ಜಿಇಗೆ ಕಾರ್ಮಿಕ ಅಧಿಕಾರಿಗಳ ಭೇಟಿ


Team Udayavani, May 20, 2018, 10:53 AM IST

gul-3.jpg

ಶಹಾಬಾದ: ನಗರದ ಜಿಇ ಕಾರ್ಖಾನೆ ಕಾನೂನು ಬಾಹಿರವಾಗಿ ಕಂಪನಿಯ ಮುಖ್ಯದ್ವಾರ ಮುಚ್ಚಿ ಕಾರ್ಮಿಕರಿಗೆ ಶೋಷಣೆ ಮಾಡುತ್ತಿರುವ ಬಗ್ಗೆ ಕಾರ್ಮಿಕರು ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ತಂಡ ಜಿಇ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿತು.

ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಅವರ ತಂಡ ಹಾಗೂ ಸಿಪಿಐ ಆನಂದರಾವ ಜಿಇ ಕಾರ್ಖಾನೆಯ ಮುಖ್ಯದ್ವಾರಕ್ಕೆ ಬೀಗ ಹಾಕಿರುವುದನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಿಪಿಐ ಆನಂದರಾವ ಕಾರ್ಖಾನೆ ಕಾವಲುಗಾರರಾಗಿ ನೇಮಕವಾದ ಸುಮಾರು 11 ಸುರಕ್ಷತಾ ಸಿಬ್ಬಂದಿ ಕಾರ್ಖಾನೆ ಒಳಗಡೆ ಇದ್ದಾರೆ. ಅವರಿಗೆ ಕುಡಿಯಲು ನೀರಿಲ್ಲ ಹಾಗೂ ತಿನ್ನಲು ಆಹಾರವಿಲ್ಲ. ಸುಮಾರು ನಾಲ್ಕು ದಿನಗಳಿಂದ ಕಂಪನಿಯ ಒಳಗಡೆ ಪರದಾಡುತ್ತಿದ್ದಾರೆ. ಅಲ್ಲದೇ ಕಾರ್ಮಿಕರು ಯಾವುದೇ ಆಹಾರ ನೀಡಲು ಕೊಡುತ್ತಿಲ್ಲ. ಏನಾದರೂ ಅನಾಹುತವಾದರೆ ಯಾರು ಜವಾಬ್ದಾರರು ಎಂದು ಸಿಪಿಐ ಆನಂದರಾವ ಕಾರ್ಮಿಕ ಅಧಿಕಾರಿ ಗಮನಕ್ಕೆ ತಂದರು. ಆಗ ಜಿಲ್ಲಾ ಕಾರ್ಮಿಕ ಅಧಿಕಾರಿ ಸುರಕ್ಷತಾ ಸೂಪರ್‌ ವೈಸರ್‌ ವೀರಣ್ಣ ಅವರಿಗೆ ಆಹಾರ ಸೇವನೆ ಇಲ್ಲದೇ ಹೆಚ್ಚು ಕಮ್ಮಿ ಏನಾದರೂ ಆದರೆ ಯಾರು ಜವಾಬ್ದಾರರು. ಮೊದಲು ಗೇಟಿನ ಕೀಲಿ ತೆಗೆದು ಊಟ ಮಾಡಿ ಬನ್ನಿ. ಪಾಳಿಗೊಬ್ಬರಂತೆ ಕೆಲಸ ಮಾಡಿ ಎಂದರು. ಆದರೆ ಸುರಕ್ಷತಾ ಸೂಪರ್‌ ವೈಸರ್‌ ವೀರಣ್ಣ ನಮ್ಮ ಹತ್ತಿರ ಕೀಲಿ ಕೈ ಇಲ್ಲ ಎಂದರು. ಅಲ್ಲದೇ ಸುರಕ್ಷತಾ ಮೇಲಾಧಿಕಾರಿಗಳಿಗೆ ಕರೆ ಮಾಡಿ ಈ ಬಗ್ಗೆ ತಿಳಿಸಿದರೂ ಯಾವುದಕ್ಕೂ ಸ್ಪಂದಿಸಲಿಲ್ಲ. ಸಿಪಿಐ ಆನಂದರಾವ್‌ ಕೀಲಿ ತೆಗೆಯುವಂತೆ ತಿಳಿಸಿದರೂ ತೆಗೆಯಲಿಲ್ಲ. ಇವರು ಕಾರ್ಮಿಕ ಅಧಿಕಾರಿಗಳ ಮಾತಿಗೂ ಕಿಮ್ಮತ್ತು ನೀಡುತ್ತಿಲ್ಲ ಎಂದರೆ ನಮಗೆ ಹೇಗೆ ಕೊಡುತ್ತಾರೆ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ನಾವು ಕೆಲಸಗಾರರು ಸರ್‌.ಜಿಇ ಕಂಪನಿಯವರು ಹೇಳಿದಂತೆ ನಾವು ಕೆಲಸ ಮಾಡುತ್ತಿದ್ದೇವೆ ಎನ್ನುವುದನ್ನು ಬಿಟ್ಟರೆ ಮತ್ತೇನು ಹೇಳಲು ಸುರಕ್ಷತಾ ಸಿಬ್ಬಂದಿ ಹಿಂಜರಿಯುತ್ತಿರುವದು ಕಂಡು ಬಂತು.

ಕಾರ್ಮಿಕ ಮುಖಂಡರಾದ ಸತ್ಯನಾರಾಯಣ ಜೋಷಿ, ಮಹಾದೇವ ಮಾನಕರ್‌, ಭೀಮರಾಯ ಸಿರಗೊಂಡ, ದಾವೂದ್‌ ಹುಸೇನ್‌, ಜಿ.ರಮೇಶ, ಶರಣು ಪಾಟೀಲ, ಸುಧಾಕರ, ವಿರೇಂದ್ರ, ಸೂರ್ಯಕಾಂತ ಕಲಾಲ, ನಿಂಗಣ್ಣ ಕಾರೊಳ್ಳಿ, ಸ್ಟಾನಿಲಿ, ಜಾನ್‌, ಮಹೇಶ ಹೀರಾಳ ಹಾಗೂ ಇನ್ನಿತರರ ಕಾರ್ಯಕರ್ತರು ಹಾಜರಿದ್ದರು. 

ಯಾವುದೇ ಮುನ್ಸೂಚನೆಯಿಲ್ಲದೇ ಕಾರ್ಖಾನೆ ಆಡಳಿತ ಮಂಡಳಿ ಮುಖ್ಯ ದ್ವಾರ ಬಂದ್‌ ಮಾಡುವ ಕ್ರಮ ಕೈಗೊಂಡಿರುವುದರಿಂದ ಕಾರ್ಮಿಕರು ಕಂಗಾಲಾಗಿದ್ದಾರೆ. ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ ವಿಚಾರಣೆ ನಡೆಯುತ್ತಿದ್ದರೂ, ಒಮ್ಮಿಂದೊಮ್ಮೆಲೆ ಈ ರೀತಿ ಮಾಡಿರುವ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು.ಅಲ್ಲದೇ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು.
ಸತ್ಯನಾರಾಯಣ ಜೋಷಿ, ಜಿಇ ಕಾರ್ಮಿಕ ಮುಖಂಡ

ಮುನ್ಸೂಚನೆಯಿಲ್ಲದೇ ಹಾಗೂ ಕಾರ್ಮಿಕ ಇಲಾಖೆಗೆ ಅರ್ಜಿ ಸಲ್ಲಿಸದೆ ಕಾರ್ಖಾನೆ ಗೇಟ್‌ ಬಂದ್‌ ಮಾಡಿರುವುದು ಕಾನೂನು ಬಾಹಿರ ಕ್ರಮ. ಈಗಾಗಲೇ ಕಾರ್ಮಿಕ ಆಯುಕ್ತರ ಬಳಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಈ ರೀತಿ ಕ್ರಮ ಕೈಗೊಂಡಿರುವುದು ಸರಿಯಲ್ಲ. ಈಗಾಗಲೇ ಜಿಲ್ಲಾ ಕಾರ್ಮಿಕ ಆಯುಕ್ತರ ಆದೇಶದ ಮೇರೆಗೆ ನಾವು ಬೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಮೇ 21ರಂದು ಆಯುಕ್ತರು ಕಾರ್ಮಿಕ ಮುಖಂಡರಿಗೆ ಹಾಗೂ ಕಂಪನಿ ಆಡಳಿತ ಮಂಡಳಿ ಸಭೆ ಕರೆಯಲಾಗಿದೆ.
ಶ್ರೀಹರಿ ದೇಶಪಾಂಡೆ,ಜಿಲ್ಲಾ ಕಾರ್ಮಿಕ ಅಧಿಕಾರಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.