ಕಾರ್ಯಕರ್ತೆಯರ ಜೀವನ ಬೀದಿಗೆ

ಹೊಸ ಶಿಕ್ಷಣ ನೀತಿಯಲ್ಲಿ ಅಂಗನವಾಡಿ ಬಗ್ಗೆ ಸ್ಪಷ್ಟತೆ ಇಲ್ಲ

Team Udayavani, Oct 4, 2020, 3:41 PM IST

ಕಾರ್ಯಕರ್ತೆಯರ ಜೀವನ ಬೀದಿಗೆ

ಕಲಬುರಗಿ: ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯ ಕರಡು ನೀಡಿ ಚರ್ಚಿಸದೇ ಏಕರೂಪದಲ್ಲಿ ಜಾರಿಗೆ ತರಲಾಗುತ್ತಿದ್ದು, ಇದರಿಂದ ಅಂಗನವಾಡಿ ಸೇರಿದಂತೆ ಲಕ್ಷಾಂತರ ಕಾರ್ಯಕರ್ತೆಯರ ಜೀವನ ಬೀದಿಗೆ ಬರಲಿದೆ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)ದ ರಾಜ್ಯಾಧ್ಯಕ್ಷೆ ಎಸ್‌. ವರಲಕ್ಷ್ಮೀ ಆತಂಕ ವ್ಯಕ್ತಪಡಿಸಿದರು.

ನಗರದ ಹೈದ್ರಾಬಾದ್‌ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ರಾಜ್ಯ ಅಂಗನವಾಡಿ ನೌಕರರ ಸಂಘ, ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಹಾಗೂ ಭಾರತ ವಿದ್ಯಾರ್ಥಿ ಫೆಡರೇಷನ್‌ ಆಶ್ರಯದಲ್ಲಿ ಆಯೋಜಿಸಲಾಗಿದ್ದ “ಶಾಲಾ ಪೂರ್ವ ಶಿಕ್ಷಣದ ಕುರಿತು ಹೊಸ ಶಿಕ್ಷಣ ನೀತಿ ಹೇಳುವುದೇನು’ ವಿಷಯದ ದುಂಡು ಮೇಜಿನ ಸಭೆಯಲ್ಲಿ ಅವರು ಮಾತನಾಡಿದರು.

ಹೊಸ ಶಿಕ್ಷಣ ನೀತಿ ಅನ್ವಯ ಬಿಸಿಯೂಟವನ್ನು ಖಾಸಗಿ ಧಾರ್ಮಿಕ ಸಂಸ್ಥೆಗಳಿಗೆ ನೀಡಿ, ಅಂಗನವಾಡಿಗಳನ್ನೂ ಮುಚ್ಚುವ ಸ್ಪಷ್ಟ ಉದ್ದೇಶ ಇದರಲ್ಲಿದೆ. ಇದರಿಂದ ದೇಶದ 28 ಲಕ್ಷಅಂಗನವಾಡಿ ಕಾರ್ಯಕರ್ತೆಯರು ಹಾಗೂ 26 ಲಕ್ಷ ಬಿಸಿಯೂಟ ನೌಕರರ ಬದುಕು ಬೀದಿಗೆ ಬೀಳುತ್ತದೆ ಎಂದರು.

ಅಸಾಂವಿಧಾನಿಕ ಮಾರ್ಗದ ಮೂಲಕ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತಿದೆ. ಹೊಸ ಕರಡು ಬಗ್ಗೆ ಆರೋಗ್ಯಕರ ಚರ್ಚೆಯೇ ಮಾಡಿಲ್ಲ. ಈ ನೀತಿಯಲ್ಲಿ ಕಾರ್ಯಕರ್ತೆಯರಿಗೆ ತರಬೇತಿ ನೀಡಿ ಅವರ ಕೌಶಲ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಇದು ಸರಿಯಾದ ಆಯ್ಕೆಯಲ್ಲ. ಈಗ ಇರುವ ಕಾರ್ಯಕರ್ತೆಯರನ್ನು ಖಾಯಂ ಆಗಿ ಉಳಿಸಿಕೊಂಡು, ಮುಂದಿನ ನೇಮಕಾತಿಗಳಲ್ಲಿ ಮಾತ್ರ ಶಿಕ್ಷಣ- ಕೌಶಲದ ನಿಯಮ ಅನುಸರಿಸಬೇಕೆಂದು ಎಂದು ಆಗ್ರಹಿಸಿದರು.

ಕೆಂಪು ಬಾವುಟ ಹಿಡಿದು ಹೋರಾಟ ಮಾಡುವ ನಾವು ಕೂಡ ಈಗ ಅಂಗನವಾಡಿಯಲ್ಲಿ ಸೀಮಂತ ಮಾಡುವ ಸ್ಥಿತಿ ಬಂದಿದೆ. ಹೊಸ ಶಿಕ್ಷಣ ನೀತಿಯಲ್ಲಿ ಆರ್‌ಎಸ್‌ಎಸ್‌, ಹಿಂದೂವಾದದ ಆಶಯಗಳಿವೆ.ನಾವೇನು ಉದ್ದೇಶ ಪೂರ್ವಕವಾಗಿ ಇದನ್ನು ವಿರೋಧಿಸುತ್ತಿಲ್ಲ. ಆದರೆ, ಚರ್ಚೆ ಇಲ್ಲದೇ ಜಾರಿಗೆ ತಂದ ನೀತಿ ದೇಶವನ್ನು ಹಾಳು ಮಾಡುತ್ತದೆ ಎಂದು ಹೇಳಿದರು.

ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಪ್ಪಗೆರೆಸೋಮಶೇಖರ ಮಾತನಾಡಿ, ಸದ್ಯ ಹೊಸ ಶಿಕ್ಷಣ  ನೀತಿಯ ಆಯಾಮಗಳನ್ನು ಪರಾಮರ್ಶಿಸಬೇಕಿದೆ. ನಮ್ಮ ಸಾಂವಿಧಾನಿಕ ಆಶಯಗಳಾದ ಸಮಾನತೆ, ಜಾತ್ಯತೀತ ನಿಲುವುಗಳನ್ನು ಇದು ಒಳಗೊಂಡಿದೆಯೇ ಎಂಬ ಬಗ್ಗೆಯೂ ಚರ್ಚೆ ಅಗತ್ಯವಿದೆ. ಗ್ರಾಮೀಣ ಬಡ ಮಕ್ಕಳನ್ನು ಪೌಷ್ಟಿಕವಾಗಿ ಬೆಳೆಸುವ ಜತೆಗೆ, ಶಿಕ್ಷಣಕ್ಕೆ ಅಣಿ ಮಾಡಬೇಕು ಎಂಬ ಉದ್ದೇಶದಿಂದ ಅಂಗನವಾಡಿಗಳನ್ನು ಆರಂಭವಾಗಿವೆ. ಆದರೆ, ಇವುಗಳ ಉಳಿವಿನ ಬಗ್ಗೆ ಹೊಸ ಶಿಕ್ಷಣ ನೀತಿಯಲ್ಲಿ ಸ್ಪಷ್ಟತೆ ಇಲ್ಲ ಎಂದು ತಿಳಿಸಿದರು.

“ಯಾವುದೇ ಸರ್ಕಾರ ಒಂದು ನೀತಿಯನ್ನು ಜಾರಿಗೆ ತರುವಾಗ ಸಾಂವಿಧಾನಿಕ ಹಾಗೂ ಪ್ರಜಾಸತ್ತಾತ್ಮಕ ಅಂಶಗಳನ್ನು ಪರಿಗಣಿಸಬೇಕು. ದೇಶದ ಎಲ್ಲ ಪ್ರಾದೇಶಿಕ ಭಾಷೆಗಳಲ್ಲೂ ನೀತಿಯನ್ನು ಪ್ರಕಟಿಸಿ ಜನಸಮುದಾಯದಲ್ಲಿ ಚರ್ಚೆಗೆ ಇಡಬೇಕು. ಸಾಧಕ-ಬಾಧಕ ಚರ್ಚೆಗಳ ಬಳಿಕ ಸಾಂವಿಧಾನಿಕ ಪದ್ಧತಿಯಲ್ಲೇ ಜಾರಿಗೆ ತರಬೇಕು. ಆದರೆ, ಕೇಂದ್ರವು ಅನುಷ್ಠಾನಗೊಳಿಸುತ್ತಿರುವ ಹೊಸ ಶಿಕ್ಷಣ ನೀತಿ ಈ ಆರೋಗ್ಯಕರ ಚರ್ಚೆಯನ್ನೇ ಒಳಗೊಂಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಕೇಂದ್ರೀಯ ವಿಶ್ವವಿದ್ಯಾಲಯದ ಸಾರ್ವಜನಿಕ ಆಡಳಿತ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಕಿರಣ ಗಾಜನೂರ ಸಭೆ ಉದ್ಘಾಟಿಸಿದರು. ಎಸ್‌ಎಫ್‌ಐ ರಾಜ್ಯ ಘಟಕದ ಅಧ್ಯಕ್ಷ ಅಮರೇಶ ಕಡಗದೆ, ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷೆ ಗೌರಮ್ಮ ಪಾಟೀಲ, ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಶಾಂತಾ ಘಂಟೆ, ಸಿದ್ಧಲಿಂಗ ಪಾಳಾ, ಸುನಂದಾ, ಸಿದ್ದಮ್ಮ ಇದ್ದರು.

ಹೊಸ ಶಿಕ್ಷಣ ನೀತಿಯಲ್ಲಿ ಪ್ರತಿ 5ರಿಂದ 10 ಕಿ.ಮೀ. ವ್ಯಾಪ್ತಿಯಲ್ಲಿ ಕೇಂದ್ರೀಕೃತ ಶಾಲಾ ವ್ಯವಸ್ಥೆ ತರುವುದಾಗಿ ಹೇಳಲಾಗಿದೆ.ಇದರಿಂದ ಶಾಲಾ ವ್ಯವಸ್ಥೆ ಕೇಂದ್ರೀಕರಣಗೊಳ್ಳುತ್ತದೆ. ಹೀಗಾಗಿ  ಮುಂದಿನ ದಿನಗಳಲ್ಲಿ ಅಂಗನವಾಡಿಗಳು ಉಳಿಯುತ್ತವೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. -ಅಪ್ಪಗೆರೆ ಸೋಮಶೇಖರ, ಸಹಾಯಕ ಪ್ರಾಧ್ಯಾಪಕರು, ಕೇಂದ್ರೀಯ ವಿಶ್ವವಿದ್ಯಾಲಯ

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.