ವೃದ್ಧಾಪ್ಯ ಮಾಶಾಸನಕ್ಕಾಗಿ ಅಲೆದಾಟ ತಪ್ಪಿಸಲು ಹೊಸ ಕ್ರಮ ಘೋಷಿಸಿದ ಆರ್ ಅಶೋಕ್
Team Udayavani, Feb 28, 2020, 3:19 PM IST
ಕಲಬುರಗಿ: ವೃದ್ಧಾಪ್ಯ ಮಾಶಾಸನಕ್ಕಾಗಿ ಇನ್ಮು ಮುಂದೆ ಕೈಯಲ್ಲಿ ಅರ್ಜಿ ಹಿಡಿದು ತಹಶೀಲ್ದಾರ್ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಹೊಸ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು.
ನಗರದ ನೂತನ ಮಹಾವಿದ್ಯಾಲಯದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ಬೃಹತ್ ಉದ್ಯೋಗ ಮೇಳ ಉದ್ದೇಶಿಸಿ ಮಾತನಾಡಿದರು.
ಆಧಾರ ಕಾರ್ಡ್ ನಲ್ಲಿ 60 ವರ್ಷ ವಯಸ್ಸಾಗುತ್ತಿದ್ದಂತೆ ಅರ್ಜಿಯನ್ನೇ ಅವರ ಮನೆಗೆ ಕಳುಹಿಸಿ ತಹಶೀಲ್ದಾರ್ ಕಚೇರಿಗೆ ತರಿಸಿಕೊಂಡು ಫೋಟೋ ತೆಗೆಯಿಸಿ ವೃದ್ಧಾಪ್ಯ ಮಾಸಾಶನ ಮಂಜೂರಾತಿ ನೀಡಲಾಗುವುದು. ಬಹು ಮುಖ್ಯವಾಗಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲಾಗುವುದು ಸಚಿವರು ಸ್ಪಷ್ಟಪಡಿಸಿದರು.
ವೃದ್ಧಾಪ್ಯ ಮಾಸಾಶನದ ಮಂಜೂರಾತಿಯ ಅರ್ಜಿಯನ್ನು ಮನೆಗೆ ತಲುಪಿಸುವ ಯೋಜನೆ ಮಾಸಾಂತ್ಯದೊಳಗೆ ಕಾರ್ಯಾರಂಭ ಗೊಳಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲಾಧಿಕಾರಿ, ಸಹಾಯಕ ಆಯುಕ್ತ ಹಾಗೂ ತಹಶೀಲ್ದಾರರರು ಪ್ರತಿ ತಿಂಗಳು ಗ್ರಾಮ ಪಂಚಾಯಿತಿಯಲ್ಲಿ ಒಂದು ದಿನವೀಡಿ ವಾಸ್ತವ್ಯ ಹೂಡಲು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಆಡಳಿತ ಗ್ರಾಮೀಣ ಭಾಗಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಡಾ. ಉಮೇಶ್ ಜಾಧವ್, ಶಾಸಕರಾದ ರಾಜಕುಮಾರ ಪಾಟೀಲ್ ತೇಲ್ಕೂರ, ಬಸವರಾಜ ಮತ್ತಿಮಡು, ರಾಜುಗೌಡ, ಬಿ.ಜಿ. ಪಾಟೀಲ್, ಎಂ.ಸಿ. ಮನಗೂಳಿ, ನಾಡಿನ ವಿವಿಧ ಮಠಾಧೀಶರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ