ಬಟ್ಟೆ ಅಂಗಡಿಯಲ್ಲಿ ಮಾರಾಟಕ್ಕಿದೆ ಶಿಕ್ಷಣ: ನಕಲಿ ಅಂಕಪಟ್ಟಿಗಳನ್ನು ಲಕ್ಷಾಂತರ ರೂ.ಗೆ ಮಾರಾಟ!

ಬಿ.ಇ. ಬಿ.ಟೆಕ್ ಅಂಕಪಟ್ಟಿಗಳಿಗೆ 3.5 ಲಕ್ಷ ರೂ., ಎಂಬಿಎ ಪದವಿಗೆ 1.5 ಲಕ್ಷ ರೂ, ಎಂಸಿಎ ಪದವಿಗೆ 90 ಸಾವಿರ ರೂ..!

Team Udayavani, Jul 10, 2020, 7:11 PM IST

ಬಟ್ಟೆ ಅಂಗಡಿಯಲ್ಲಿ ಶಿಕ್ಷಣ ಮಾರಾಟಕ್ಕಿದೆ: ನಕಲಿ ಅಂಕಪಟ್ಟಿಗಳನ್ನು ಲಕ್ಷಾಂತರ ರೂ.ಗೆ ಮಾರಾಟ!

ಕಲಬುರಗಿ: ಅಂತರ್ಜಾಲದಲ್ಲಿ ವಿಶ್ವವಿದ್ಯಾಲಯಗಳ ಲೋಗೋಗಳು ತೆಗೆದುಕೊಂಡು ಅವುಗಳನ್ನೇ‌ ಬಳಸಿ ನಕಲಿ ಅಂಕಪಟ್ಟಿಗಳನ್ನು ಸಿದ್ಧಪಡಿಸಿ ಲಕ್ಷಾಂತರ ರೂ. ಹಣಕ್ಕೆ ಮಾರಾಟ ಮಾಡುತ್ತಿದ್ದ ಜಾಲವನ್ನು ಕಲಬುರಗಿ ನಗರ ಪೊಲೀಸರು ಪತ್ತೆ ಹಚ್ಚಿಸಿದ್ದಾರೆ.

ನಗರದ ಏಷಿಯನ್ ಮಾಲ್‌ನ ಮೊದಲ ಮಹಡಿಯಲ್ಲಿರುವ ‘ಐ4ಯು’ ಗ್ಲಾಮ್ ಚಾಯ್ಸ್ ಬಟ್ಟೆ ಅಂಗಡಿಯ ಬಟ್ಟೆ ವ್ಯಾಪಾರಿ ಇಂತಹ ಖತರ್ನಾಕ್ ದಂಧೆಯಲ್ಲಿ ತೊಡಗಿದ್ದ ಎಂಬುದೂ ಬಯಲಿಗೆ ಬಂದಿದೆ. ಇಲ್ಲಿನ ತಾರ್ ಫೈಲ್ ಬಡಾವಣೆಯ ಗೌಸ್ ನಗರದ ನಿವಾಸಿ ಮಹಮ್ಮದ್ ಖಾನ್ ಎಂಬಾತ ಈಗ ಪೊಲೀಸ್ ಅತಿಥಿಯಾಗಿದ್ದಾನೆ.

ಬಟ್ಟೆ ಅಂಗಡಿಯಲ್ಲಿ ಅಂಕಪಟ್ಟಿಗಳ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಆಯುಕ್ತ ಎನ್.ಸತೀಶಕುಮಾರ, ಉಪ ಅಯುಕ್ತ ಡಿ.ಕಿಶೋರ್ ಬಾಬು ಮಾರ್ಗದರ್ಶನದಲ್ಲಿ ಸ್ಟೇಷನ್ ಬಜಾರ್ ಠಾಣೆಯ ಇನ್ಸ್ ಪೆಕ್ಟರ್ ಎಲ್.ಎಚ್ ಗೌಂಡಿ ನೇತೃತ್ವದಲ್ಲಿ ಪೊಲೀಸರು ಬುಧವಾರ ರಾತ್ರಿ ದಾಳಿ ನಡೆಸಿ, ಖದೀಮನನ್ನು ಬಂಧಿಸಿದ್ದಾರೆ.

ಯಾವುದೇ ಶಿಕ್ಷಣ ಸಂಸ್ಥೆಯೂ ಹೊಂದಿರದ ಆರೋಪಿ ಮಹ್ಮದ್, ಎಸ್ಎಸ್ಎಲ್ ಸಿಯಿಂದ ಹಿಡಿದು ಬಿಇ., ಬಿ.ಟೆಕ್, ಎಂ.ಟೆಕ್.ವರೆಗೂ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡುತ್ತಿದ್ದ. ಯಾರೇ ಕೇಳಿದರೂ ಕೇವಲ 30-40 ದಿನದಲ್ಲೇ ಅಂಕಪಟ್ಟಿಗಳನ್ನು ನೀಡುತ್ತಿದ್ದ. ಒಂದೊಂದು ಹಂತದ ಪದವಿ ಮಾರ್ಕ್ಸ್ ಕಾರ್ಡ್ ಗಳಿಗೆ ಇಂತಿಷ್ಟು ಎಂದು ಹಣ ನಿಗದಿ ಮಾಡಿದ್ದ. ತನ್ನ ಈ ಕೃತ್ಯಕ್ಕೆ ದೊಡ್ಡ-ದೊಡ್ಡ ವಿಶ್ವವಿದ್ಯಾಲಯಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದ.

ಯಾವ ಅಂಕಪಟ್ಟಿಗೆ ಎಷ್ಟು ಹಣ?: ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ, ಬಿ.ಟೆಕ್, ಎಬಿಎ, ಎಂಸಿಎ., ಎಂ.ಟೆಕ್. ಪದವಿ ಪ್ರಮಾಣ ಪತ್ರಗಳನ್ನು ಬಟ್ಟೆ ಅಂಗಡಿಯಲ್ಲೇ ಈ ಖದೀಮ ಸೃಷ್ಟಿಸುತ್ತಿದ್ದ. ಬಿ.ಇ. ಬಿ.ಟೆಕ್ ಪದವಿ ಅಂಕಪಟ್ಟಿಗಳಿಗೆ 3 ಲಕ್ಷ ದಿಂದ 3.5 ಲಕ್ಷ ರೂ., ಎಂಬಿಎ ಪದವಿಗೆಗೆ 1.5 ಲಕ್ಷ ರೂ., ಎಂಸಿಎ ಪದವಿಗೆ 90 ಸಾವಿರ ರೂ., ಬಿಕಾಂ, ಬಿಎಸ್ಸಿ ಪದವಿ ಅಂಕಪಟ್ಟಿಗಳಿಗೆ 50ರಿಂದ 60‌ ಸಾವಿರ ರೂ., ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಮತ್ತಿತರ ಅಂಕಪಟ್ಟಿಗಳಿಗೆ 30ರಿಂದ 40 ಸಾವಿರ ರೂ. ದರ ನಿಗದಿ ಮಾಡಿದ್ದಾಗಿ ವಿಚಾರಣೆ ವೇಳೆ ಆರೋಪಿ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಆಯುಕ್ತ ಎನ್.ಸತೀಶ್ ಕುಮಾರ್ ತಿಳಿಸಿದ್ದಾರೆ.

ಅಲ್ಲದೇ, ವಿದೇಶದಲ್ಲಿ ಕೆಲಸ ಮಾಡಲು ಅಟೇಸ್ಟೇಷನ್ ಸಹ ಮಾಡಿಸಿ ಕೊಡುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಸೇಂಟ್ ಅಲೋಶಿಯಸ್ ಅಂತಾರಾಷ್ಟ್ರೀಯ ವಿವಿ, ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್, ಸಾಂಗೈ ಅಂತಾರಾಷ್ಟ್ರೀಯ ವಿವಿ, ಹಿಮಾಲಯನ್ ಯುನಿವರ್ಸಿಟಿ, ಸ್ವಾಮಿ ವಿವೇಕಾನಂದ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದಾಗಿ ಆರೋಪಿ ವಿಚಾರಣೆ ವೇಳೆ ಬಹಿರಂಗ ‌ಪಡಿಸಿದ್ದಾನೆ ಎಂದು ಅವರು ವಿವರಿಸಿದ್ದಾರೆ.

ಬಂಧಿತನಿಂದ 2.20 ಲಕ್ಷ ರೂ. ನಗದು ವಶ ಪಡಿಸಿಕೊಳ್ಳಲಾಗಿದೆ. ಆತನ ಅಂಗಡಿಯ ಕೋಣೆಯಲ್ಲಿ ಒಂದು ಹಾರ್ಡ್ ಡಿಸ್ಕ್, ಅನೇಕ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ನಕಲು ಅಂಕಪಟ್ಟಿಗಳು ಹಾಗೂ ಎಲೆ ಜೆನ್ಸ್ ಟೆಕ್ನಾಲಜಿ ಫೆಸ್‌ಮೆಂಟ್ ಬ್ಯುರೊ ಎಂಬ ಹೆಸರಿನ ಬಿಲ್‌ಬುಕ್ ಮತ್ತು ಲೆಟರ್‌ಪ್ಯಾಡ್‌ಗಳ ಪತ್ತೆಯಾಗಿವೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ವಿನ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.