ಸಚಿವ ಡಾ| ಶರಣಪ್ರಕಾಶ ಪಾಟೀಲ ಮನೆಗೆ ಮುತ್ತಿಗೆ
Team Udayavani, Jul 22, 2017, 11:44 AM IST
ಕಲಬುರಗಿ: ಜಿಲ್ಲೆಯಲ್ಲಿ ಕೋಲಿ ಸಮಾಜದ ಯುವಕರನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಮಾಡುವುದು, ಹಲ್ಲೆ ಮಾಡುವುದು
ಹಾಗೂ ಸೇಡಂ ತಾಲೂಕಿನ ಮುಗನೂರು ಘಟನೆಯನ್ನು ಖಂಡಿಸಿ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲರ
ವೆಂಕಟೇಶ್ವರ ನಗರದಲ್ಲಿನ ಮನೆಗೆ ಜಿಲ್ಲಾ ಕೋಲಿ ಸಮಾಜದ ಯುವಕರ ಸಂಘಟನೆಗಳ ಒಕ್ಕೂಟ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.
ಇದೇ ವೇಳೆ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿ, ಕೋಲಿ ಸಮಾಜದ ಯುವಕರು,ಯುವ ರಾಜಕಾರಣಿಗಳನ್ನು ಗುರಿಯಾಗಿಸಿಕೊಂಡು ಸುಳ್ಳು ಪ್ರಕರಣ ದಾಖಲಿಸಿ ರಾಜಕೀಯ ಭವಿಷ್ಯ ಹಾಳು ಮಾಡುವ ವ್ಯವಸ್ಥಿತ ಸಂಚು ನಡೆದಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಈಗಾಗಲೇ ದಾಖಲು ಮಾಡಿರುವ ಪ್ರಕರಣಗಳನ್ನು ವಾಪಸ್ಸು ಪಡೆಯಬೇಕು. ರೌಡಿ ಪಟ್ಟಿಯಲ್ಲಿ ಸೇರಿಸಿರುವ ಸಮಾಜದ ಯುವಕರ ಹೆಸರಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಇದಕ್ಕೂ ಮುನ್ನ ಬೆಳಗ್ಗೆ ಒಕ್ಕೂಟದ ಮುಖಂಡರಾದ ರಾಜೇಂದ್ರ ರಾಜವಾಳ, ದೇವೇಂದ್ರ ಚಿಗರಳ್ಳಿ, ಸೈಬಣ್ಣ ಜಮಾದಾರ
ನೇತೃತ್ವದಲ್ಲಿ ಸಮಾಜದ ಯುವಕರು ಸಚಿವರ ಮನೆಗೆ ಮುತ್ತಿಗೆ ಹಾಕಿ ಸೇಡಂ ತಾಲೂಕಿನಲ್ಲಿ ನಡೆದಿರುವ ಹತ್ಯೆಯನ್ನು ಖಂಡಿಸಿದರು.
ಅಲ್ಲದೆ, ಹತ್ಯೆಗೀಡಾದ ಕುಟುಂಬಕ್ಕೆ ರಕ್ಷಣೆ, ಪರಿಹಾರ ಹಾಗೂ ಸೌಕರ್ಯ ಒದಗಿಸುವಂತೆ ಆಗ್ರಹಿಸಿದರು.
ಈ ವೇಳೆ ದೂರವಾಣಿಯಲ್ಲಿ ಮಾತನಾಡಿದ ಸಚಿವರು, ಬೆಂಗಳೂರಿನಿಂದ ಕಲಬುರಗಿಗೆ ಬಂದ ಬಳಿಕ ಈ ಕುರಿತು ಒಕ್ಕೂಟದ
ಮುಖಂಡರೊಂದಿಗೆ ಚರ್ಚೆ ಮಾಡಿ ಪರಿಹಾರಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದ ಬಳಿಕ ಮುತ್ತಿಗೆ ಕೈ
ಬಿಡಲಾಯಿತು ಎಂದು ಒಕ್ಕೂಟದ ರಾಜೇಂದ್ರ ರಾಜವಾಳ ತಿಳಿಸಿದರು.
ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಧರಣಿಯಲ್ಲಿ ಕೋಲಿ ಸಮಾಜದ ಮುಖಂಡ ಹಾಗೂ ಪಾಲಿಕೆಯ ಮಾಜಿ ಸದಸ್ಯ ರಾಜಗೋಪಾಲರೆಡ್ಡಿ ಮುದಿರಾಜ್, ಜಿಪಂ ಮಾಜಿ ಸದಸ್ಯೆ ಶೋಭಾ ಬಾಣಿ ಮಾತನಾಡಿ, ಜಿಲ್ಲೆಯಲ್ಲಿ ಈಚೆಗೆ ಕೋಲಿ ಸಮಾಜದ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.
ಧರಣಿಯಲ್ಲಿ ಶಿವಲಿಂಗಪ್ಪ ಕಿನ್ನೂರ್, ಶರಣಪ್ಪ ತಳವಾರ, ಶಂಕರ ಕಟ್ಟಿಸಂಗಾವಿ, ರೇವಣಸಿದ್ದಪ್ಪ ಕಮಾನಮನಿ, ಸೀತಾರಾಮ
ಜಮಾದಾರ, ಮಹಾಂತೇಶ ಹರವಾಳ, ರಾಜೇಂದ್ರ ರಾಜವಾಳ, ದೇವೇಂದ್ರ ಚಿಗರಳ್ಳಿ, ಪಿತಾಂಬರ ಕೋಲಿ, ಸೈಬಣ್ಣ ಜಮಾದಾರ,
ಮಡಿವಾಳಪ್ಪ ಗೋಳಾ, ಅನೀಲ ವಚ್ಚಾ, ಹುಲಿಕಂಠರಾಯ ಕೋಲಿ, ಚಂದ್ರಕಾಂತ ಗಂಗಾರ, ರಾಚಣ್ಣ ಯಡ್ರಾಮಿ, ಗುರು
ನಾಟೀಕಾರ, ಶಶಿಕಾಂತ ಕೊಳ್ಳಿ, ಗೋಪಾಲ ಮಡಗ, ಮೌನೇಶ ಆಂದೋಲ. ಶ್ರೀಕಾಂತ ಆಲೂರು, ಸಾಯಿಬಣ್ಣ ಹರಸೂರ, ಕುಮಾರ
ಯಾದಗಿರಿ, ಶರಣು ಜುಮ್ಮನಹಳ್ಳಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ