ಕಲಬುರಗಿಗೆ ಮೋದಿ ಸರ್ಕಾರ ಕೊಡುಗೆ ಅಪಾರ: ಜಾಧವ್‌


Team Udayavani, Jun 6, 2020, 6:04 AM IST

ಕಲಬುರಗಿಗೆ ಮೋದಿ ಸರ್ಕಾರ ಕೊಡುಗೆ ಅಪಾರ: ಜಾಧವ್‌

ಕಲಬುರಗಿ: ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನವಾದ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಅನುದಾನ ನೀಡಿದ್ದು, ಜಿಲ್ಲೆಯ ಪ್ರಗತಿಗೆ ಕೇಂದ್ರ ಸರ್ಕಾರದ ಕೊಡುಗೆ ಅಪಾರವಾಗಿದೆ ಎಂದು ಸಂಸದ ಡಾ.ಉಮೇಶ ಜಾಧವ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್‌ ರದ್ದೇವಾಡಗಿ ಹೇಳಿದರು.

ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಅವರು ಪ್ರಧಾನಿಯಾದ ನಂತರ ಜಿಲ್ಲೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜಿಲ್ಲೆಯಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 210 ಕಿಮೀ ಪಿಎಂಜಿಎಸ್‌ವೈ ರಸ್ತೆಗಳ ಕಾಮಗಾರಿ ಮಂಜೂರಾಗಿದೆ. ಇಎಸ್‌ಐ ಆಸ್ಪತ್ರೆಯಲ್ಲಿ ಮೆಡಿಕಲ್‌ ರೆಕಾರ್ಡ್‌ಸ್‌ ಇನ್‌ ಡಿಪ್ಲೋಮಾ, ಒಟಿ ಡಿಪ್ಲೋಮಾ ಕೋರ್ಸ್‌ ಆರಂಭಿಸಲಾಗಿದೆ. ಅಲ್ಲದೇ, ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ಒದಗಿಸಲಾಗುತ್ತಿದೆ. ರಕ್ತ ಭಂಡಾರ ಕೇಂದ್ರ ಆರಂಭಿಸಲಾಗಿದೆ. ಈ ಹಿಂದೆ ನೂರು ರೂ.ಗಳಿದ್ದ ಚಿಕಿತ್ಸೆ ವೆಚ್ಚವನ್ನು 25 ರೂ.ಗಳಿಗೆ ಇಳಿಸುವ ಕ್ರಮ ವಹಿಸಲಾಗಿದೆ ಎಂದರು.

ಎರಡನೇ ಅವಧಿಯ ಮೊದಲ ವರ್ಷದಲ್ಲಿ ಜನ್‌ಧನ್‌ದಲ್ಲಿ 2.21 ಲಕ್ಷ ಫ‌ಲಾನುಭವಿಗಳು ಇದ್ದಾರೆ. ಮುದ್ರಾ ಯೋಜನೆಯಡಿ 6,387 ಜನರಿಗೆ 65 ಕೋಟಿ. ಸಾಲ ಹಂಚಿಕೆ ಮಾಡಲಾಗಿದೆ. ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ 1.94 ಲಕ್ಷ ಜನರಿಗೆ ವೃದ್ಧಾಪ್ಯ ಹಾಗೂ 18 ಲಕ್ಷ ಜನರಿಗೆ ಆಹಾರ ಸಾಮಾಗ್ರಿ ವಿತರಿಸಲಾಗಿದೆ. ಬೆಂಬಲ ಬೆಲೆಯಲ್ಲಿ 325 ಕೋ.ರೂ. ವೆಚ್ಚದಲ್ಲಿ ತೊಗರಿ ಖರೀದಿಸಲಾಗಿದೆ ಎಂದು ವಿವರಿಸಿದರು.

ವಿಮಾನ ನಿಲ್ದಾಣ ಆರಂಭಕ್ಕೆ ಕ್ರಮ ವಹಿಸಲಾಯಿತು. ರೈಲ್ವೆ ವಿಭಾಗ ಆರಂಭಿಸಲು ಸಹ ಶ್ರಮಿಸುತ್ತಿದ್ದು, ಅದಷ್ಟು ಶೀಘ್ರದಲ್ಲೇ ಶುರು ಮಾಡುವ ವಿಶ್ವಾಸ ಇದೆ. ಕೋವಿಡ್ ಲಾಕ್‌ಡೌನ್‌ದಿಂದಾಗಿ ಕೊಂಚ ಹಿನ್ನಡೆಯಾಗಿದ್ದು, ಇದಕ್ಕೂ ಪರಿಹಾರ ಸಿಗಲಿದೆ ಎಂದು ಜಾಧವ್‌ ಹೇಳಿದರು. ದೇಶದಲ್ಲೇ ಮೊದಲ ಕೋವಿಡ್ ಸಾವು ಸಂಭವಿಸಿದ್ದು ಕಲಬುರಗಿಯಲ್ಲೇ ಆದರೂ, ಸೋಂಕು ಹರಡುವಿಕೆಯನ್ನು ನಿಯಂತ್ರಿಸಲಾಗದೆ. ತಕ್ಷಣವೇ ಪ್ರಯೋಗಾಲಯದ ವರದಿ ಲಭ್ಯವಾಗಬೇಕೆಂಬ ಉದ್ದೇಶದಿಂದ ಜಿಮ್ಸ್‌ನಲ್ಲಿ ಕೇಂದ್ರ ಸರ್ಕಾರದ ಸಹಾಯದಿಂದ ಸ್ಥಾಪಿಸಲಾಯಿತು. ವಲಸೆ ಕಾರ್ಮಿಕರ ಸಮಸ್ಯೆ ನಮ್ಮಲ್ಲಿ ಅಷ್ಟೆ ಅಲ್ಲ, ಎಲ್ಲೆಡೆ ಉದ್ಭವಿಸಿದೆ ಎಂದು ಪ್ರಶ್ನೆಯೊಂದಕ್ಕೆ ಜಾಧವ್‌ ಉತ್ತರಿಸಿದರು.

ಬಿಜೆಪಿ ನಗರಾಧ್ಯಕ್ಷ ಸಿದ್ದಾಜಿ ಪಾಟೀಲ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ, ವಿಧಾನ ಪರಿಷತ್‌ ಸದಸ್ಯ ಬಿ.ಜಿ.ಪಾಟೀಲ್‌ ಮತ್ತು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್‌ ನರಿಬೋಳ, ಜಿಪಂ ಸದಸ್ಯ ರೇವಣಸಿದ್ದಪ್ಪ ಸಂಕಾಲಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಬಿರಾದಾರ, ಬಾಬುರಾವ ಹಾಗರಗುಂಡಗಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.