ಆನೆಕಾಲು ರೋಗ ನಿಯಂತ್ರಣಕ್ಕೆ ಔಷಧಿ ನೀಡಿಕೆ


Team Udayavani, Jan 14, 2021, 1:50 PM IST

Medication for elephant disease control

ಕಲಬುರಗಿ: ಅನೆಕಾಲು ರೋಗ ಮುಕ್ತಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜ.22ರಿಂದ 31 ರವರೆಗೆ ಐವಿಆರ್‌ ಐವರಮೆಕ್ಟಿನ್‌ ಹಾಗೂ ಡಿಇಸಿ, ಅಲ್ಬಂಡಜೋಲ್‌ ಮಾತ್ರೆಗಳನ್ನು ನುಂಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿ ವಿ.ವಿ.ಜ್ಯೋತ್ಸಾ ತಿಳಿಸಿದರು.

ನಗರದ ಜಿಲ್ಲಾಧಿ ಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಔಷಧಿ ಸೇವನೆಯ ಎಂಡಿಎ ಹಾಗೂ ಐಡಿಎ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿಇಸಿ ಮತ್ತು ಅಲ್ಬಂಡಜೋಲ್‌ ಮಾತ್ರೆಗಳನ್ನು 2 ವರ್ಷದೊಳಗಿನ ಮಕ್ಕಳಿಗೆ ನೀಡಬಾರದು. ಐವಿಆರ್‌ ಐವರ್‌ವೆುಕ್ಟಿನ್‌ ಮಾತ್ರೆಯನ್ನು 5 ವರ್ಷದೊಳಗಿನ ಮಕ್ಕಳಿಗೆ ನೀಡಬಾರದು. ಈ ಔಷಧಿ ಗಳನ್ನು ಗರ್ಭಿಣಿಯರು, ಹೃದಯ, ಶ್ವಾಸಕೋಶ, ಮೂತ್ರಪಿಂಡಕ್ಕೆ ಸಂಬಂ ಧಿಸಿದ ದೀರ್ಘಾವಧಿ ಖಾಯಿಲೆಯಿಂದ ಬಳಲುತ್ತಿರುವವರಿಗೆ ನೀಡುವಂತಿಲ್ಲ. ಎಂಡಿಎ ಮಾತ್ರೆಗಳು ವಯಸ್ಸಿನ ಆಧಾರದ ಮೇಲೆ ಹಾಗೂ ಐಡಿಏ ಮಾತ್ರೆಗಳು ಎತ್ತರದ ಆಧಾರದ ಮೇಲೆ ನೀಡಲಾಗುವುದು ಎಂದು ವಿವರಿಸಿದರು.

ಜಿಲ್ಲೆಯಲ್ಲಿನ 1,255 ಹಳ್ಳಿಗಳಲ್ಲಿ 107 ಪ್ರಾಥಮಿಕ ಕೇಂದ್ರಗಳು ಹಾಗೂ 336 ಉಪಕೇಂದ್ರಗಳಲ್ಲಿ ಒಬ್ಬರು ಅಂಗನವಾಡಿ ಹಾಗೂ 1 ಆಶಾ ಕಾರ್ಯಕರ್ತೆರ ತಂಡ 10 ದಿನಗಳ ಕಾಲ ಪ್ರತಿದಿನ 25 ಮನೆಗಳಿಗೆ ತೆರಳಿ ಮಾತ್ರೆಗಳನ್ನು ನೀಡಲಿದೆ. 250 ಮನೆಗಳಲ್ಲಿ 1,500 ಜನರಿಗೆ ಮಾತ್ರೆ ನುಗಿಸುವ ಗುರಿ ಹೊಂದಿದ್ದು, 5900 ಆಶಾ ಕಾರ್ಯಕರ್ತೆಯರು ಭಾಗಿಯಾಗಲಿದ್ದಾರೆ. ಚಿಕ್ಕ ಮಕ್ಕಳಿಗೆ ಮಾತ್ರೆಗಳನ್ನು ನೀಡುವಾಗ ತರಬೇತಿ ಪಡೆದುಕೊಂಡು ಕಾರ್ಯಕರ್ತೆಯರು  ಮಾತ್ರ ನೀಡಬೇಕು. ಜನರಿಗೆ ಸರಿಯಾದ ಮಾಹಿತಿ ಕೊಟ್ಟು ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸುಮಾರು 18 ರೋಗಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಐವಿಆರ್‌, ಐವರ್‌ವೆುಕ್ಟನ್‌ ಮಾತ್ರಗಳು ಈಗಾಗಲೇ ಯಾದಗಿರಿ ಜಿಲ್ಲೆ ಹಾಗೂ ಪಾಂಡಿಚೇರಿಯಲ್ಲಿ ವಿತರಣೆ ಮಾಡಿ ಯಶಸ್ವಿಯಾಗಿದ್ದು, ಪ್ರಸ್ತುತ ವರ್ಷದಿಂದ ಜಿಲ್ಲೆಯ 7 ತಾಲೂಕಿನ ಜನರಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದನ್ನೂ ಓದಿ:ಎಲ್ಲೆಡೆ ಎಳ್ಳ ಅಮಾವಾಸ್ಯೆ ಸಂಭ್ರಮ

ಜಿಪಂ ಸಿಇಒ ಡಾ| ರಾಜಾ ಪಿ. ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಣಾಧಿ ಕಾರಿ ಡಾ| ರಾಜಶೇಖರ ಮಾಲಿ, ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾಧಿ ಕಾರಿ ಡಾ| ಬಸವರಾಜ ಗುಳಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್‌.ಪಿ. ಬಾಡಂಗಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶಿವಶರಣಪ್ಪ ಸೇರಿದಂತೆ ಜಿಲ್ಲಾಮಟ್ಟದ ಅಧಿ ಕಾರಿಗಳು ಉಪಸ್ಥಿತರಿದ್ದರು. ಕೀಟಶಾಸ್ತ್ರಜ್ಞ ಚಾಮರಾಜ ದೊಡ್ಡಮನಿ ಪಿಪಿಟಿ ಮೂಲಕ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.