ಮೋದಿ ಚೇಲಾಗಳಿಂದ ಸೋಲು ಅಸಾಧ್ಯ


Team Udayavani, Mar 30, 2019, 2:11 PM IST

gul-5

ಸೇಡಂ: ದಿಲ್ಲಿಯಿಂದ ಹಳ್ಳಿವರೆಗೂ ನನ್ನನ್ನು ಸೋಲಿಸಲು ತಂತ್ರ ಹೆಣೆಯಲಾಗುತ್ತಿದೆ. ಮೋದಿ ಹಾಗೂ ಮೋದಿ ಚೇಲಾಗಳಿಂದ ನನ್ನನ್ನು ಸೋಲಿಸುವುದು ಅಸಾಧ್ಯ, ನನ್ನ ಗೆಲುವು ಇಲ್ಲಿನ ಮತದಾರರ ಕೈಯಲ್ಲಿದೆ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದರು.

ಪಟ್ಟಣದ ಕೆ.ಎನ್‌.ಝಡ್‌ ಫಂಕ್ಷನ್‌ ಹಾಲ್‌ ನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಲಬುರಗಿ ಜನತೆ ನೀಡಿದ ಅಧಿಕಾರವನ್ನು ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಬಳಸಿಕೊಂಡಿದ್ದೇನೆ. ಲೋಕಸಭೆಯಲ್ಲಿ ಶಕ್ತಿ ಮೀರಿ ನ್ಯಾಯ ದೊರಕಿಸಿಕೊಡುವಲ್ಲಿ ಶ್ರಮಿಸಿದ್ದೇನೆ. ನನ್ನ ಕ್ಷೇತ್ರದಲ್ಲಿ ನಾನು ಮಾಡಿರುವ ಕೆಲಸಕ್ಕೆ ಮತ ಕೇಳಲು ಬಂದಿದ್ದೇನೆ.

ಬಿಜೆಪಿಯವರು ತಾವು ದೇಶಪ್ರೇಮಿಗಳು ಎಂದು ಬೊಬ್ಬೆ ಹೊಡೆಯುತ್ತಾರೆ, ನಾವೇನು ದೇಶದ್ರೋಹಿಗಳಾ? ದೇಶದ ಮೇಲೆ ಬಿಜೆಪಿಗಿಂತಲೂ ಮೂರು ಪಟ್ಟು ಹೆಚ್ಚು ಪ್ರೇಮ ಕಾಂಗ್ರೆಸ್‌ ಗಿದೆ. ಇಂದಿರಾ ಗಾಂಧಿ , ರಾಜೀವ ಗಾಂಧಿ  ದೇಶಕ್ಕಾಗಿ ತಮ್ಮ ಜೀವವನ್ನೇ ತ್ಯಾಗ ಮಾಡಿದ್ದಾರೆ ಎಂದರು.

ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಒಂದೂ ಕಪ್ಪು ಚುಕ್ಕೆ ಇಲ್ಲದ ಜನನಾಯಕರು. ಸರ್ಕಾರಿ ನೌಕರಿಯಲ್ಲಿದ್ದ ಉಮೇಶ ಜಾಧವ್‌ ಅವರನ್ನು ಕರೆತಂದು ಶಾಸಕರನ್ನಾಗಿ ಮಾಡಿದ್ದು ನಾವು, ಈಗ ಆಮಿಷಕ್ಕೆ ಒಳಗಾಗಿ ಪಕ್ಷ ತೊರೆದಿದ್ದಾರೆ.

ತಮ್ಮನ್ನು ತಾವು ಮಾರಿಕೊಂಡಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆ ನಡೆಯುತ್ತಿದೆ. ಪ್ರಧಾನಿ ಮೋದಿ ಕೇವಲ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಮುಕ್ರಂಖಾನ್‌, ಭಾಗಣ್ಣಗೌಡ ಸಂಕನೂರ, ತಿಪ್ಪಣ್ಣಪ್ಪ ಕಮಕನೂರ, ಶಾಮರಾವ ಪ್ಯಾಟಿ, ಸತೀಶರೆಡ್ಡಿ ಪಾಟೀಲ ರಂಜೋಳ ಇನ್ನಿತರರು ಮಾತನಾಡಿದರು.

ವೇದಿಕೆಯಲ್ಲಿ ಮಹಾಂತಪ್ಪ ಸಂಗಾವಿ, ಬಸವರಾಜ ಭೀಮಳ್ಳಿ, ಚಂದ್ರಿಕಾ ಪರಮೇಶ್ವರ, ನಾಗೇಶ ಕಾಳಾ, ಜಿಂಜಾನಿ ಜಾಗಿರದಾರ, ಕೃಷ್ಣ ಕುಲಕರ್ಣಿ ಇನ್ನಿತರರು ಇದ್ದರು. ನಾಗೇಶ್ವರರಾವ ಮಾಲಿಪಾಟೀಲ ನಿರೂಪಿಸಿದರು, ಸಿದ್ಧು ಬಾನಾರ ಸ್ವಾಗತಿಸಿದರು.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.