ಸೈನಿಕ ವಿಠ್ಠಲ್ ವೈದ್ಯಕೀಯ ಚಿಕಿತ್ಸೆಗೆ ಕೇಂದ್ರ ಸಚಿವ ಖೂಬಾ ಸ್ಪಂದನೆ
Team Udayavani, Jun 13, 2022, 12:51 PM IST
ಕಲಬುರಗಿ: ಆಳಂದ ತಾಲೂಕಿನ ಹೀರೊಳಿ ಗ್ರಾಮದ ಯೋಧ ವಿಠ್ಠಲ್ ಶಾಂತಪ್ಪಾ ವಾಡೆದ ಅವರ ಮನೆಗೆ ಭಾನುವಾರ ಕೇಂದ್ರ ಸಚಿವ ಭಗವಂತಾ ಖೂಬಾ ಭೇಟಿ ನೀಡಿ ಯೋಧನ ಆರೋಗ್ಯ ವಿಚಾರಿಸಿದರು.
ಅಲ್ಲದೆ, ಉಗ್ರರೊಂದಿಗೆ ಸೆಣಸಿ ಜೀವನ್ಮರಣದ ಹೋರಾಟದಲ್ಲಿ ತೋರಿದ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಗಾಯಗೊಂಡಿರುವ ಸೈನಿಕನ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಕೂಡಲೇ ರಾಜ್ಯದ ಹಿರಿಯ ವೈದ್ಯರು ಮತ್ತು ಹಿರಿಯ ಸಿಐಎಸ್ ಎಫ್ ಅಧಿಕಾರಿಗಳೊಂದಿಗೆ ಸ್ಥಳದಿಂದಲೇ ದೂರವಾಣಿಯಲ್ಲಿ ಮಾತನಾಡಿ, ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ತುರ್ತು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಈ ವೇಳೆ ಹಾಜರಿದ್ದ ಕುಟುಂಬ ಸದಸ್ಯರು, ಸಹೋದರ ಕಾಶಿನಾಥ, ತಾಯಿಗೆ ಧೈರ್ಯ ತುಂಬಿದರು. ಆನಂದ ಪಾಟೀಲ, ಹರ್ಷಾನಂದ ಗುತ್ತೇದಾರ್, ಸಿದ್ದು ಪಾಟೀಲ ಸಕ್ಕರಗಾ, ಸಂಜಯ ಮಿಸ್ಕಿನ್ ಇತರರು ಇದ್ದರು.
ವಿಠ್ಠಲ ವಾಡೇದ್ನಂತಹ ಸೈನಿಕರು ನಮ್ಮ ದೇಶದ ಹೆಮ್ಮೆ ಮತ್ತು ನಮ್ಮ ಅಭಿಮಾನ. ಅವರಿಗೆ ಎದೆಗೆ ಮತ್ತು ಭುಜಕ್ಕೆ ಗುಂಡು ಬಿದ್ದಿದ್ದರೂ, ಗ್ರೆನೇಡ್ ಚೂರುಗಳು ದೇಹ ಹೊಕ್ಕಿದ್ದರೂ, ಉಸಿರು ಜತನ ಮಾಡಿಕೊಂಡು ಊರಿಗೆ ಬಂದಿರುವ ಅವರಿಗೆ ಉತ್ತಮ ಚಿಕಿತ್ಸೆ ಕೊಡಬೇಕಾದದ್ದು ಸರಕಾರ ಮತ್ತು ನಮ್ಮ ಹೊಣೆ. ಕೂಡಲೇ ಅಗತ್ಯ ಚಿಕಿತ್ಸೆ ಕೊಡಿಸಲು ಬದ್ಧ. -ಭಗವಂತ ಖೂಬಾ, ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ