲಕರಿಗೆ ದಿನದ ಭ್ಯತೆ: ಅಪೌಷ್ಟಿಕತೆಯು ಕಲ್ಯಾಣ ಕರ್ನಾಟಕ ಭಾಗಕ್ಕೆ ಪೆಡಂಭೂತವಾಗಿ ಕಾಡುತ್ತಿದೆ. ಬಡತನ, ಅನಕ್ಷರತೆ, ಬಾಲ್ಯ ವಿವಾಹದಂತ ಪದ್ಧತಿಗಳು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ. ಮಕ್ಕಳು ಹುಟ್ಟುತ್ತಲೇ ಕಡಿಮೆ ತೂಕ ಹೊಂದಿ, ಮಾನಸಿಕ ಮತ್ತು ದೈಹಿಕವಾಗಿ ಬಳಲುವಂತೆ ಆಗುತ್ತದೆ. ಇಂತಹ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕಾದ ತಂದೆ-ತಾಯಿ ದುಡಿಯುವುದರಲ್ಲೇ ಕಳೆದು ಹೋಗುತ್ತಾರೆ. ಹೀಗಾಗಿ ವೈದ್ಯರ ಸೂಚನೆಯಂತೆ ಪುನಶ್ಚೇತನ ಕೇಂದ್ರಗಳಿಗೆ ಗಂಭೀರ ಅಪೌಷ್ಟಿಕ ಮಕ್ಕಳನ್ನು ದಾಖಲಿಸಿದರೆ, ಅವರ ಜತೆಗೆ ಇರುವ ಪಾಲಕರಿಗೆ ದಿನ ಭತ್ಯೆಯನ್ನು ಸರ್ಕಾರ ಒದಗಿಸುತ್ತಿದೆ. ಸಾಕಷ್ಟು ಪೋಷಕರು ಅಪೌಷ್ಟಿಕ ಮಕ್ಕಳು ಕಾಳಜಿ ವಹಿಸುವುದು ಕಂಡು ಬರುತ್ತಿಲ್ಲ. ಅವರು ತಮ್ಮ ನಿತ್ಯದ ಕೂಲಿ ಬಗ್ಗೆಯೇ ಗಮನ ಕೊಡುತ್ತಾರೆ. ತೀವ್ರ ಅಪೌಷ್ಟಿಕ ಮಕ್ಕಳನ್ನು ಕನಿಷ್ಟ 14 ದಿನಗಳ ಕಾಲ ಆರೈಕೆ ಮಾಡಲಾಗುತ್ತದೆ.

ಈ ಸಂದರ್ಭದಲ್ಲಿ ಪೋಷಕರು ಮಕ್ಕಳೊಂದಿಗೆ ಇರಬೇಕಾಗುತ್ತದೆ. ಮಕ್ಕಳ ಕಾಳಜಿಯೊಂದಿಗೆ ಅವರ ಕೂಲಿ ಹಣವೂ ಸಿಗುವಂತೆ ಆಗಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಒಬ್ಬ ಪೋಷಕರಿಗೆ 275ರೂ. ನೀಡಲಾಗುತ್ತದೆ ಎಂದು ಜಿಲ್ಲಾ ಶಸ್ತ್ರಜ್ಞ ಡಾ| ರುದ್ರವಾಡಿ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.