ಮಾ.23ರಂದು ಮತ್ತೂಮ್ಮೆ ಆಂದೋಲನ
Team Udayavani, Jan 29, 2018, 11:20 AM IST
ಕಲಬುರಗಿ: ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಕಲ್ಪಿಸುವ ಸರಿಯಾದ ಯೋಜನೆ ರೂಪಿಸುವುದು, 60 ವರ್ಷ ತುಂಬಿದ ರೈತರಿಗೆ ತಿಂಗಳಿಗೆ 5 ಸಾವಿರ ರೂ. ಮಾಸಾಶನ ನೀಡುವುದು ಸೇರಿದಂತೆ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಆಗ್ರಹಿಸಿ ಮಾ.23ರಿಂದ ನವದೆಹಲಿ ರಾಮಲೀಲಾ ಮೈದಾನದಲ್ಲಿ ಮತ್ತೂಂದು ಸುತ್ತಿನ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ, ಭೃಷ್ಟಾಚಾರ ವಿರೋಧಿ ಹೋರಾಟದ ರೂವಾರಿ ಅಣ್ಣಾ ಹಜಾರೆ ಹೇಳಿದರು.
ನಗರದ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಹೈದ್ರಾಬಾದ್ ಕರ್ನಾಟಕ ರೈತ ಸಂಘ ರವಿವಾರ ಆಯೋಜಿಸಿದ್ದ ರೈತ ಜಾಗೃತಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಡಾ.ಸ್ವಾಮಿನಾಥ್ನ ವರದಿ ಯಥಾವತ್ತಾಗಿ ಜಾರಿಗೊಳಿಸುವುದು, ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ಕಲ್ಪಿಸುವುದು ಹಾಗೂ ರೈತರಿಗೆ ಮಾಸಾಶನ ಸೇರಿದಂತೆ ಇತರ ರೈತರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತದೆ ಎಂದು ಬಲವಾಗಿ ನಂಬಲಾಗಿತ್ತು. ಆದರೆ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾದರೂ ಕಣ್ಣೆತ್ತಿ ನೋಡದೇ ಇರುವುದರಿಂದ ಸಮಸ್ಯೆಗಳನ್ನು ಕಿವಿಗೆ ಹಾಕಿಕೊಳ್ಳದ ಹಿನ್ನೆಲೆಯಲ್ಲಿ ಆಂದೋಲನಕ್ಕೆ ಇಳಿಯಲಾಗುತ್ತಿದೆ ಎಂದರು.
ಆಂದೋಲನದ ಅಂಗವಾಗಿ ಈಗಾಗಲೇ ದೇಶದಾದ್ಯಂತ ಸಂಚರಿಸಲಾಗುತ್ತಿದೆ. ಈಗಾಗಲೇ 18 ರಾಜ್ಯಗಳಲ್ಲಿ ಪ್ರವಾಸ ಮಾಡಿ, ರೈತರನ್ನು ಸಂಘಟಿಸಲಾಗಿದೆ. ಐತಿಹಾಸಿಕ ಎನ್ನುವಂತೆ ರಾಮಲೀಲಾ ಮೈದಾನದಲ್ಲಿ ಹೋರಾಟಕ್ಕೆ
ಧುಮುಕಲಾಗುವುದು. ರೈತರ ಶಕ್ತಿ ಏನೆಂಬುದನ್ನು ಕೇಂದ್ರಕ್ಕೆ ಚುರುಕು ಮುಟ್ಟಿಸಲಾಗುವುದು.
22 ವರ್ಷಗಳಲ್ಲಿ 12 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಒಬ್ಬನೇ ಒಬ್ಬ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆ ಇಲ್ಲ. ಉದ್ಯಮಗಳಿಗೆ ನೆರವು ನೀಡುವ ಸರ್ಕಾರಗಳು ರೈತರ ನೆರವಿಗೆ ಏಕೆ ಮುಂದಾಗುವುದಿಲ್ಲ? ಪ್ರಧಾನಿ ಮೋದಿ ಅವರು ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಜಮಾ ಮಾಡುತ್ತಾರೆ ಹಾಗೂ ರೈತರ ಬವಣೆಗೆ ಸ್ಪಂದಿಸುತ್ತಾರೆ ಎಂದು ನಂಬಿ ಎಲ್ಲರೂ ಬೆಂಬಲಿಸಿದ್ದಾರೆ. ಆದರೆ 15 ರೂ. ಸಹ ಜೇಬಿಗೆ ಹಾಕಿಲ್ಲ ಎಂದರು.
ಮನುಷ್ಯ ಎಂದಾದ ಮೇಲೆ ಆಚಾರ, ವಿಚಾರ ಶುದ್ಧವಾಗಿರುವುದರ ಜತೆಗೆ ತ್ಯಾಗಮಯಿವಾಗಿರಬೇಕು. ನಿಷ್ಕಂಕಳಕ, ಮನಸ್ಸು ಹೊಂದಿ ಮುನ್ನಡೆದರೆ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ರಾಳೆಗಾಂವ ಸಿದ್ದಿಯಲ್ಲಿ ಕೈಗೊಳ್ಳಲಾದ ಮಾದರಿ ಕೃಷಿ ಕಾಯಕದ ಬಗ್ಗೆ ವಿವರಣೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?