ಮೋತಕಪಲ್ಲಿ: ನಾಳೆ ಬಲಭೀಮನ ಜಾತ್ರೆ


Team Udayavani, Dec 21, 2018, 4:20 PM IST

gul-1.jpg

ಸೇಡಂ: ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶದ ಪ್ರತಿಷ್ಠಿತ ಮತ್ತು ಜನಸಾಮಾನ್ಯರ ಆರಾಧ್ಯದೈವ ಐತಿಹಾಸಿಕ ಸುಕ್ಷೇತ್ರ ಮೋತಕಪಲ್ಲಿ ಶ್ರೀ ಬಲಭೀಮಸೇನ ಜಾತ್ರೆಗೆ ಇಡೀ ಗ್ರಾಮ ಸಜ್ಜಾಗಿದೆ. ಡಿ. 22ರಂದು ಮಧ್ಯರಾತ್ರಿ 12:10ಕ್ಕೆ ನಡೆಯುವ ಗಜೋತ್ಸವಕ್ಕೆ (ಹೂವಿನ ತೇರು) ದೇವಾಲಯ ಕಮಿಟಿ ತಯಾರಿ ನಡೆಸಿದೆ. 1200 ವರ್ಷಗಳ ಇತಿಹಾಸ ಹೊಂದಿರುವ ಬಲಭೀಮಸೇನ ದೇವರಿಗೆ ವಿಶ್ವವಿಖ್ಯಾತ ತಿರುಪತಿ ತಿಮ್ಮಪ್ಪನಿಗೆ ಸಲ್ಲುವ ಎಲ್ಲ ಪೂಜೆಗಳು, ಸೇವೆಗಳು ಇಲ್ಲಿಯೂ ಸಲ್ಲುವುದು ವಿಶೇಷ. ತಿರುಪತಿಯಲ್ಲಿ ನಡೆಯುವ ಪ್ರತಿಯೊಂದು ಧಾರ್ಮಿಕ ಕಾರ್ಯಗಳು ಅದೇ ದಿನ, ಅದೇ ಸಮಯಕ್ಕೆ ಬಲಭೀಮಸೇನನಿಗೂ ಅರ್ಪಿಸಲಾಗುತ್ತದೆ. ಇತಿಹಾಸ ಕೆದಕಿದರೆ ತಿರುಪತಿ ಹೆಬ್ಟಾಗಿಲು ಸೇಡಂ ತಾಲೂಕಿನ ಮೋತಕಪಲ್ಲಿ ಶ್ರೀ ಬಲಭೀಮಸೇನ ದೇವಾಲಯ ಎಂಬ ಅಂಶ ಅರಿಯಬಹುದಾಗಿದೆ.

11 ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಪ್ರತಿನಿತ್ಯ ನೂರಾರು ಭಕ್ತರು ಆಗಮಿಸಿ ಪುಷ್ಕರಣಿಯಲ್ಲಿ ಮಿಂದೆದ್ದು, ದೇವರ ದರ್ಶನ ಪಡೆಯುತ್ತಿದ್ದಾರೆ. ಪಲ್ಲಕ್ಕಿ ಉತ್ಸವ, ಕುದುರೆ ಉತ್ಸವ, ನವಿಲು ಉತ್ಸವ, ಸಿಂಹ ಉತ್ಸವ, ಅಂಬಾರಿ ಉತ್ಸವ, ಮಾವಿನತೇರು ಉತ್ಸವ, ಗಜ ಸೇವೆಗಳು ನಡೆಯುತ್ತಿವೆ.

ನ್ಯಾಯಮೂರ್ತಿಗಳು ವಿಶೇಷ ಭಕ್ತರು: ದೇವಾಲಯಕ್ಕೆ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ಮತ್ತು ಆಂಧ್ರ ರಾಜ್ಯಗಳ ವಿವಿಧ ನ್ಯಾಯಾಲಯಗಳ ನ್ಯಾಯಮೂರ್ತಿಗಳು ಬಲಭೀಮಸೇನ ದೇವರ ವಿಶೇಷ ಭಕ್ತರಾಗಿರುವುದು ಇಲ್ಲಿನ ಮತ್ತೂಂದು ವಿಶೇಷ. ಅನೇಕರು ತಮ್ಮ ಸ್ಥಾನ ಅಲಂಕರಿಸುವ ಮುನ್ನ ಇಷ್ಟ ದೇವರ ಪೂಜೆ ನೆರವೇರಿಸಿಯೇ ಕಾರ್ಯ ಮುಂದುವರಿಸಿರುವುದನ್ನು ಇಲ್ಲಿನ ಜನರಿಂದ ಅರಿಯಬಹುದಾಗಿದೆ. ಅಲ್ಲದೆ ರಾಜಕಾರಣಿಗಳು ಸಹ ತಮ್ಮ ಕಾರ್ಯಕ್ಕೂ ಮುನ್ನ ಬಲಭೀಮಸೇನ ದೇವರ ಆಶೀರ್ವಾದ ಪಡೆಯುತ್ತಾರೆ.

ಜಾತ್ರೆಗೆ ತೆರಳಲು ಸೇಡಂ ಮತ್ತು ಗುರುಮಠಕಲ್ಲ, ಯಾದಗಿರಿ, ನಾರಾಯಣಪೇಟ ಮತ್ತು ಕೊಡಂಗಲದಿಂದ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ. ಸುಕ್ಷೇತ್ರ ಮೋತಕಪಲ್ಲಿ ನಾರದರಿಗೆ ಬಂದಿದ್ದ ಸಂಕಷ್ಟ ನೀಗಿಸಿದಂತ ಸ್ಥಳವಾಗಿದೆ. ತಿರುಪತಿ ಪೂರ್ವ ದ್ವಾರವಾಗಿರುವ ಶ್ರೀ ಬಲಭೀಮಸೇನ ದೇವಾಲಯಕ್ಕೆ ತಿರುಮಲ ತಿಮ್ಮಪ್ಪನ ದರ್ಶನಕ್ಕೂ ಮೊದಲು ಬರುವ ವಾಡಿಕೆ ಇದೆ. ದೇವರ ಮಹಿಮೆ ಸ್ಕಂದ ಪುರಾಣದಲ್ಲಿ ದಾಖಲಾಗಿದೆ. ದೇವಾಲಯದ ಒಳಗಿರುವ ಮೂಲ ಮೂರ್ತಿ ಸ್ವಯಂಭೂ ಆಗಿದೆ.
 ಗುರುರಾಜಾಚಾರ್ಯ ಪೂಜಾರಿ ಅರ್ಚಕರು, ಮೋತಕಪಲ್ಲಿ

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.