ನಾಳೆ ಕೃಷ್ಣಾ ಮೇಲ್ದಂಡೆ ಯೋಜನೆನೀರಾವರಿ ಸಲಹಾ ಸಮಿತಿ ಸಭೆ


Team Udayavani, Jul 16, 2018, 10:18 AM IST

gul-7.gif

ನಾರಾಯಣಪುರ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಆಲಮಟ್ಟಿ , ನಾರಾಯಣಪುರ ಜಲಾಶಯಗಳ ಕಾಲುವೆ ಜಾಲಗಳು ಸೇರಿದಂತೆ ಇತರೆ ಏತ ನೀರಾವರಿ ಯೋಜನೆಗಳ ವ್ಯಾಪ್ತಿಯ ಪ್ರಸ್ತುತ ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರು ಹರಿಸುವ ಕುರಿತು ನಿರ್ಣಯ ಕೈಗೊಳ್ಳುವ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆ ಜುಲೈ 17ರಂದು ಆಲಮಟ್ಟಿಯ ಕೆಬಿಜೆಎನ್ನೆಲ್‌ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ ಎಂದು ಅಣೆಕಟ್ಟು ಗೇಟ್ಸ್‌ ಉಪವಿಭಾಗದ ಎಇಇ ಆರ್‌.ಎಲ್‌. ಹಳ್ಳೂರ ತಿಳಿಸಿದ್ದಾರೆ.

ಆಲಮಟ್ಟಿ ಜಲಾಶಯ ಭರ್ತಿಯಾಗಲು ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆಗಳಿಗೆ ಕಾಲುವೆ ನೀರನ್ನು ನೆಚ್ಚಿಕೊಂಡಿರುವ ಅಚ್ಚುಕಟ್ಟು ಪ್ರದೇಶದ ರೈತರಿಗೆ ಬಹು ನಿರೀಕ್ಷೆಯ ನೀರಾವರಿ ಸಲಹಾ ಸಮಿತಿ ಸಭೆ ಆಶಾಭಾವನೆ ಮೂಡಿದೆ. ಮಂಗಳವಾರ ನಡೆಯುವ ನೀರಾವರಿ ಸಲಹಾ ಸಮಿತಿ ಸಭೆ ಅಧ್ಯಕ್ಷತೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ವಹಿಸಲಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಬರುವ ರಾಯಚೂರು, ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ನೀರಾವರಿ ಸಲಹಾ ಸಮಿತಿ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು ಸೇರಿದಂತೆ ಆಲಮಟ್ಟಿ ಲಾಲ ಬಹದ್ದೂರ ಶಾಸ್ತ್ರೀ ಜಲಾಶಯ, ನಾರಾಯಣಪುರ ಬಸವಸಾಗರ ಜಲಾಶಯ ಆಣೆಕಟ್ಟು ವಲಯದಡಿ ಬರುವ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಉಭಯ ಜಲಾಶಯದಲ್ಲಿ ಸಂಗ್ರಹವಿರುವ ನೀರಿನ ಪ್ರಮಾಣ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ.

ಆಲಮಟ್ಟಿ ಜಲಾಶಯ ಭರ್ತಿಯತ್ತ: ಮಹಾರಾಷ್ಟ್ರ ಘಟ್ಟ ಪ್ರದೇಶಗಳಲ್ಲಿ ಧಾರಾಕಾರವಾಗಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಿರೀಕ್ಷೆಯಂತೆ ಕೃಷ್ಣಾ ನದಿಗೆ ಪ್ರವಾಹ ಉಂಟಾಗಿದ್ದು, ಪ್ರಸ್ತುತ ಆಲಮಟ್ಟಿ ಲಾಲ ಬಹದ್ದೂರ ಶಾಸ್ತ್ರೀ ಜಲಾಶಯಕ್ಕೆ ಒಂದು ಲಕ್ಷ ಕ್ಯೂಸೆಕ್‌ ನಷ್ಟು ಭಾರೀ ಪ್ರಮಾಣದ ನೀರು (ಒಳಹರಿವು) ಹರಿದು ಬರುತ್ತಿದೆ. ಇದರಿಂದ ಜಲಾಶಯದಲ್ಲಿ ನೀರಿನ ಸಂಗ್ರಹದಲ್ಲಿ ಗಣನೀಯವಾಗಿ ಏರಿಕೆಯಾಗಿದೆ.

ಕೆಬಿಜೆಎನ್ನೆಲ್‌ ನೀರಾವರಿ ಅಧಿಕಾರಿಗಳ ಮಾಹಿತಿಯಂತೆ ಆಲಮಟ್ಟಿ ಆಣೆಕಟ್ಟು ಭರ್ತಿಗೆ ಕ್ಷಣ ಗಣನೆ ಶುರುವಾಗಿದೆ. ಪ್ರಸ್ತುತ ಆಲಮಟ್ಟಿ ಜಲಾಶಯದ ಗರಿಷ್ಠ ಮಟ್ಟ 519.6 ಮೀಟರ್‌ ಇದ್ದು, ರವಿವಾರ ಬೆಳಗಿನ ಮಾಹಿತಿಯಂತೆ 517.40 ಮೀಟರ್‌ ತಲುಪಿದೆ. ಜಲಾಶಯ ಭರ್ತಿಗೆ ಕೇವಲ ಎರಡು ಮೀಟರ್‌ ಬಾಕಿ ಇರುವುದರಿಂದ ಒಳಹರಿವಿನ ಪ್ರಮಾಣ ಹೀಗೆ ನಿರಂತರವಾದರೆ ಜಲಾಶಯ ಗರಿಷ್ಠಮಟ್ಟ ಕಾಯ್ದುಕೊಂಡು ಹೆಚ್ಚುವರಿಯಾಗಿ ಬರುವ ನೀರನ್ನು ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಹರಿಬಿಡಲಿದ್ದಾರೆ. ಪ್ರಸ್ತುತ ಬಸವಸಾಗರ ಜಲಾಶಯದಲ್ಲಿ 492.25 ಮೀಟರ್‌ ಗರಿಷ್ಠ ಸಂಗ್ರಹವಿದ್ದು, ರವಿವಾರ 488.85 ಮೀಟರ್‌ನಷ್ಟು ನೀರು ಸಂಗ್ರಹವಿದೆ.

ನದಿ ತೀರದ ಜನರಿಗೆ ಎಚ್ಚರಿಕೆ: ಬಸವಸಾಗರ ಜಲಾಶಯಕ್ಕೆ ಆಲಮಟ್ಟಿ ಜಲಾಶಯದಿಂದ ಯಾವುದೇ ಸಂದರ್ಭದಲ್ಲಿಯೂ ಹೆಚ್ಚುವರಿ ನೀರು ಹರಿದುಬರುವ ಸಾಧ್ಯತೆಗಳಿವೆ. ಇದರಿಂದ ನಾರಾಯಣಪುರ ಜಲಾಶಯದಲ್ಲಿ 488.85 ಮೀಟರ್‌ ನಷ್ಟು ನೀರು ಇದ್ದು, ಯಾವುದೇ ವೇಳೆ ಭರ್ತಿಯಾಗುವ
ಸಾಧ್ಯತೆ ಇರುವುದರಿಂದ ಆಣೆಕಟ್ಟಿಗೆ ಬರುವ ಹೆಚ್ಚುವರಿ ನೀರನ್ನು ಕೃಷ್ಣಾ ನದಿ ತೀರಕ್ಕೆ ಹರಿಬಿಡುವ ಸಾಧ್ಯತೆಗಳಿವೆ.

ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಜನ-ಜಾನುವಾರುಗಳು ಸೇರಿದಂತೆ ಮೀನುಗಾರರು ನದಿಗೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ನದಿ ತೀರದಲ್ಲಿನ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಆಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.