ಕಾರ್ಯಕರ್ತರು ಇರದಿದ್ದಲ್ಲಿ ಶಾಸಕ ಡಾ. ಅವಿನಾಶ ಜೀವಂತವಾಗಿರುತ್ತಿರಲಿಲ್ಲ: ಸಂಸದ ಡಾ. ಜಾಧವ್


Team Udayavani, Apr 18, 2023, 3:09 PM IST

ಕಾರ್ಯಕರ್ತರು ಇರದಿದ್ದಲ್ಲಿ ಶಾಸಕ ಡಾ. ಅವಿನಾಶ ಜೀವಂತವಾಗಿರುತ್ತಿರಲಿಲ್ಲ: ಸಂಸದ ಡಾ. ಜಾಧವ್

ಕಲಬುರಗಿ: ಚಿಂಚೋಳಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ನಡೆದ ಕಲ್ಲು ತೂರಾಟ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಾಜರಿರದಿದ್ದಲ್ಲಿ ಶಾಸಕ ಡಾ. ಅವಿನಾಶ ಜಾಧವ್ ಜೀವಂತವಾಗಿರುತ್ತಿರಲಿಲ್ಲ ಎಂದು ಸಂಸದ ಡಾ.ಉಮೇಶ ಜಾಧವ್ ತಿಳಿಸಿದರು.

ಬಿಜೆಪಿ ಪಕ್ಷದ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಂದನಕೇರಾ ಕಲ್ಲು ತೂರಾಟ ಘಟನೆಯಲ್ಲಿ ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ.‌ ಕಲ್ಲು ತೂರಾಟ ಮೊದಲೇ ಷಡ್ಯಂತ್ರ ಕೂಡಿದೆ. ಕಲ್ಲು ತೂರಾಟ ಮಾಡಬೇಕೆಂಬ ಉದ್ದೇಶದಿಂದ ಇಲ್ಲ ಸಲ್ಲದ ಕಥೆಗಳನ್ನು ಕಟ್ಟಲಾಗುತ್ತಿದೆ. ಕಲ್ಲು ತೂರಾಟದ ಸಂದರ್ಭದಲ್ಲಿ ಶಾಸಕರಲ್ಲದೇ ನಾಲ್ಕೈದು ಕಾರ್ಯಕರ್ತರ ಹೆಣಗಳು ಬೀಳುತ್ತಿದ್ದವು ಎಂದು ಆತಂಕ ವ್ಯಕ್ತಪಡಿಸಿದರು.

ಶಾಸಕ ಪ್ರಿಯಾಂಕ್ ಖರ್ಗೆ ಡಾ. ಬಿ.ಆರ್. ಅಂಬೇಡ್ಕರ್ ಹೆಸರು ಮುಂದೆ ಮಾಡಿಕೊಂಡು ಸಮಾಜದೊಳಗೆ ಅಶಾಂತಿ ಮೂಡಿಸಲು ಮುಂದಾಗಿರುವುದು ಅಕ್ಷಮ್ಯ ಅಪರಾಧವಾಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು

ಶಾಸಕರಿಂದ ಡಾ. ಅಂಬೇಡ್ಕರ್ ನಾಮಫಲಕಕ್ಕೆ ಅವಮಾನ ಆಗಿಲ್ಲ. ಕಾಂಗ್ರೆಸ್ ಗೆ ಸೋಲಿನ ಭೀತಿಯಿಂದ ಕಳೆದ ಕೆಲವು ದಿನಗಳಿಂದ ಷಡ್ಯಂತ್ರ ರೂಪಿಸುತ್ತಾ ಬರಲಾಗುತ್ತಿದೆ. ಕೊನೆಗೆ ಚಂದನಕೇರಾದಲ್ಲಿ ಸಮಾಜ ಎತ್ತಿ ಕಟ್ಟುವ ಹುನ್ನಾರ ನಡೆಸಿ ಅಶಾಂತಿಗೆ ಕಾರಣವಾಗಿದೆ. ಶಾಸಕ ಪ್ರಿಯಾಂಕ್ ಡಾ. ಬಿ.ಆರ್ ಅಂಬೇಡ್ಕರ್ ತಮ್ಮ ಮನೆಯ ಆಸ್ತಿ ಎಂದು ತಿಳಿದುಕೊಂಡಿದ್ದಾರೆ. ಅಂಬೇಡ್ಕರ್ ಅವರು ದೇಶದ 140 ಜನರ ಆಸ್ತಿ. ಸಂವಿಧಾನ ಬಗ್ಗೆ ಮಾತನಾಡುವ ಶಾಸಕ ಪ್ರಿಯಾಂಕ್ ಖರ್ಗೆ, ದಲಿತರ ಓಣಿಗೆ ಬಂದರೆ ತಿರುಗಾಡಲು ಬಿಡುವುದಿಲ್ಲ ಎಂಬುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿರುವುದು ಸಂವಿಧಾನ ವಿರೋಧಿಯಾಗಿದೆ. ಆದ್ದರಿಂದ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ದ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದ ಸದ್ದಾ ಹುಸೇನ್ ಮಾತನಾಡಿ, ಘಟನೆ ಪೂರ್ವನಿಯೋಜಿತವಾಗಿ ರೂಪಿಸಲಾಗಿದೆ. ಇದರಲ್ಲಿ ಅಲ್ಪಸಂಖ್ಯಾತರ ಎನ್ನುವ ಮಾತೇ ಇಲ್ಲ ಎಂದು ಘಟನೆ ವಿವರಣೆ ನೀಡಿದರು.

ಸೋಲು ನಿಶ್ಚಿತ: ತಮ್ಮನ್ನು ಚಿಂಚೋಳಿ ಸಂಸದ ಎಂದು ಟೀಕಿಸಲಾಗುತ್ತಿದೆ.‌ ಆದರೆ ಬರೀ ಪತ್ರಿಕಾ ಹೇಳಿಕೆ ನೀಡುತ್ತಾ ಬೆಂಗಳೂರಿನ ಸದಾಶಿವ ನಿವಾಸಿಯಾಗಿರುವ ಪ್ರಿಯಾಂಕ್ ಖರ್ಗೆ ಒಂದು ರಾತ್ರಿಯಾದರೂ ಕ್ಷೇತ್ರದಲ್ಲಿ ತಂಗಿದ್ದಾರೆಯೇ? ತಮ್ಮ ಮನೆಗೆ ಜನರು ರಾತ್ರಿ ಎರಡು ಗಂಟೆಗೆ ಬಂದು ಎಬ್ಬಿಸುತ್ತಾರೆ. ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ.‌ ಆದರೆ ಅವರು ರಾತ್ರಿ ಎರಡು ಗಂಟೆಗೆ ಎಬ್ಬಿಸಲು ಅವಕಾಶ ಕೊಡ್ತಾರೆಯೇ? ಅವರು ಸಾರ್ವಜನಿಕರ ಕೆಲಸ ಮಾಡಿದ್ದರೆ ಗುರುಮಿಠಕಲ್ ದಲ್ಲಿ ಏಕೆ ಜನರು ಮಹಾರಾಷ್ಟ್ರಕ್ಕೆ ಗೂಳೆ ಹೋಗುತ್ತಿರುತ್ತಾರೆ. ಇದೆಲ್ಲ ಜನರಿಗೆ ಮನವರಿಕೆಯಾಗಿದೆ. ಹೀಗಾಗಿ ಈ ಸಲ ಚಿತ್ತಾಪುರದಲ್ಲಿ ಸೋಲು ನಿಶ್ಚಿತ. ಕೆಲವು ಮುಖಂಡರು ಪಕ್ಷ ಬಿಟ್ಟಿರಬಹುದು. ಆದರೆ ಮತದಾರರು ಪಕ್ಣದಿಂದ ದೂರಾಗಿಲ್ಲ ಎಂದು ಸಂಸದ ಡಾ. ಉಮೇಶ ಜಾಧವ್ ತಿಳಿಸಿದರು.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.