ಮಾ. 23ರಿಂದ ಮತ್ತೆ ಆಂದೋಲನ: ಅಣ್ಣಾ ಹಜಾರೆ
Team Udayavani, Jan 29, 2018, 6:25 AM IST
ಕಲಬುರಗಿ: ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರಕಿಸಿಕೊಡಲು ಸರಿಯಾದ ಯೋಜನೆ ರೂಪಿಸುವುದು, 60 ವರ್ಷ ತುಂಬಿದ ರೈತರಿಗೆ ತಿಂಗಳಿಗೆ 5 ಸಾವಿರ ರೂ. ಮಾಸಾಶನ ನೀಡುವುದರ ಸಹಿತ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಆಗ್ರಹಿಸಿ ಮಾ.23ರಿಂದ ಹೊಸದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಮತ್ತೂಂದು ಸುತ್ತಿನ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ, ಭ್ರಷ್ಟಾಚಾರ ವಿರೋಧಿ ಹೋರಾಟದ ರೂವಾರಿ ಅಣ್ಣಾ ಹಜಾರೆ ಹೇಳಿದರು.
ನಗರದ ಶರಣಬಸವೇಶ್ವರ ಜಾತ್ರಾ ಮೈದಾನ ದಲ್ಲಿ ಹೈದರಾಬಾದ್ ಕರ್ನಾಟಕ ರೈತ ಸಂಘ ರವಿವಾರ ಆಯೋಜಿಸಿದ್ದ ರೈತ ಜಾಗೃತಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು ಡಾ|ಸ್ವಾಮಿನಾಥ್ನ ವರದಿ ಯಥಾವತ್ತಾಗಿ ಜಾರಿ ಗೊಳಿಸುವುದು, ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸುವುದು ಮತ್ತು ರೈತರಿಗೆ ಮಾಸಾಶನ ಸಹಿತ ಇತರ ರೈತರ ಬೇಡಿಕೆಗಳಿಗೆ ಹಾಲಿ ಕೇಂದ್ರ ಸರಕಾರ ಸ್ಪಂದಿಸಲಿದೆ ಎಂದು ಬಲವಾಗಿ ನಂಬಲಾಗಿತ್ತು. ಆದರೆ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾದರೂ ರೈತರತ್ತ ಸರಕಾರ ಕಣ್ಣೆತ್ತಿ ನೋಡದೇ ಇರುವುದರಿಂದ ಮತ್ತು ಸಮಸ್ಯೆಗಳನ್ನು ಕಿವಿಗೆ ಹಾಕಿಕೊಳ್ಳದ ಹಿನ್ನೆಲೆಯಲ್ಲಿ ಆಂದೋಲನಕ್ಕೆ ಇಳಿಯಲಾಗುತ್ತಿದೆ ಎಂದರು.
12 ಲಕ್ಷ ರೈತರ ಆತ್ಮಹತ್ಯೆ
ಆಂದೋಲನದ ಅಂಗವಾಗಿ ದೇಶಾದ್ಯಂತ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದ ಅವರು ಈಗಾಗಲೇ 18 ರಾಜ್ಯಗಳಲ್ಲಿ ಪ್ರವಾಸ ಮಾಡಿ, ರೈತರನ್ನು ಸಂಘಟಿಸಲಾಗಿದೆ. ಐತಿಹಾಸಿಕ ಎನ್ನುವಂತೆ ರಾಮಲೀಲಾ ಮೈದಾನದಲ್ಲಿ ಹೋರಾಟಕ್ಕೆ ಧುಮುಕಲಾಗುವುದು. ರೈತರ ಶಕ್ತಿಯನ್ನು ಪ್ರದರ್ಶಿಸಿ ಕೇಂದ್ರಕ್ಕೆ ಚುರುಕು ಮುಟ್ಟಿಸಲಾಗುವುದು. 22 ವರ್ಷಗಳಲ್ಲಿ 12 ಲಕ್ಷ ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಆದರೆ ಒಬ್ಬನೇ ಒಬ್ಬ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆ ಇಲ್ಲ. ಪ್ರಧಾನಿ ಮೋದಿ ಅವರು ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಜಮಾ ಮಾಡುತ್ತಾರೆ ಹಾಗೂ ರೈತರ ಬವಣೆಗೆ ಸ್ಪಂದಿಸುತ್ತಾರೆ ಎಂದು ನಂಬಿ ಎಲ್ಲರೂ ಬೆಂಬಲಿಸಿದ್ದಾರೆ. ಆದರೆ 15 ರೂ. ಸಹ ಜೇಬಿಗೆ ಹಾಕಿಲ್ಲ ಎಂದು ಅಣ್ಣಾ ಹಜಾರೆ ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ