ಮೇಯರ್-ಉಪ ಮೇಯರ್ ಚುನಾವಣೆ: ವಿಚಾರಣೆ ಮುಂದೂಡಿಕೆ
Team Udayavani, Feb 4, 2022, 9:52 AM IST
ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಮತದಾರ ಪಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರ ಹೆಸರು ಸೇರ್ಪಡೆ ಮತ್ತು ಮೇಯರ್, ಉಪ ಮೇಯರ್ ಮೀಸಲಾತಿ ಬದಲಾವಣೆ ವಿರುದ್ಧ ಸಲ್ಲಿಸಲಾದ ದೂರಿನ ಅರ್ಜಿಯ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡ ಇಲ್ಲಿನ ಕರ್ನಾಟಕ ಹೈಕೋರ್ಟ್ ಪೀಠ ಮುಂದಿನ ವಿಚಾರಣೆಯನ್ನು ಫೆ. 4ರ ಶುಕ್ರವಾರಕ್ಕೆ ಮುಂದೂಡಿದೆ.
ಮತದಾರರ ಪಟ್ಟಿಯಲ್ಲಿ ಹೊಸದಾಗಿ ವಿಧಾನ ಪರಿಷತ್ ಸದಸ್ಯರ ಹೆಸರು ಸೇರಿಸಿದ್ದನ್ನು ಪ್ರಶ್ನಿಸಿ ಹಾಗೂ ಕಳೆದ ನವೆಂಬರ್ 20ರಂದು ನಿಗದಿಯಾಗಿದ್ದ ಚುನಾವಣೆ ಮುಂದೂಡಿಕೆಯಾಗಿ ಫೆ. 5ರಂದು ನಿಗದಿಯಾಗಿದೆ. ಆದರೆ ನ. 20ರಂದು ನಿಗದಿಯಾಗಿದ್ದ ಚುನಾವಣೆ ಅಧಿಸೂಚನೆಯಲ್ಲಿ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಮೇಯರ್ ಹಿಂದುಳಿದ “ಬ’ ವರ್ಗಕ್ಕೆ ಮೀಸಲಾಗಿತ್ತು. ಈಗ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಬದಲಾಗಿದೆ.
ಮೀಸಲಾತಿ ಬದಲಾವಣೆ ಆಗಿರುವುದನ್ನು ಪ್ರಶ್ನಿಸಿ ಹಾಗೂ ಮತದಾರರ ಪಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರ ಹೆಸರು ಸೇರ್ಪಡೆ ವಿರುದ್ಧ ಕಾಂಗ್ರೆಸ್ ಪಕ್ಷ ಇಲ್ಲಿನ ಹೈಕೋರ್ಟ್ ಪೀಠದಲ್ಲಿ ದೂರು ಸಲ್ಲಿಸಿದ್ದು, ಅರ್ಜಿ ವಿಚಾರಣೆ ಗುರುವಾರ ನಡೆಯಿತು. ಪ್ರಥಮವಾಗಿ ವಾದ ಆಲಿಸಿದ ಕರ್ನಾಟಕ ಹೈಕೋರ್ಟ್ ನ ಏಕ ಪೀಠದ ನ್ಯಾಯಮೂರ್ತಿಗಳಾದ ನ್ಯಾ| ಇಂದ್ರೀಶ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದರು. ಮುಂದಿನ ವಿಚಾರಣೆ ಶುಕ್ರವಾರಕ್ಕೆ ನಿಗದಿಯಾಗಿದ್ದರಿಂದ ಎಲ್ಲರ ಚಿತ್ತ ಹೈಕೋರ್ಟ್ನ ಶುಕ್ರವಾರ ವಿಚಾರಣೆಯತ್ತ ಎನ್ನುವಂತಾಗಿದೆ.
ಶುಕ್ರವಾರದ ವಿಚಾರಣೆ ಫಲಿತಾಂಶ ಏನು ಬರಬಹುದು ಎಂಬುದರ ಕುರಿತಾಗಿ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದವರು ತೀವ್ರ ಚಿಂತನೆಯಲ್ಲಿ ಮುಳುಗಿದ್ದಾರೆ. ಶನಿವಾರ ನಡೆಯುವ ಚುನಾವಣೆಗೆ ಪಾಲಿಕೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದು, ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಒಟ್ಟಾರೆ ಶುಕ್ರವಾರದ ನ್ಯಾಯಾಲಯದ ಆದೇಶದ ಮೇಲೆ ಮುಂದಿನ ನಡೆ ನಿರ್ಧಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ