ಮಾತೆ ಮಹಾದೇವಿ ಬಂಧನಕ್ಕೆ ಒತ್ತಾಯ


Team Udayavani, Sep 15, 2017, 9:52 AM IST

gul-1.jpg

ಕಲಬುರಗಿ: ನಡೆದಾಡುವ ದೇವರೆಂದೇ ಖ್ಯಾತಿ ಪಡೆದಿರುವ ತುಮಕೂರಿನ ಸಿದ್ಧಗಂಗಾ ಶ್ರೀಗಳ ಹೆಸರಿಗೆ ಮಸಿ ಬಳಿಯುವಂತ ಹೇಳಿಕೆ ನೀಡುತ್ತಿರುವ ಜಗದ್ಗುರು ಮಾತೆ ಮಹಾದೇವಿ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಪೇಜಾವರ ಶ್ರೀ ಸೇನೆ ಕರ್ನಾಟಕ ರಾಜ್ಯಾಧ್ಯಕ್ಷ ಎಂ.ಎಸ್‌.ಪಾಟೀಲ ನರಿಬೋಳ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ನಗರದ ಸರ್ದಾರ ಪಟೇಲ್‌ ವೃತ್ತದಲ್ಲಿ ನಡೆಯಿತು.

ಶ್ರಮಜೀವಿಗಳ ವೇದಿಕೆ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಸಹಿ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಅಭಿಯಾನ ನಗರದಿಂದ ಆರಂಭವಾಗಿ ಜೇವರ್ಗಿ ತಲುಪಿತು.

ಶುಕ್ರವಾರ ಚಿತ್ತಾಪುರ, ಸೇಡಂ, ಅಫಜಲಪೂರ, ಆಳಂದ, ಚಿಂಚೋಳಿ ತಾಲೂಕುಗಳಲ್ಲಿ ಸಂಚರಿಸಿ ಸಹಿ ಸಂಗ್ರಹ ಮಾಡಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತೆ ಮಹಾದೇವಿ ಅವರನ್ನು ಬಂಧಿಸಲು ಕೋರಲಾಗುವುದು ಎಂದು ನರಿಬೋಳ ತಿಳಿಸಿದರು. 

ಸಿದ್ದಗಂಗಾ ಶ್ರೀಗಳು ಭಾರತರತ್ನ ಆಸೆಗೆ ಹೇಳಿಕೆ ನೀಡಿದ್ದಾರೆಂಬ ಉದ್ಧಟತನದ ಹೇಳಿಕೆ ನೀಡಿ ಕೋಟ್ಯಂತರ ಶ್ರೀಗಳ ಭಕ್ತರ ಮನಸ್ಸಿಗೆ ನೋವು ಮಾಡಿರುವ ಮಾತೆ ಮಹಾದೇವಿ ಅವರಿಗೆ ನಗರದಲ್ಲಿ ನಡೆಯುವ ಸೆ. 24 ರ ಧರ್ಮ ಒಡೆಯುವ ರ್ಯಾಲಿಯಲ್ಲಿ ಭಾಗವಹಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು ಎಂದರು. 

ಲಕ್ಷ್ಮೀಕಾಂತ ಸ್ವಾದಿ, ಗೌರೀಶ ಕಾಶೆಂಪುರ, ಶಿವಾಜಿ ಜಿ.ಕೆ., ಸಿ.ಎಂ.ಶಿವಶರಣಪ್ಪ, ಮನೋಹರ ಪೋದ್ದಾರ, ವೀರಭದ್ರಪ್ಪ ವರದಾನಿ, ಸಂತೋಷ ಪಾಟೀಲ ಹರಸೂರ, ಶಿವು ಹಲಗೂಡಕರ, ನಟರಾಜ ಕಿಣಗಿಕರ, ಗಿರೀಶ ಕುಲಕರ್ಣಿ ಮತ್ತಿತರರು ಈ ಸಂದರ್ಭದಲ್ಲಿದ್ದರು. 

ಹಳೆ ವಿದ್ಯಾರ್ಥಿ ಸಂಘದ ಖಂಡನೆ

ಕಲಬುರಗಿ: ಭಾರತರತ್ನ ಕೊಡಿಸುವ ಆಮಿಷದಿಂದ ತುಮಕೂರು ಸಿದ್ಧಗಂಗಾ ಮಠದ ಶತಾಯುಷಿ ಡಾ|ಶಿವಕುಮಾರ ಮಹಾಸ್ವಾಮಿಗಳಿಂದ ಈ ರೀತಿ ಹೇಳಿಕೆ ಕೊಡಿಸಿದ್ದಾರೆ ಎಂದು ಹೇಳಿರುವ ಮಾತೆ ಮಹಾದೇವಿ ಹೇಳಿಕೆ ಸರಿಯಲ್ಲ ಎಂದು ಸಿದ್ಧಗಂಗಾ ಹಳೆ ವಿದ್ಯಾರ್ಥಿ ಹಾಗೂ ಹಿತೈಷಿಗಳ ಸಂಘದ ಕಾರ್ಯದರ್ಶಿ ದೇವೆಂದ್ರಪ್ಪ ಆವಂಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ಧಗಂಗಾ ಶ್ರೀಗಳ ದೇಹಕ್ಕೆ ವಯಸ್ಸಾಗಿದೆಯೇ ಹೊರತು ಬುದ್ಧಿ ಭ್ರಮಣೆಯಾಗಿಲ್ಲ. ಅವರು ಎಂದೂ ಸಮಾಜ ಒಡೆಯುವ ಕೆಲಸ ಮಾಡಿಲ್ಲ, ಮಾಡುವುದು ಇಲ್ಲ. ರಾಜ್ಯದ ಒಳಿತಷ್ಟೇ ಅಲ್ಲದೆ ಇಡೀ ಭರತ ಖಂಡಕ್ಕೆ ಒಳಿತಾಗಬೇಕೆಂದು ಶ್ರೀಮಠದ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡುತ್ತಿದ್ದಾರೆ. ಅವರು ಯಾವುದೇ ಆಮಿಷಕ್ಕೂ ಬಗ್ಗುವುದಿಲ್ಲ. ಆಮಿಷಗಳನ್ನು ಮಠದತ್ತ ಸುಳಿಯಲು ಬಿಡುವುದಿಲ್ಲ. ತಮ್ಮ ಇಡೀ ಜೀವನವನ್ನು ಶ್ರೀಮಠದ ಬಡ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಾ ಬಂದಿದ್ದಾರೆ ಎಂದರು.

ಶ್ರೀಮಠದಲ್ಲಿ ಯಾವುದೇ ಜಾತಿಗೆ ಸೇರಿದ ಮಕ್ಕಳಿಲ್ಲ. ಎಲ್ಲ ಜಾತಿಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಅಭ್ಯಾಸ ಮಾಡಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೆಲ್ಲವನ್ನು ಅರಿತ ಮಾತೆ ಮಹಾದೇವಿ ಈ ರೀತಿ ಹೇಳಿಕೆ ನೀಡುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಶ್ರೀಗಳ ಹೇಳಿಕೆ ತಿರುಚಿ ಅಪಚಾರ ಎಸಗಿದ್ದಾರೆ. ಸ್ವಾರ್ಥಕ್ಕಾಗಿ ಸಿದ್ಧಗಂಗಾ ಮಠದ ಶ್ರೀಗಳನ್ನು ನಡುವೆ ಎಳೆದು ತರುತ್ತಿರುವುದು ಸರಿಯಲ್ಲ. ಕೂಡಲೆ ಸಚಿವ ಎಂ.ಬಿ.ಪಾಟೀಲ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಚಿವ ಪಾಟೀಲರ ಹೇಳಿಕೆಯಿಂದ ಶ್ರೀಮಠದ ಹಳೆ ವಿದ್ಯಾರ್ಥಿಗಳು ಹಾಗೂ ಹಿತೈಷಿಗಳಿಗೆ ನೋವುಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಮಾತೆ ಮಹಾದೇವಿ, ಎಂ.ಬಿ.ಪಾಟೀಲ ಶ್ರೀಗಳಲ್ಲಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಶ್ರೀಮಠದ ವಿದ್ಯಾರ್ಥಿಗಳು ಹಾಗೂ ಹಿತೈಷಿಗಳು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸಂಘದ ಆವಂಟಿ, ಮಹೇಂದ್ರ ಬಿರಾದಾರ, ಚನ್ನಬಸಯ್ಯ ಗುರುವಿನ, ಜಗದೇವಪ್ಪ ಹಲಕರ್ಟಿ, ರುದ್ರಮುನಿ ಪುರಾಣಿ, ಮಂಜುನಾಥ ಸ್ವಾಮಿ, ವಿಜಯಕುಮಾರ, ಅಶೋಕ ರಟಕಲ್‌ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.