ಏಕತೆಯಲ್ಲಿ ಅನೇಕತೆ ಭಾರತದ ವಿಶೇಷತೆ
Team Udayavani, Apr 12, 2018, 10:11 AM IST
ಸೊಲ್ಲಾಪುರ: ಭಾರತ ದೇಶ ಧರ್ಮಪ್ರಧಾನ ದೇಶವಾಗಿದ್ದು, ಧರ್ಮ ಮತ್ತು ದೇವರ ಬಗ್ಗೆ ಅಪಾರ ಶ್ರದ್ಧೆ ಮತ್ತು ಭಕ್ತಿಯಿದೆ. ಇಲ್ಲಿ ಎಲ್ಲವೂ ಭಿನ್ನವಾಗಿದ್ದರೂ ಕೊನೆಗೆ ಮೋಕ್ಷ ಮಾತ್ರ ಒಂದೇ ಇದೆ. ಏಕತೆಯಲ್ಲಿ ಅನೇಕ, ಅನೇಕತೆಯಲ್ಲಿ ಏಕತೆ ಇದು ಭಾರತದ ವಿಶೇಷತೆ ಎಂದು ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ಧಾರಾಮ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದರು.
ಅಕ್ಕಲಕೋಟ ತಾಲೂಕಿನ ದಹಿಟನೆ ಗ್ರಾಮದ ಶ್ರೀ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಳಸಾರೋಹಣ ಕಾರ್ಯಕ್ರಮದ ಧರ್ಮ ಸಭೆಯಲ್ಲಿ ಅವರು ಮಾತನಾಡಿದರು. ದೇಶದ ವಿವಿಧ ಭಾಗಗಳಲ್ಲಿ 12 ಜ್ಯೋರ್ತಿಲಿಂಗಗಳಿವೆ. 12 ಜ್ಯೋರ್ತಿಲಿಂಗಗಳಲ್ಲಿ ಶ್ರೀಶೈಲ ಮಲ್ಲಿಕಾರ್ಜುನ್ ಒಬ್ಬರು. ದೇಶದ ಅತೀ ಹೆಚ್ಚಿನ ಗ್ರಾಮಗಳಲ್ಲಿ ಮಲ್ಲಿಕಾರ್ಜುನ ಮಂದಿರಗಳಿದ್ದು ಹೆಚ್ಚಿನ ಭಕ್ತರು ಮಲ್ಲಿಕಾರ್ಜುನನನ್ನು ಆರಾಧಿಸುತ್ತಾರೆ ಎಂದರು.
ಶಾಸಕ ಸಿದ್ಧಾರಾಮ ಮೈತ್ರೆ ಅಧ್ಯಕ್ಷತೆ ವಹಿಸಿದ್ದರು. ನಾಗಣಸೂರದ ಪೂಜ್ಯ ಶ್ರೀಕಂಠ ಶಿವಾಚಾರ್ಯ ಮಹಾಸ್ವಾಮೀಜಿ, ಅಕ್ಕಲಕೋಟದ ವೀರಕ್ತ ಮಠದ ಪೂಜ್ಯ ಬಸವಲಿಂಗ ಮಹಾಸ್ವಾಮೀಜಿ ಹಾಗೂ ಜಿಪಂ ಕೃಷಿ ಸಭಾಪತಿ ಮಲ್ಲಿಕಾರ್ಜುನ ಪಾಟೀಲ, ಉದ್ಯಮಿ ಗೋಕುಳ ಶಿಂದೆ, ಕಾಂಗ್ರೆಸ್ ಶಹರ ಅಧ್ಯಕ್ಷ ಭಿಮಾಶಂಕರ ಕಾಪಸೆ, ತಾಪಂ ಸದಸ್ಯ ವಿಲಾಸ ಗವ್ಹಾಣೆ, ದತ್ತಾತ್ರೇಯ ಪಾಟೀಲ ಮತ್ತಿತರರು ಇದ್ದರು. ರಮೇಶ ಸ್ವಾಮಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್