ಲಂಬಾಣಿಗರು ಎಸ್‌ಸಿಗೋ, ಎಸ್‌ಟಿಗೋ ?|ಸಂಸದ ಜಾದವ್ ದ್ವಂದ ನಿಲುವು ಬಯಲಿಗೆಳೆದ ಖರ್ಗೆ

ಶಾಸಕ ಪ್ರಿಯಾಂಕ್ ಫೇಸ್ಬುಕ್ನಲ್ಲಿ ಸಂಸದ ಉಮೇಶ್ ಜಾದವ್  ಪತ್ರ ಪ್ರದರ್ಶನ 

Team Udayavani, Aug 21, 2021, 7:51 PM IST

ertr

ವಾಡಿ: (ಚಿತ್ತಾಪುರ): ರಾಜ್ಯದ ಬಂಜಾರಾ (ಲಂಬಾಣಿ) ಸಮುದಾಯಕ್ಕೆ ಅರಣ್ಯ ಹಕ್ಕು ಸೌಲತ್ತು ಒದಗಿಸಲು ಕೋರಿ ಲಂಬಾಣಿ ಜನಾಂಗವನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಬುರಗಿ ಸಂಸದ ಡಾ.ಉಮೇಶ ಜಾಧವ ಸಲ್ಲಿಸಿದ ಎರಡು ಮನವಿಪತ್ರಗಳನ್ನು ಕಾಂಗ್ರೆಸ್ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ತಮ್ಮ ಫೇಸ್‌ಬುಕ್ನಲ್ಲಿ ಪ್ರದರ್ಶಿಸುವ ಮೂಲಕ ಸಂಸದರ ದ್ವಂದ್ವ ನಿಲುವು ಬಯಲು ಮಾಡಿ ಚರ್ಚೆಗೆ ಗ್ರಾಸವಾಗಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗರು ಕುರುಬ ಹಾಗೂ ಕೋಲಿ ಸಮುದಾಯವನ್ನು ಎಸ್‌ಸಿಗೆ ಸೇರಿಸುವುದಾಗಿ ಭರವಸೆ ನೀಡಿ ಈಗ ಮಾತು ತಪ್ಪಿದ್ದಾರೆ. ಬದಲಾಗಿ ಎಸ್‌ಸಿ ಪಟ್ಟಿಯಲ್ಲಿರುವ ರಾಜ್ಯದ ಬಂಜಾರಾ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ಸಂಸದ ಡಾ.ಉಮೇಶ ಜಾಧವ ತೆರೆಮರೆಯಲ್ಲಿ ಮುಂದಾಗಿದ್ದಾರೆ ಎಂದು ಆರೋಪಿಸಿರುವ ಶಾಸಕ ಖರ್ಗೆ, ರಾಜ್ಯಕ್ಕೆ ಬಂದಾಗ ಬಂಜಾರಾ ಸಮುದಾಯ ಎಸ್‌ಸಿ ಪಟ್ಟಿಯಲ್ಲೇ ಇರಲಿ ಎನ್ನುವ ಸಂಸದರು, ದಿಲ್ಲಿಗೆ ಹೋದಾಗ ಬಂಜಾರಾ ಎಸ್‌ಟಿಗೆ ಸೇರಿಸಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಸಮುದಾಯದ ಧರ್ಮಗುರು ದಿ.ರಾಮರಾವ ಮಹಾರಾಜರನ್ನೇ ದಾರಿ ತಪ್ಪಿಸಿದ್ದಾರೆ. ಸಂಸದ ಜಾಧವ ಅವರ ದ್ವಂದ್ವ ನಿಲುವಿನಿಂದ ಕುರುಬ, ಕೋಲಿ ಹಾಗೂ ಬಂಜಾರಾ, ಈ ಮೂರು ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಅವರದ್ದೇ ಸಮುದಾಯದ ವ್ಯಕ್ತಿಯೊಬ್ಬರು ಬಂಜಾರಾ ಸಮುದಾಯವನ್ನು ಎಸ್‌ಸಿ ಪಟ್ಟಿಯಿಂದ ತೆಗೆದು ಹಾಕುವಂತೆ ಸುಪ್ರೀಂ ಕೋರ್ಟ್ನಲ್ಲಿ ಪಿಐಎಲ್ ದಾಖಲಿಸಿದ್ದರು. ಅಂದು ಆ ಸಮಿತಿ ರಾಜ್ಯ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಳಿತ್ತು. ಸಂಸದ ಡಾ.ಉಮೇಶ ಜಾಧವ ಅವರು ಇದರ ವಿರುದ್ಧ ದನಿ ಎತ್ತುವ ಮೂಲಕ ರಾಜ್ಯದಲ್ಲಿ ಬಂಜಾರಾ ಸಮುದಾಯ ಪರಿಶಿಷ್ಟ ಜಾತಿ ಪಟ್ಟಿಯಲ್ಲೇ ಇರಬೇಕು ಎಂದು ಆಗ್ರಹಿಸಿ ಪತ್ರ ಚಳುವಗೆ ಕರೆ ನೀಡಿದ್ದರು. ಈಗ ರಾಜ್ಯ ಬಂಜಾರಾ ಎಸ್‌ಟಿಗೆ ಸೇರಿಸಬೇಕು ಎಂದು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಬಂಜಾರಾ ಸಮುದಾಯದ ಕುರಿತು ಸಂಸದರು ಒಂದೊಂದು ಕಡೆ ಒಂದೊಂದು ನಿಲುವು ತಾಳುವ ಮೂಲಕ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಇದನ್ನೆಲ್ಲ ಗಮನಿಸಿದರೆ, ಸಂಸದರು ಕೇವಲ ಕೋಲಿ, ಕುರುಬ ಹಾಗೂ ಲಂಬಾಣಿಗಳಿಗೆ ಮಾತ್ರವಲ್ಲದೆ ಅವರ ಧರ್ಮ ಗುರುಗಳಿಗೂ ದಾರಿ ತಪ್ಪಿಸಿರುವುದು ಸ್ಪಷ್ಟವಾಗಿದೆ. ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ಕುರುಬ ಸಮುದಾಯದ ಗೊಂಡ, ರಾಜಗೊಂಡ ಜಾತಿಗಳು ಸೇರಿದಂತೆ ಕುರುಬ ಮತ್ತು ಕೋಲಿ ಸಮುದಾಯವನ್ನು ಎಸ್‌ಸಿಗೆ ಸೇರಿಸಲು ಅಂದಿನ ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು. ಆದರೆ, ಕೇಂದ್ರ ಬಿಜೆಪಿ ಸರ್ಕಾರ ರಾಜ್ಯದ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಈಗ ಎರಡೂ ಕಡೆ ತಮ್ಮದೇ ಸರ್ಕಾರಗಳಿದ್ದರೂ ಇಲ್ಲಿನ ಬಿಜೆಪಿ ಸಂಸದರು ಹಾಗೂ ಶಾಸಕರು ಈ ಕುರಿತು ಯಾವೂದೇ ಮುತುವರ್ಜಿ ವಹಿಸಿಲ್ಲ ಎಂದು ಪ್ರಿಯಾಂಕ್ ಟೀಕಿಸಿದ್ದಾರೆ.

ಸಂಸದ ಡಾ.ಉಮೇಶ ಜಾಧವ ತಾವು ಬಂಜಾರಾ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ಯಾವೂದೇ ಪ್ರಯತ್ನ ಮಾಡಿಲ್ಲ ಎಂದು ಈಗ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂಬುದನ್ನು ಸಾಭೀತು ಮಾಡಲು ಸಂಸದರು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಿಸಿರುವ ಮನವಿಪತ್ರಗಳನ್ನು ಪ್ರದರ್ಶಿಸುವ ಮೂಲಕ ಸಾಕ್ಷಿ ಸಮೇತ ಸಾಮಾಜಿಕ ಜಾಲತಾಣದಲ್ಲಿ ವಿವರಣೆ ನೀಡಿದ್ದೇನೆ. ಆದ್ದರಿಂದ, ಬಂಜಾರಾ ಸಮುದಾಯದ ಮೀಸಲಾತಿ ವಿಚಾರವಾಗಿ ತಮ್ಮ ನಿಲುವು ಎಸ್‌ಸಿಗೋ…? ಅಥವ ಎಸ್‌ಟಿಗೋ…? ಕೂಡಲೇ ಬಹಿರಂಗವಾಗಿ ಸ್ಪಷ್ಟಪಡಿಸಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅವರು ಸಂಸದ ಡಾ.ಉಮೇಶ ಜಾಧವ ಅವರಿಗೆ ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರೀಯೆ ನೀಡಿರುವ ಫೇಸ್‌ಬುಕ್ ಸ್ನೇಹಿತರು, ಬಂಜಾರಾ ಎಸ್‌ಟಿಗೆ ಸೇರಿಸಲು ಜಾಧವ್ ಅವರೇ ಪ್ರಯತ್ನಿಸಿದ್ದು ಒಳ್ಳೆಯದಾಯಿತು ಬಿಡಿ ಸರ್ ನೀವೇಕೆ ಕಾಳಜಿ ತೋರಿಸುತ್ತಿದ್ದೀರಿ ಎಂದು ಸಲಹೆ ನೀಡಿದ್ದಾರೆ. ಇನ್ನೂ ಕೆಲವರು ಅವರ ಹಗಲು ನಾಟಕ ಎಲ್ಲರಿಗೂ ಗೊತ್ತು ಮಾಡಿಸಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲ ಎಸ್‌ಸಿ ಎಡಗೈ ಸಮುದಾಯದ ಎಫ್‌ಬಿ ಸ್ನೇಹಿತರು ಸದಾಶಿವ ಆಯೋಗದ ವರದಿ ಬಗ್ಗೆಯೂ ಬಿಜೆಪಿಗರು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.