ಒಗ್ಗಟ್ಟಿದ್ದರೆ ಮೋದಿ-ಶಾ ಏನೂ ಮಾಡಲಾರರು


Team Udayavani, Aug 16, 2017, 5:28 PM IST

yadgir1.jpg

ಕಲಬುರಗಿ: ಮುಂಬರುವ 2018ರ ಚುನಾವಣೆಯನ್ನು ಸಂಪೂರ್ಣ ವಿಶ್ವಾಸದಿಂದ ಮತ್ತು ಒಗ್ಗಟ್ಟಿನಿಂದ ಎದುರಿಸಿದಾಗ ಯಾವ ಮೋದಿ ಮತ್ತು ಅಮಿತ್‌ ಶಾ ನಮಗೇನು ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ
ಹೇಳಿದರು. ಮಂಗಳವಾರ ಇಲ್ಲಿನ ಹಿಂದಿ ಪ್ರಚಾರ ಸಭೆ ಎದುರು ನೂತನವಾಗಿ ನಿರ್ಮಿಸಲಾಗಿರುವ ಗಾಂಧಿ ಭವನ (ಕಾಂಗ್ರೆಸ್‌ ಕಚೇರಿ) ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಒಗ್ಗಟ್ಟಿನ ಕೊರತೆಯಿಂದ ಕಳೆದ ಬಾರಿ ದಕ್ಷಿಣ ಮತಕ್ಷೇತ್ರವನ್ನು ಕೈಚೆಲ್ಲಿದೆವು. ಈ ಬಾರಿ ಹಾಗೆ ಆಗಬಾರದು. ನಮ್ಮೊಳಗಿನ ಒಗ್ಗಟ್ಟನ್ನು ನಾವು ಬಿಟ್ಟು ಕೊಡುವುದರಿಂದ ನಾವೇ ಎದುರಾಳಿ ಪಕ್ಷದವರಿಗೆ ಅವಕಾಶ ಮಾಡಿಕೊಡಬಾರದು ಎಂದು ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ತಿಳಿ ಹೇಳಿದರು. ಬೇರೆ ಕಡೆ ನಡೆದಂತೆ ಕರ್ನಾಟಕದಲ್ಲಿ ಬಿಜೆಪಿ ಆಟನಡೆಯುವುದಿಲ್ಲ. ಅದನ್ನು ಎಲ್ಲರೂ ಮನಸ್ಸಿನಲ್ಲಿ ಇಟ್ಟುಕೊಂಡು ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕು. ಆಗಲೇ ಜನರು ನಿಮ್ಮೊಂದಿಗೆ ಬರಲು ಸಾಧ್ಯ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರಕಾರ ಮಾಡಿರುವ ಕೆಲಸಗಳನ್ನು ಜನರಿಗೆ ತಿಳಿ ಹೇಳಿ. ಅದೇ ವೇಳೆ ಮೂರುವರೆ ವರ್ಷಗಳಲ್ಲಿ ಕೇಂದ್ರ ಸರಕಾರ ಮಾಡಿರುವ ಮತ್ತು ಮೋದಿ ಮಾತು ಕೊಟ್ಟು ಮೋಸ ಮಾಡಿರುವುದನ್ನು ಜನರಿಗೆ ಮನವರಿಕೆ ಮಾಡಿಕೊಡಿ. ಇದರಿಂದ ಗೆಲವು ನಮಗೆ ಇನ್ನಷ್ಟು ಸುಲಭವಾಗಲಿದೆ ಎಂದರು. ನಮ್ಮೊಳಗಿನ ಕಿತ್ತಾಟಗಳು, ಕೊಂಕು ನಡೆಗಳು ಪಕ್ಷಕ್ಕೆ ಹಾನಿ ಮಾಡುತ್ತವೆ. ಪಕ್ಷದಲ್ಲಿರುವವರು ಹಾಗೂ ದೂರ ದೃಷ್ಟಿಯಿಂದ ಭವಿಷ್ಯವನ್ನು ನಮ್ಮದಾಗಿಸಿಕೊಳ್ಳುವವರು ತಾಳ್ಮೆಯಿಂದ ಕೆಲಸ ಮಾಡಬೇಕು. ಅಧಿಕಾರ ತಾನಾಗಿಯೇ ಸಿಕ್ಕುತ್ತದೆ. ಮಾಜಿ ಸಚಿವ ಖಮರುಲ್‌ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟಾಗ ನಡೆದುಕೊಂಡಿರುವ ರೀತಿಯಿಂದಾಗಿ ಪಕ್ಷಕ್ಕೆ ಮುಜುಗುರ ಮತ್ತು ಹಾನಿಯಾಗಿದೆ. ಇಂತಹ ಘಟನೆಗಳು ಬಂದಾಗ ಮುಖಂಡರು, ಹಿರಿಯ ಕಾರ್ಯಕರ್ತರು ಸುಮ್ಮನೆ ಇದ್ದು ಎಲ್ಲವನ್ನು ನಿಭಾಯಿಸಬೇಕು ಎಂದರು. 50 ವರ್ಷಗಳಿಂದ ಕಾಂಗ್ರೆಸ್‌ ಪಕ್ಷಕ್ಕೆ ಕಚೇರಿ ಒದಗಿಸಿದ್ದ ಖೂಬಾ ಅವರ ಸೇವೆಯನ್ನು ಸ್ಮರಿಸಿದ ಅವರು, 371ನೇ (ಜೆ) ಕಲಂ ಜಾರಿ ಮಾಡುವಾಗ ಸಾಕಷ್ಟು ಕಷ್ಟಗಳನ್ನು ಎದುರಿಸಬೇಕಾಯಿತು. ಹಲವಾರು ಜನರ ಮೇಲೆ ಒತ್ತಡ ಹೇರಿ ಮನವಿ ಮಾಡಿ ಕಲಂ ಜಾರಿಗೆ ತರಬೇಕಾಯಿತು. ಅಲ್ಲದೆ, ಈ ಭಾಗದ ಹಲವಾರು ಹೋರಾಟಗಾರರು ತಮ್ಮ ಶಕ್ತಿಯನ್ನು ಇದಕ್ಕಾಗಿ ವ್ಯಯ ಮಾಡಿದ್ದಾರೆ ಎಂದರು. ಮಾಜಿ ಸಚಿವ ಹಾಗೂ ಎಐಸಿಸಿ ಕಾರ್ಯದರ್ಶಿ ಖಮರುಲ್‌ ಇಸ್ಲಾಂ ಮಾತನಾಡಿ, ಇವತ್ತು ಗಾಂಧಿ ಭವನದ ರೂಪದಲ್ಲಿ ಪಕ್ಷದ ಕಚೇರಿ ಸಿದ್ಧವಾಗಿದೆ. ಇದಕ್ಕಾಗಿ ತಾವು ಹಲವು ಕೊಡುಗೆಗಳನ್ನು ನೀಡಿದ್ದೇವೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ
ಮಾತನಾಡಿ, ನಮ್ಮ ಹಲವಾರು ಚಟುವಟಿಕೆಗೆ ಇನ್ನು ಮುಂದೆ ದೊಡ್ಡ ವೇದಿಕೆ ಸಿಕ್ಕಂತಾಗಿದೆ. ಇದಕ್ಕೂ ಮುನ್ನಾ ಖೂಬಾ
ಅವರ ಸಹಕಾರದಿಂದ ನಾವು ಕಚೇರಿ ನಡೆಸಿದ್ದೆವು. ಈಗ ನಮ್ಮದೆ ಕಚೇರಿ ಆಗಿದೆ. ಕಾರ್ಯಕರ್ತರು, ಮುಖಂಡರು ಇದನ್ನು ಸರಿಯಾಗಿ ಬಳಕೆ ಮಾಡಬೇಕು ಎಂದು ಹೇಳಿದರು. ಕೆಪಿಸಿಸಿ ಜಿಲ್ಲಾಧ್ಯಕ್ಷ ಭಾಗಣ್ಣಗೌಡ ಸಂಕನೂರು ಮಾತನಾಡಿ ಸ್ವಾಗತಿಸಿದರು. ಮಾಜಿ ವಿಧಾನ ಪರಿಷತ್‌ ಸದಸ್ಯ ಅಲ್ಲಂಪ್ರಭು ಪಾಟೀಲ ನಿರೂಪಿಸಿದರು. ಎಂಎಲ್‌ಸಿಗಳಾದ ಶರಣಪ್ಪ ಮಟ್ಟೂರ, ಇಕ್ಬಾಲ್‌ ಅಹ್ಮದ ಸರಡಗಿ, ಶಾಸಕ ಜಿ.ರಾಮಕೃಷ್ಣ, ಮೇಯರ್‌ ಶರಣಕುಮಾರ ಮೋದಿ, ಕುಡಾ ಅಧ್ಯಕ್ಷ ಮೊಹ್ಮದ ಅಗಸರ್‌ ಚುಲಬುಲ್‌, ಆಲಂ ಖಾನ್‌,
ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಬಸವರಾಜ ಭೀಮಳ್ಳಿ, ನೀಲಕಂಠರಾವ ಮೂಲಗೆ, ಕೆಪಿಸಿಸಿ ಕಾರ್ಯದರ್ಶಿ ಕೃಷ್ಣಾಜಿ
ಕುಲಕರ್ಣಿ, ತಿಪ್ಪಣ್ಣಪ್ಪ ಕಮಕನೂರು, ವಿಜಯಕುಮಾರ ಹದಗಲ್‌, ಚಂದ್ರಿಕಾ ಪರಮೇಶ್ವರ, ಸಿ.ಎ.ಪಾಟೀಲ, ದೇವೇಂದ್ರಪ್ಪ ಮರತೂರ, ಮದರ್‌ ಖಾನ್‌, ಈರಣ್ಣ ಝಳಕಿ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.