ಮಾ.6ರಂದು ಬಹುಮನಿ ಉತ್ಸವ
Team Udayavani, Feb 3, 2018, 11:49 AM IST
ಕಲಬುರಗಿ: ಬಹಮನಿ ಸುಲ್ತಾನರ ಆಳ್ವಿಕೆ ಕಾಲದ ಗತವೈಭವ ಬಿಂಬಿಸುವ ಬಹುಮನಿ ಉತ್ಸವವನ್ನು ನಗರದಲ್ಲಿ ಮಾರ್ಚ್ 6ರಂದು ಏರ್ಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ತಿಳಿಸಿದರು.
ಶುಕ್ರವಾರ ನಗರದ ಐವಾನ್ -ಇ-ಶಾಹಿ ಅತಿಥಿಬೃಹದಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಉತ್ಸವ ಇದಾಗಿದ್ದು, ಬಹುಮನಿ ಸುಲ್ತಾನರ ಆಳ್ವಿಕೆ ಕುರಿತು ಸಂಶೋಧನೆ ಕೈಗೊಂಡ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಾಹಿತಿ, ಸಂಶೋಧಕರಿಂದ ವಿಚಾರ ಸಂಕಿರಣಗಳನ್ನು ಏರ್ಪಡಿಸಬೇಕು ಎಂದರು.
ಬಹುಮನಿ ಸುಲ್ತಾನರ ಆಳ್ವಿಕೆಯ ಕಾಲವನ್ನು ಶಾಲಾ ಮಕ್ಕಳಿಗೆ ತಿಳಿಸಿಕೊಡಲು ಉತ್ಸವಕ್ಕೂ ಮುನ್ನ ಶಾಲಾ-ಕಾಲೇಜುಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಬೇಕು. ಬಹುಮನಿ ಸುಲ್ತಾನರ ನಾಣ್ಯಗಳ ಪ್ರದರ್ಶನ, ಚಿತ್ರಕಲೆಗಳ ಪ್ರದರ್ಶನ, ಛಾಯಾಚಿತ್ರ ಪ್ರದರ್ಶನ, ಬಹುಮನಿ ಸುಲ್ತಾನರನ್ನಾಧರಿಸಿದ ಪುಸ್ತಕಗಳ ಮಾರಾಟ ಏರ್ಪಡಿಸಬೇಕು. ಕಲಬುರಗಿ ಕೋಟೆಯಲ್ಲಿ ಸಾಹಿತ್ಯಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ಸಾತ್ ಗುಮ್ಮಜ್ದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಹುಮನಿ ಸುಲ್ತಾನರ ಆಳ್ವಿಕೆಯ ರೂಪಕ, ಖವ್ವಾಲಿ, ಘಜಲ್, ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಗುಲಬರ್ಗಾ ವಿಶ್ವವಿದ್ಯಾಲಯ ಹಾಗೂ ಕೇಂದ್ರೀಯ ವಿಶ್ವವಿದ್ಯಾಲಯ ಮುಖ್ಯಸ್ಥರು ಸಾಹಿತ್ಯಿಕ
ಕಾರ್ಯಕ್ರಮಗಳನ್ನು ಆಯೋಜಿಸಲು ಜವಾಬ್ದಾರಿ ವಹಿಸಬೇಕು. ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಪ್ರಚಾರ ಸಮಿತಿಗಳನ್ನು ರಚಿಸಿ ಈ ಸಮಿತಿಗಳು ಆದಷ್ಟು ಬೇಗ ಸಭೆ ಸೇರಿ ಕಾರ್ಯಕ್ರಮಗಳನ್ನು ಮುಂಚಿತವಾಗಿ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸಾಹಿತಿ ವಸಂತ ಕುಷ್ಠಗಿ, ಸುಜಾತಾ ಜಂಗಮಶೆಟ್ಟಿ, ಮಹಿಪಾಲರೆಡ್ಡಿ ಮುನ್ನೂರ್, ಪ್ರಭಾಕರ ಜೋಶಿ, ಶಂಕ್ರಯ್ಯ ಘಂಟಿ, ಸುರೇಶ ಬಡಿಗೇರ, ಖಾಜಿ ರಿಜ್ವಾನ್ ಸಿದ್ದಿಕ್ಕಿ, ಅಮ್ಜದ್ ಜಾವೀದ್, ಮಹ್ಮದ್ ಇಸ್ಮಾಯಿಲ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ