ಶ್ರೀ ಸಿಮೆಂಟ್‌: ಕಾರ್ಮಿಕರಿಂದ ಕಲ್ಲು ತೂರಾಟ


Team Udayavani, Aug 4, 2018, 10:16 AM IST

gul-1.jpg

ಸೇಡಂ: ತಾಲೂಕಿನ ಬೆನಕನಹಳ್ಳಿಯ ಶ್ರೀ ಸಿಮೆಂಟ್‌ ಕಾರ್ಖಾನೆಯಲ್ಲಿ ಗುರುವಾರ ನಡೆದ ಕ್ರೇನ್‌ ದುರಂತಕ್ಕೆ ಕಾರ್ಮಿಕರು ಕಲ್ಲು ತೂರಾಟದ ಉತ್ತರ ನೀಡಿದ್ದಾರೆ.

ಆರು ಜನ ಕಾರ್ಮಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಬಿಹಾರ ಮೂಲದ ಕಾರ್ಮಿಕರ ಆಕ್ರೋಶ ಎಲ್ಲೆ ಮೀರಿದ್ದು, ಶುಕ್ರವಾರ ಬೆಳಗ್ಗೆಯಿಂದಲೇ ಕಾರ್ಖಾನೆಯ ಕೆಲವೆಡೆ ಕಲ್ಲು ತೂರಾಟ ನಡೆದಿದೆ. ನಿಯಂತ್ರಿಸಲು ಹೋದ ಪೊಲೀಸರ ಮೇಲೆ ಕಲ್ಲು
ತೂರಾಟ ನಡೆದಿದೆ. ಈ ವೇಳೆ ಶರಣಪ್ಪ ಎನ್ನುವ ಆರ್‌.ಪಿ.ಐ ಪೇದೆ ಕಾಲಿಗೆ ಗಾಯವಾಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಅಲ್ಲದೆ ಕಾರ್ಮಿಕರು ನಡೆಸಿದ ಕಲ್ಲು ತೂರಾಟಕ್ಕೆ ಸರ್ಕಾರಿ ಬಸ್‌ಗೆ ಕಲ್ಲು ತಾಕಿದ್ದು, ಗಾಜು ಪುಡಿಯಾಗಿದೆ. ಕಾರ್ಖಾನೆ ಒಳಗಿರುವ ಬಿಹಾರಿ ಕಾಲೋನಿಯಲ್ಲಿ ಜಮಾಯಿಸಿರುವ ಕಾರ್ಮಿಕರು ಕಾರ್ಖಾನೆ ಅಧಿಕಾರಿಗಳು ಮತ್ತು ಪೊಲೀಸರ ವಿರುದ್ಧ ಕಲ್ಲು ತೂರಿದ್ದು, ಕೆಲ ಅಧಿಕಾರಿಗಳು ಪರಾರಿಯಾಗಿದ್ದಾರೆ.

ಪೊಲೀಸ್‌ ಸರ್ಪಗಾವಲು: ಘಟನೆ ತೀವ್ರತೆ ಅರಿತ ಎಸ್‌ಪಿ ಎನ್‌. ಶಶಿಕುಮಾರ, ಡಿಎಸ್ಪಿ ಯು. ಶರಣಪ್ಪ, ಸಿಪಿಐ ಪಂಚಾಕ್ಷರಿ ಸಾಲಿಮಠ ಹೆಚ್ಚಿನ ಪೊಲೀಸ್‌ ಭದ್ರತೆ ಕಲ್ಪಿಸಿದ್ದಾರೆ. ಸ್ಥಳದಲ್ಲಿ 400ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಲಾಗಿದೆ. ಪರಿಸ್ಥಿತಿ ಕೈ ಮೀರಿದಾಗ ಕೆಲವೆಡೆ ಲಘು ಲಾಠಿ ಪ್ರಹಾರ, ಟಿಯರ್‌ ಗ್ಯಾಸ್‌ ಪ್ರಯೋಗ ನಡೆಸಲಾಯಿತು. 

ಜಿಲ್ಲಾಧಿಕಾರಿ ಭೇಟಿ: ಇದೇ ವೇಳೆ ಶುಕ್ರವಾರ ಬೆಳಗ್ಗೆ ಜಿಲ್ಲಾಧಿ ಕಾರಿ ವೆಂಕಟೇಶಕುಮಾರ ಸಹ ಕಾರ್ಖಾನೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಘಟನೆ ನಡೆದ ಸ್ಥಳ ಪರಿಶೀಲಿಸಿದ ಅವರು ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರವಹಿಸಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಪರಿಹಾರಕ್ಕೆ ಒಪ್ಪದ ಕಾರ್ಮಿಕರು: ಮೃತರ ಕುಟುಂಬಕ್ಕೆ ಪರಿಹಾರವಾಗಿ 12 ಲಕ್ಷ ರೂ. ನೀಡುವ ಕುರಿತು ಕಾರ್ಖಾನೆ ಅಧಿಕಾರಿಗಳು ಸಮ್ಮತಿಸಿದ್ದರು. ಆದರೆ ಇದಕ್ಕೆ ಒಪ್ಪದ ಕಾರ್ಮಿಕರು ಕಾರ್ಖಾನೆ ಅಧಿಕಾರಿಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.

ಒಟ್ಟಾರೆಯಾಗಿ ಸಿಮೆಂಟ್‌ ಕಾರ್ಖಾನೆ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದೆ. ರೊಚ್ಚಿಗೆದ್ದ ಸಿಮೆಂಟ್‌ ಕಾರ್ಖಾನೆಯ ಬಿಹಾರ ಮೂಲದ ಕಾರ್ಮಿಕರು ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಅವರನ್ನು ಸಾಗಿಸಲು ಪೊಲೀಸರು ಮತ್ತು ಅಧಿಕಾರಿಗಳು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಎಲ್ಲೆಡೆಯೂ ಪೊಲೀಸ್‌ ಸರ್ಪಗಾವಲು ಏರ್ಪಡಿಸಿದ್ದು, ಬೆನಕನಹಳ್ಳಿಯಿಂದ ಕೋಡ್ಲಾಕ್ಕೆ ಹೋಗುವ ಗ್ರಾಮಸ್ಥರಿಗಾಗಿ ಬೇರೊಂದು ಮಾರ್ಗ ಸೂಚಿಸಿದ್ದು, ಪರಿಸ್ಥಿತಿ ಹತೋಟಿಯಲ್ಲಿಡಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.’

ಪ್ರಕರಣ ತನಿಖೆಗೆ ಡಿಸಿ ಆದೇಶ 
ಕಲಬುರಗಿ: ಸಿಮೆಂಟ್‌ ಉತ್ಪಾದನೆಗೂ ಮುಂಚೆಯೇ ಈಗಾಗಲೇ ಹಲವಾರು ಅವಘಡಗಳು ಸಂಭವಿಸಿದ್ದಲ್ಲದೇ ಗುರುವಾರ ರಾತ್ರಿ ವೆಲ್ಡಿಂಗ್‌ ಮಾಡುವ ಸಂದರ್ಭದಲ್ಲಿ ಕ್ರೇನ್‌ ಮುರಿದು ಬಿದ್ದು ಆರು ಜನ ಬಿಹಾರ ಮೂಲದ ಕಾರ್ಮಿಕರು ಮೃತಪಟ್ಟಿರುವ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ-ಬೆನಕನಹಳ್ಳಿ ಬಳಿ ಇರುವ ಶ್ರೀ ಸಿಮೆಂಟ್‌ ಕಾರ್ಖಾನೆ ದುರಂತದ ಪ್ರಕರಣವನ್ನು ಜಿಲ್ಲಾಡಳಿತ ತನಿಖೆಗೆ ವಹಿಸಿದೆ.

ಕಾರ್ಖಾನೆಯ ಆಡಳಿತ ಮಂಡಳಿ ಸಂಪೂರ್ಣ ನಿರ್ಲಕ್ಷವಹಿಸಿರುವುದು ಹಾಗೂ ಹಲವಾರು ನಿಯಮಗಳನ್ನು ಗಾಳಿಗೆ ತೂರಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡು ಬಂದಿದ್ದರಿಂದ ಕಲಬುರಗಿ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಕೈಗಾರಿಕಾ ಇಲಾಖೆ ಉಪನಿರ್ದೇಶಕರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದಾರೆ.

ಶ್ರೀ ಸಿಮೆಂಟ್‌ ಕಾರ್ಖಾನೆ ಸುರಕ್ಷತಾ ಕ್ರಮಗಳನ್ನು ಅನುಸರಿಸ ದಿರುವ, ಲೋಪದೋಷ ಕುರಿತು ಹಾಗೂ ಮುಂದೆ ಕೈಗೊಳ್ಳಬೇಕಿರುವ ಕಾನೂನು ಕ್ರಮ ಸೇರಿದಂತೆ ಇತರ ಆಯಾಮಗಳ ನಿಟ್ಟಿನಿಂದ ಸಮಗ್ರ ವರದಿ ನೀಡಲಿದ್ದು, ವರದಿ ಆಧರಿಸಿ ಮುಂದಿನ ಹೆಜ್ಜೆ ಇಡಲಾಗುವುದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

ಎಫ್‌ಐಆರ್‌: ಶುಕ್ರವಾರ ಬೆಳಗ್ಗೆ ಅವಘಡ ಸಂಭವಿಸಿದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆ ಸುರಕ್ಷಾತಾಧಿಕಾರಿ, ಗುತ್ತಿಗೆ ಕಾರ್ಮಿಕ ಏಜೆನ್ಸಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ತನಿಖೆಯಲ್ಲಿ ಎಲ್ಲವೂ ಬಯಲಿಗೆ ಬರಲಿದೆ. ಶ್ರೀ ಸಿಮೆಂಟ್‌ ಕಾರ್ಖಾನೆ ನಿರ್ವಹಣೆಗಾಗಿ ಭೂಮಿಯನ್ನು 30 ವರ್ಷಗಳ ಕಾಲ ಒಪ್ಪಂದ ಮೇರೆಗೆ ನೀಡಲಾಗಿದೆ. ಆದರೂ ಕೈಗಾರಿಕಾ ನಿಯಮಗಳನ್ನು ಅನುಸರಿಸಿದೆಯೇ ಎನ್ನುವುದರ ಕುರಿತು ಪರಿಶೀಲನೆ ನಡೆಸಲಾಗುವುದು. ಮೃತರ ಕುಟುಂಬಕ್ಕೆ ಕಂಪನಿ ವತಿಯಿಂದಲೇ ತಲಾ 12 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅದೇ ರೀತಿ ಮೃತರ ಪಾರ್ಥಿವ ಶರೀರವನ್ನು ಹೈದ್ರಾಬಾದ ಮೂಲಕ ವಿಮಾನದಲ್ಲಿ ನವದೆಹಲಿಗೆ ತದನಂತರ ಬಿಹಾರದ ಪಾಟ್ನಾ ಹಾಗೂ ಅಲ್ಲಿಂದ ಅವರ ಗ್ರಾಮಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಇದರ ವೆಚ್ಚವನ್ನು ಕಂಪನಿಯೇ ಭರಿಸಿದೆ ಎಂದು ವಿವರಿಸಿದರು.

ಈ ಹಿಂದೆಯೂ ಕಾರ್ಖಾನೆಯಲ್ಲಿ ಸಣ್ಣ ಪುಟ್ಟ ಅವಘಡ ಘಟನೆಗಳನ್ನು ನಡೆದಿರುವುದನ್ನು ಕಾರ್ಮಿಕರು ತಮ್ಮ ಗಮನಕ್ಕೆ ತಂದಿದ್ದಾರೆ. ಈಗ ಕಾರ್ಖಾನೆಯ ನಿರ್ಮಾಣದ ಕಾಮಗಾರಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. ಸೇಡಂ ಉಪವಿಭಾಗದ ಸಹಾಯಕ ಆಯುಕ್ತೆ ಸುಶೀಲಾ ಈ ಸಂದರ್ಭದಲ್ಲಿದ್ದರು. 

ಘೋಷಣಾ ಪತ್ರ: ಮೃತಪಟ್ಟ ಕಾರ್ಮಿಕರ ಕುಟುಂಬ ವರ್ಗಕ್ಕೆ 12 ಲಕ್ಷ ರೂ. ಪರಿಹಾರ ನೀಡುವ ಒಪ್ಪಿಗೆ ಹಾಗೂ ಘೋಷಣಾ ಪತ್ರವನ್ನು ಶ್ರೀ ಸಿಮೆಂಟ್‌ ಘಟಕದ ಮುಖ್ಯಸ್ಥ ಅರವಿಂದಕುಮಾರ ಪಾಟೀಲ ಜಿಲ್ಲಾಧಿಕಾರಿಗೆ ನೀಡಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.