ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ!
Team Udayavani, Jun 18, 2023, 6:28 PM IST
ಚಿಂಚೋಳಿ: ತಾಲೂಕಿನ ಕುಂಚಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪೋಚಾವರಂ ಗ್ರಾಮದಲ್ಲಿ ತಂದೆ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ (36), ಅಕ್ಷತಾ (6), ಓಂಕಾರ (9) ಮೃತಪಟ್ಟರು.
ಹಣಮಂತ ತೆಲಂಗಾಣ ರಾಜ್ಯದ ಹೈದರಾಬಾದ್ ಗೆ ಕೂಲಿ ಕೆಲಸಕ್ಕೆ ಹೋಗಿದ್ದನು.ಶನಿವಾರ ತನ್ನ ಮಕ್ಕಳನ್ನು ಕರೆದುಕೊಂಡು ಬಂದು ತನ್ನ ಅಣ್ಣ ಗೋಪಾಲ ಇವರಿಗೆ ಪೋನ ಮಾಡಿ ‘ನಾನು ಮತ್ತು ನನ್ನ ಮಕ್ಕಳು ಬಾವಿಗೆ ಬಿದ್ದು ಸಾಯುತ್ತಿದ್ದೇವೆ’ ಎಂದು ಹೇಳಿದ್ದಾನೆ. ಗಾಬರಿಗೊಂಡ ಸಹೋದರ ಕುಂಚಾವರಂ ಪೊಲೀಸರಿಗೆ ಮತ್ತು ನೆರೆಯ ತೆಲಂಗಾಣ ಬಟ್ವಾರಂ ಪೊಲೀಸರಿಗೆ ತಿಳಿಸಿದ್ದಾರೆ.
ಪೊಲೀಸರು ಎಲ್ಲಾ ಕಡೆ ಹುಡುಕಾಟ ಮಾಡಿದ್ದಾರೆ. ಆದರೆ ಎಲ್ಲಿಯೂ ಪತ್ತೆಯಾಗಲಿಲ್ಲ. ಇಂದು ರವಿವಾರ ಪೊಚಾವರಂ ಗ್ರಾಮದ ಬಾವಿಯ ಬಳಿ ಚಪ್ಪಲಿ ಕಂಡು ಬಂದವು. ಕುಂಚಾವರಂ ಪೋಲಿಸರು ಪಾತಾಳಗರಡಿ ಹಾಕಿ ಹುಡುಕಿದಾಗ ಹಣಮಂತ ಶವ ಪತ್ತೆಯಾಗಿದೆ. ಜೊತೆಗೆ ಬೆನ್ನಿಗೆ ಇಬ್ಬರು ಮಕ್ಕಳ ಶವ ಕಾಣಿಸಿಕೊಂಡಿವೆ ಎಂದು ಕುಂಚಾವರಂ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಉದ್ದಂಡಪ್ಪ ಮಣ್ಣೂರಕರ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸಪಿ ಕೆ.ಬಸವರಾಜ, ಚಿಂಚೋಳಿ ಸಿಪಿಐ ಅಂಬಾರಾಯ ಕಾಮನಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ