ಕೆಸರು ಗದ್ದೆಯಂತಾದ ರಸ್ತೆ
Team Udayavani, Aug 11, 2022, 6:58 PM IST
ಸೈದಾಪುರ: ಎರಡು-ಮೂರು ವಾರಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಭಾಗದ ಮಣ್ಣಿನ ರಸ್ತೆಗಳೆಲ್ಲವು ಕೆಸರು ಗದ್ದೆಗಳಾಗಿ ಮಾರ್ಪಟ್ಟಿವೆ.
ಸಮೀಪದ ಮಲ್ಹಾರ ಗ್ರಾಮದ ಶರಣಪ್ಪ ಬಜಾರ ಅವರ ಹೊಲದಿಂದ ಭೀಮಾ ನದಿಗೆ ಸಂಪರ್ಕ ಕಲ್ಪಿಸುವ ಮಣ್ಣಿನ ರಸ್ತೆ ಸಂಪೂರ್ಣ ಹದ್ದಗೆಟ್ಟಿದ್ದು ಕೃಷಿ ಚಟುವಟಿಕೆಗಳಿಗೆ ಹೋಗುವ ರೈತರು ನಿತ್ಯ ಸಂಕಷ್ಟ ಎದುರಿಸುವಂತಾಗಿದೆ.
ರೈತರು ಸುಮಾರು ವರ್ಷಗಳಿಂದ ಈ ಸಮಸ್ಯೆ ಎದುರಿಸುತ್ತಿದ್ದಾರೆ. ಭೀಮಾ ನದಿ ತಟದಲ್ಲಿರುವ ಹೊಲಗಳಿಗೆ ಹೋಗಬೇಕಾದರೆ ಬೇರೆ ಮಾರ್ಗವಿಲ್ಲ. ಇರುವ ಈ ಮಾರ್ಗವು ಕೆಸರಿನಿಂದ ಕೂಡಿದ್ದರಿಂದ ಕೂಲಿ ಕಾರ್ಮಿಕರು ಈ ಮಾರ್ಗದಲ್ಲಿರುವ ಹೊಲಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಹೊಲಗಳಲ್ಲಿ ಕಳೆ ತುಂಬಿ ಬೆಳೆ ನಾಶವಾಗುತ್ತಿದೆ. ಅದನ್ನು ಸ್ವಚ್ಛಗೊಳಿಸಲು ಜನ ಬರುತ್ತಿಲ್ಲ. ಅಲ್ಲದೇ ಬೆಳೆದ ರಾಶಿ ತೆಗೆದುಕೊಂಡು ಹೋಗಲು ಸಾಧ್ಯವಾಗುವುದಿಲ್ಲ.
ನಡೆದುಕೊಂಡು ಹೋದರೆ ಮೊಳಕಾಲು ಮುಳುಗುವಷ್ಟು ಕೆಸರು ಇದೆ. ಹೀಗಾಗಿ ರಸ್ತೆ ಪಕ್ಕದಲ್ಲಿನ ರೈತರ ಹೊಲಗಳಲ್ಲಿ ಬಂಡಿ, ವಾಹನ, ಜನರು ಹೋದರೆ ಅವರು ಬಾಯಿಗೆ ಬಂದಂತೆ ಬೈಯುತ್ತಾರೆ ಎಂದು ರೈತ ಭೀಮರಾಯ ತಳವಾಡಿ ಮತ್ತು ಸಿದ್ದಪ್ಪ ಗಿರಿಣಿ ತಮ್ಮ ಅಳಲು ತೋಡಿಕೊಂಡರು. ಅಲ್ಲದೇ ಮೊಹರಂ ಸೇರಿದಂತೆ ಇನ್ನಿತರ ಹಬ್ಬಗಳಲ್ಲಿ ದೇವರ ಮೂರ್ತಿಗಳು ಹೊತ್ತು ಗಂಗಾ ಸ್ನಾನಕ್ಕೆ ಭೀಮಾ ನದಿಗೆ ಇದೇ ಮಾರ್ಗವಾಗಿ ಹೋಗಿಬರುವಾಗ ಅನುಭವಿಸುವ ಕಷ್ಟ ಸಾಮಾನ್ಯವಾದುದ್ದಲ್ಲ ಎನ್ನುತ್ತಾರೆ ಗ್ರಾಮಸ್ಥ ಮಲ್ಲಿಕಾರ್ಜುನ.
ಈ ಸಮಸ್ಯೆ ಕುರಿತು 2 ವರ್ಷಗಳ ಹಿಂದೆ ಪ್ರವಾಹ ಪರಿಸ್ಥಿತಿ ಉಂಟಾದಾಗ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕರಿಗೆ ಮನವಿ ಸಹ ನೀಡಲಾಗಿದೆ. ಆದರೆ ಇಲ್ಲಿಯವರೆಗೆ ಸಂಬಂಧಪಟ್ಟ ಯಾವುದೇ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಕ್ರಮಕೈಗೊಂಡಿಲ್ಲ. ಇದರಿಂದ ರೈತರು ಹಿಡಿ ಶಾಪ ಹಾಕುತ್ತಿದ್ದಾರೆ. ಆದ್ದರಿಂದ ಈ ಮಣ್ಣಿನ ರಸ್ತೆಯನ್ನು ಶೀಘ್ರದಲ್ಲಿ ಸಿಸಿ ರಸ್ತೆಯನ್ನಾಗಿ ಪರಿವರ್ತಿಸಿಕೊಡಬೇಕೆಂಬುದು ಗ್ರಾಮಸ್ಥರ ಒತ್ತಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ