ಮೇ 4 ರ ನಂತರವಷ್ಟೇ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಸಾಧ್ಯ: ಲಕ್ಷ್ಮಣ ಸವದಿ
Team Udayavani, Apr 6, 2021, 11:37 AM IST
ಕಲಬುರಗಿ: ಸಾರಿಗೆ ನೌಕರರ ಎಂಟು ಬೇಡಿಕೆಯನ್ನು ಈಡೇರಿಸಿದ್ದವೆ. ಇನ್ನೂ ಒಂದು ಬಾಕಿ ಇರುವ ವೇತನ ಹೆಚ್ಚಳವನ್ನೂ ಸಹ ಮೇ 4ರ ನಂತರ ಈಡೇರಿಕೆಗೆ ಮನವರಿಕೆ ಮಾಡಿ ಕೊಡಲಾಗಿದೆ ಎಂದು ಉಪಮುಖ್ಯಮಂತ್ರಿಯಾಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಬಸವಕಲ್ಯಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ವಿಮಾನದ ಮೂಲಕ ಬಂದಿಳಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಇದನ್ನೂ ಓದಿ:ನಾಳೆ ಬಸ್ ಇಲ್ಲ ? ಸರಕಾರದ ಮನವೊಲಿಕೆಗೆ ಬಗ್ಗದ ಸಾರಿಗೆ ನೌಕರರು
ಈಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬೇಡಿಕೆ ಈಡೇರಿಸಲಿಕ್ಕಾಗುತ್ತಿಲ್ಲ. ಹೀಗಾಗಿ ಚುನಾವಣಾ ಫಲಿತಾಂಶ ನಂತರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಲಾಗಿದೆ ಎಂದು ವಿವರಣೆ ನೀಡಿದರು.
ಕೋವಿಡ್-19 ಸಂಧರ್ಭದಲ್ಲಿ ಬಡವರಿಗೆ ಮಧ್ಯಮ ವರ್ಗದವರಿಗೆ ಶಾಲಾ ಮಕ್ಕಳಿಗೆ ಸಾಕಷ್ಟು ತೊಂದರೆ ಆಗುತ್ತದೆ ಎಂಬುದನ್ನು ನೌಕರರು ಅರ್ಥ ಮಾಡಿಕೊಳ್ಳಬೇಕೆಂದರು.
ಇದನ್ನೂ ಓದಿ: ತಮಿಳುನಾಡು ಚುನಾವಣೆ: ಮತದಾರರ ಪಟ್ಟಿಯಲ್ಲಿಲ್ಲ ‘ಚಿನ್ನಮ್ಮ’ನ ಹೆಸರು!
ಕೋಡಿಹಳ್ಳಿ ಚಂದ್ರಶೇಖರ್ ಮೇಧಾವಿ, ಬಹಳ ಬುದ್ದಿವಂತರು. ಅವರ ಬುದ್ದಿ ನಮ್ಮ ಸರ್ಕಾರಕ್ಕೆ ಇಲ್ಲಾ ಅಂತಾ ಅಂದುಕೊಳ್ಳತ್ತೇನೆ. ಅನಾವಶ್ಯಕವಾಗಿ ಸರ್ಕಾರ ಮತ್ತು ನೌಕರರ ಮಧ್ಯೆ ಗೊಂದಲ ಸೃಷ್ಟಿ ಮಾಡುವುದಕ್ಕೆ ಮುಂದಾಗಿದ್ದಾರೆ. ಒಂದು ವೇಳೆ ಬಸ್ ಸಂಚಾರ ಬಂದ್ ಮಾಡಿದರೆ ಅನಿವಾರ್ಯವಾಗಿ ಖಾಸಗಿ ವಾಹನಗಳನ್ನ ತಂದು ಓಡಿಸುತ್ತೇವೆ ಎಂದು ಸಚಿವ ಸವದಿ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು