ಚುನಾವಣೆ ಕರ್ತವ್ಯ ನಿಷ್ಠೆಯಿಂದ ನಿರ್ವಹಿಸಿ: ಉಮಾಕಾಂತ್
Team Udayavani, Dec 26, 2020, 5:04 PM IST
ಚಿತ್ತಾಪುರ: ಗ್ರಾಮ ಪಂಚಾಯಿತಿ ಚುನಾವಣಾ ಕಾರ್ಯಕ್ಕೆ ನೇಮಕವಾಗಿರುವ ಸಿಬ್ಬಂದಿ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಆರ್ಒ ಮತ್ತು ಎಪಿಆರ್ಒಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾನದ ಒಂದು ದಿನ ಮುಂಚಿತವಾಗಿಯೇ ನಿಯೋಜನೆ ಮಾಡಲಾಗಿರುವ ಎಲ್ಲ ಅಧಿ ಕಾರಿಗಳು ಆಯಾ ಬೂತ್ಗಳಿಗೆ ತೆರಳಬೇಕು. ಮತ ಪತ್ರಗಳ ಮಾಸ್ಟ್ರಿಂಗ್, ಡಿಮಾಸ್ಟರಿಂಗ್ ಕುರಿತು ತಿಳಿದುಕೊಳ್ಳಬೇಕು. ಮತದಾನ ಕೇಂದ್ರದ ಸುತ್ತಲೂ 200 ಮೀಟರ್ವರೆಗೆ ನಿಷೇಧಾಜ್ಞೆಜಾರಿಗೊಳಿಸಬೇಕು. ಗಲಾಟೆ, ಚುನಾವಣೆ ನಿಯಮ ಉಲ್ಲಂಘನೆ ಮಾಡುತ್ತಿರುವ ವ್ಯಕ್ತಿಗಳು ಕಂಡರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.
ಚುನಾವಣೆಗೆ ಸ್ಪರ್ದಿಸುವ ಅಭ್ಯರ್ಥಿಗಳು ಸ್ಥಳೀಯರು ಆಗಿರುವುದರಿಂದ ಸಣ್ಣಪುಟ್ಟ ಲೋಪದೋಷ ಕಂಡು ಬಂದರೆ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಚುನಾವಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜಾಗರೂಕರಾಗಿ ಕೆಲಸ ಮಾಡಬೇಕು. ಲೋಪದೋಷ ಕಂಡರೆ ಮೇಲಾಧಿ ಕಾರಿಗಳ ಗಮನಕ್ಕೆ ತರಬೇಕು ಎಂದು ಅಧಿ ಕಾರಿಗಳಿಗೆ ಸಲಹೆ ನೀಡಿದರು.
ಇದನ್ನೂ ಓದಿ:ಲವ್ ಜೆಹಾದ್ ಹಿಂದೂ -ಮುಸ್ಲಿಂ ವಿಚಾರವಲ್ಲ: ಹೆಣ್ಣುಮಕ್ಕಳ ಹಕ್ಕುಗಳ ರಕ್ಷಣೆಯೇ ಉದ್ದೇಶ
ಸಹಾಯಕ ಆಯುಕ್ತ ರಮೇಶ ಕೋಲಾರ ಮಾತನಾಡಿ, ಶಾಂತಿಯುತ ಮತದಾನಕ್ಕೆ ಪ್ರತಿಯೊಬ್ಬರು ಸಹಕರಿಸಬೇಕು. ನಿಷ್ಠೆ ಹಾಗೂ ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸಬೇಕು. ತಾಲೂಕಿನಲ್ಲಿ ನಡೆಯುವ ಚುನಾವಣೆಯಲ್ಲಿ ಯಾವುದೇ ರೀತಿಯ ಗಲಾಟೆಯಾಗದಂತೆ ನೋಡಿಕೊಂಡು ಚುನಾವಣೆ ಯಶಸ್ವಿಯಾಗಲು ಸಹಕರಿಸಬೇಕು ಎಂದರು.
ನೋಡಲ್ ಅಧಿಕಾರಿ ಶಂಕರ್, ಚುನಾವಣೆ ಸೆಕ್ಟರ್ ಅ ಧಿಕಾರಿಗಳಾದ ಮನೋಜಕುಮಾರ ಗುರಿಕಾರ್, ವಿಠಲ ಹಾದಿಮನಿ, ಸಿಡಿಪಿಒ ರಾಜಕುಮಾರ ರಾಠೊಡ, ಕ್ಷೇತ್ರ ಶಿಕ್ಷಣಾ ಧಿಕಾರಿ ಸಿದ್ಧವೀರಯ್ಯ, ಗಿರೀಶ ರಂಜೋಳಕರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಂಜೀವಕುಮಾರ, ತೋಟಗಾರಿಕೆ ಇಲಾಖೆ ಅಧಿಕಾರಿ ಸಿದ್ಧು ಅಣಬಿ, ತಾ.ಪಂ ಇಒ ಮೋನಪ್ಪ, ಶ್ರೀಧರ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್