ಭರದಿಂದ ಸಾಗಿದೆ ಮುಲ್ಲಾ ಮಾರಿ ಸೇತುವೆ ಕಾಮಗಾರಿ
Team Udayavani, Jun 12, 2022, 12:09 PM IST
ಚಿಂಚೋಳಿ: ಪಟ್ಟಣದ ಹತ್ತಿರ ಹರಿಯುವ ಮುಲ್ಲಾಮಾರಿ ನದಿಗೆ ನಿರ್ಮಿಸುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿ ಕೆಲಸ ಭರದಿಂದ ನಡೆಯುತ್ತಿದೆ.
ಸ್ಥಳೀಯ ಪುರಸಭೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ 2010-11ರಲ್ಲಿ ನಗರೋತ್ಥಾನ ಯೋಜನೆ ಅಡಿಯಲ್ಲಿ 5ಕೋಟಿ ರೂ.ಅನುದಾನವನ್ನು ಆಗಿನ ಬಿಜೆಪಿ ಶಾಸಕ ಸುನೀಲ ವಲ್ಯಾಪುರೆ ಮಂಜೂರಿ ಮಾಡಿದ್ದರು. ಆದರೆ ಕಾರಣಾಂತರದಿಂದ ಸೇತುವೆ ನಿರ್ಮಾಣಕ್ಕಾಗಿ ಬಂದ ಅನುದಾನ ಸರಕಾರಕ್ಕೆ ಮತ್ತೇ ಮರಳಿ ಹೋಗಿತ್ತು. 2015-16ನೇ ಸಾಲಿನಲ್ಲಿ ಕಾಂಗ್ರೆಸ್ ಶಾಸಕ ಡಾ|ಉಮೇಶ ಜಾಧವ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಸೇತುವೆ ನಿರ್ಮಾಣಕ್ಕಾಗಿ 5ಕೋಟಿ ರೂ.ಅನುದಾನ ಮಂಜೂರಿಗೊಳಿಸಿ ಕಾಂಗ್ರೆಸ್ ಸರಕಾರದ ಆಗಿನ ನಗರಾಭಿವೃದ್ಧಿ ಸಚಿವ ಖಮರುಲ್ ಇಸ್ಮಾಂ ಕಾಮಗಾರಿಗೆ ಚಾಲನೆ ನೀಡಿದ್ದರು.
ಸೇತುವೆ ನಿರ್ಮಾಣ ನಡೆಯುತ್ತಿರುವ ಸಂದರ್ಭದಲ್ಲಿ ಸೇತುವೆ ಛತ್ತು ಕುಸಿದು ಬಿದ್ದು ಏಳು ಕಾರ್ಮಿಕರು ಗಾಯಗೊಂಡಿದ್ದರು. ಕಾಮಗಾರಿ ಗುಣಮಟ್ಟದಿಂದ ನಡೆಯುತ್ತಿಲ್ಲವೆಂದು ಪುರಸಭೆ ಸದಸ್ಯರು ರಾಜ್ಯ ಸರಕಾರದ ನಗರಾಭಿವೃದ್ಧಿ ಸಚಿವರ ಗಮನಕ್ಕೆ ತಂದಿದ್ದರು. 3ನೇ ತಂಡ ಪರಿಶೀಲನೆ ನಡೆಸಿ ಕಾಮಗಾರಿ ಗುಣಮಟ್ಟದಿಂದ ನಡೆಸುವಂತೆ ಗುತ್ತಿಗೆದಾರನಿಗೆ ಸೂಚನೆ ನೀಡಿದ್ದರಿಂದ ಈಗ ಸೇತುವೆ ಕಾಮಗಾರಿ ಭರದಿಂದ ನಡೆಯುತ್ತಿದೆ. ಸೇತುವೆ ನಿರ್ಮಾಣದಿಂದ ನಿಮಾಹೊಸಳ್ಳಿ, ಗೌಡನಹಳ್ಳಿ, ಈದಗಾ ಮೈದಾನ ಮತ್ತು ಕೊಳಚೆ ಮಂಡಳಿ ಹೌಸಿಂಗ್ ಕಾಲೋನಿ ನಿವಾಸಿಗಳಿಗೆ, ಹೊಲಗಳಿಗೆ ಹೋಗಲು ಹಾಗೂ ಕಲ್ಲು ಗಣಿ ಕಾರ್ಮಿಕರಿಗೆ ಉಪಯೋಗವಾಗಲಿದೆ.
ಕಳೆದ ವರ್ಷ ಮುಲ್ಲಾಮಾರಿ ನದಿ ಮಳೆಗಾಲದಲ್ಲಿ ತುಂಬಿ ಹರಿದಿದ್ದರಿಂದ ಸೇತುವೆ ನಿರ್ಮಾಣಕ್ಕೆ ಅಡ್ಡಿಯಾಗಿ ಕೆಲಸ ನಿಲ್ಲಿಸಲಾಗಿತ್ತು. ನದಿಯಲ್ಲಿ ನೀರಿನ ಪ್ರಮಾಣ ಸದ್ಯ ಕಡಿಮೆ ಇರುವುದರಿಂದ ಕೆಲಸ ಚುರುಕಿನಿಂದ ನಡೆಯುತ್ತಿದೆ. ಸರಕಾರದಿಂದ ಪುರಸಭೆಗೆ ಸೇತುವೆ ಮುಂದುವರಿದ ಕಾಮಗಾರಿಗೋಸ್ಕರ ಫೇಸ್ 4ರಲ್ಲಿ ಒಂದು ಕೋಟಿ ರೂ.ಅನುದಾನ ನೀಡಿದೆ. ಮುಂದಿನ ಆರು ತಿಂಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ. –ಕಾಶಿನಾಥ ಧನ್ನಿ, ಪುರಸಭೆ ಮುಖ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ