ಡ್ರಗ್‌ ಮಾಫಿಯಾ ಹತ್ತಿಕ್ಕಲು ಎಲ್ಲೆಡೆ ದಾಳಿ: ಜಾಧವ್


Team Udayavani, Sep 14, 2020, 4:31 PM IST

ಡ್ರಗ್‌ ಮಾಫಿಯಾ ಹತ್ತಿಕ್ಕಲು ಎಲ್ಲೆಡೆ ದಾಳಿ: ಜಾಧವ್

ಚಿಂಚೋಳಿ: ಡ್ರಗ್ಸ್‌ ಮಾಫಿಯಾ ಮತ್ತು ಗಾಂಜಾ ಮಾದಕ ವಸ್ತುಗಳ ಅಕ್ರಮ ದಂಧೆ ಮೊದಲಿನ ಕಾಂಗ್ರೆಸ್‌ ಪಕ್ಷ ಆಡಳಿತದಲ್ಲಿದ್ದಾಗಲೂ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದವು. ಆದರೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಡ್ರಗ್‌ ಮಾಫಿಯಾ ಹತ್ತಿಕ್ಕಲು ಎಲ್ಲ ಕಡೆ ದಾಳಿ ನಡೆಸಲಾಗುತ್ತಿದೆ ಎಂದು ಶಾಸಕ ಡಾ| ಅವಿನಾಶ ಜಾಧವ್‌ ಹೇಳಿದರು.

ಚಂದ್ರಂಪಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಯಾಕೆ ಇಂತಹ ಅಕ್ರಮ ದಂಧೆ ಹತ್ತಿಕ್ಕಲಿಲ್ಲ. ಗೃಹ ಸಚಿವ ಬಸವರಾಜ ಬೊಮ್ಮಯಿ ಅವರು ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಯದಂತೆ ಕಾನೂನು ಕ್ರಮ ಕೈಗೊಂಡಿದ್ದರಿಂದ ರಾಜ್ಯದ ಎಲ್ಲ ಕಡೆ ದಾಳಿ ನಡೆಸಲಾಗುತ್ತಿದೆ. ಡ್ರಗ್ಸ್‌ ಮಾಫಿಯಾದಲ್ಲಿ ಯಾರೇ ಭಾಗಿಯಾಗಿದ್ದರೂ ಸಹಾ, ಅವರ ವಿರುದ್ಧ ರಾಜ್ಯ ಸರಕಾರ ಕಠಿಣ ಕ್ರಮ ಕೈಕೊಳ್ಳುತ್ತದೆ. ಯಾರು ತಪ್ಪು ಮಾಡಿದರು ಅದು ತಪ್ಪೆ. ರಾಜ್ಯ ಸರಕಾರ ಇಂತಹ ಅಕ್ರಮ ದಂಧೆಗಳಿಗೆ ಅವಕಾಶ ಕೊಡುವುದಿಲ್ಲವೆಂದು ಹೇಳಿದರು.

ತಾಲೂಕು ಗಡಿಭಾಗದಲ್ಲಿ ಇರುವುದರಿಂದ ತಾಂಡಾ ಮತ್ತು ಗ್ರಾಮಗಳಲ್ಲಿ ಗಾಂಜಾ ಮತ್ತು ಡ್ರಗ್ಸ್‌ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕಾಗಿದೆ. ಗಾಂಜಾ ಸೇವನೆಯಿಂದ ಮನುಷ್ಯನ ಆರೋಗ್ಯ ಜೊತೆಗೆ ಆತನ ಕುಟುಂಬವುಹಾಳಾಗುತ್ತವೆ ಎಂಬುದರ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಮಾದಕ ದ್ರವ್ಯ ಸೇವನೆ ಮತ್ತು ಗಾಂಜಾ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮ ಪಾತ್ರ ಅತಿ ಮುಖ್ಯವಾಗಿದೆ ಎಂದರು.

ತಾಲೂಕಿನ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಜು.5ರಂದು ಏಕಾಏಕಿ ನದಿಗೆ 20 ಸಾವಿರ ಕ್ಯೂಸೆಕ್‌ ಹರಿದು ಬಿಟ್ಟ ಪರಿಣಾಮವಾಗಿ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿ ಮುಂಗಾರು ಬೆಳೆಗಳಾದ ತೊಗರಿ, ಹೆಸರು, ಉದ್ದು ಇನ್ನಿತರ ಬೆಳೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಕುರಿತು ಕೃಷಿ ಮತ್ತು ಕಂದಾಯ, ತೋಟಗಾರಿಕೆ ಇಲಾಖೆನಡೆಸಿದ ಹಾನಿ ಸಮೀಕ್ಷೆ ವರದಿಯನ್ನು ಸರಕಾರಕ್ಕೆ ನೀಡಲಾಗಿದೆ. ಆದರೂ ಸಹಾ ಸರಕಾರ ಚಿಂಚೋಳಿ ತಾಲೂಕನ್ನು ಪ್ರವಾಹ ಪೀಡಿತ ಪ್ರದೇಶ ಪಟ್ಟಿಯಿಂದ ಕೈ ಬಿಟ್ಟಿರುವ ಕುರಿತು ಕಂದಾಯ ಸಚಿವರನ್ನು ಭೇಟಿಯಾಗಿಚರ್ಚಿಸುತ್ತೇನೆ. ಚಿಂಚೋಳಿ ತಾಲೂಕಿಗೂ ಬೆಳೆಹಾನಿ ಪರಿಹಾರ ಕೊಡಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಬಿಜೆಪಿ ಮುಖಂಡ ಅಜೀತ ಪಾಟೀಲ, ಭೀಮಶೆಟ್ಟಿ ಮುರುಡಾ, ರಾಜೂ ಪವಾರ, ಅಶೋಕ ಚವ್ಹಾಣ, ಪ್ರೇಮಸಿಂಗ ಜಾಧವ್‌, ಭೀಮಶೆಟ್ಟಿ ಮುರುಡಾ, ಶ್ರೀಮಂತ ಕಟ್ಟಿಮನಿ, ರಾಕೇಶ ಗೋಸುಲ ಇದ್ದರು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.