ಕಸವನ್ನೇ ಗೊಬ್ಬರವಾಗಿಸಲು ಪುರಸಭೆ ಕ್ರಮ


Team Udayavani, Jun 24, 2021, 4:36 PM IST

dfghgfdfgfds

ವಾಡಿ: ಪಟ್ಟಣ ಪಂಚಾಯಿತಿಯಿಂದ ಪುರಸಭೆ ಯಾಗಿ ಮೇಲ್ದರ್ಜೆಗೇರಿದ ಸ್ಥಳೀಯ ಆಡಳಿತ ಸಂಸ್ಥೆಗೆ ಸೇರಿದ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ 20 ವರ್ಷದ ನಂತರ ಜಿಲ್ಲಾಡಳಿತದಿಂದ ಹೊಸ ಯಂತ್ರಗಳು ಪೂರೈಕೆಯಾಗಿದ್ದು, ಕಸ ಮತ್ತು ಘನತ್ಯಾಜ್ಯ ಸಂಸ್ಕರಣಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ. ಗಾಜು, ಕಬ್ಬಿಣ, ಪ್ಲಾಸ್ಟಿಕ್‌ ಸೇರಿದಂತೆ ಹಸಿ ಕಸ ಮತ್ತು ಒಣ ಕಸ ವಿಂಗಡಿಸಿ ಘನೀಕರಣ ಮಾಡಲು ಸಿದ್ಧತೆಗಳು ನಡೆದಿವೆ.

ಚರಂಡಿ ಮತ್ತು ತಿಪ್ಪೆ ಕಸವನ್ನೇ ಗೊಬ್ಬರವನ್ನಾಗಿ ಪರಿವರ್ತಿಸುವ ಮೂಲಕ ಮರುಬಳಕೆಗೆ ಅಧಿ ಕಾರಿಗಳು ಮಹತ್ವದ ಯೋಜನೆ ರೂಪಿಸಿದ್ದಾರೆ. ಸಿಮೆಂಟ್‌ ನಗರಿ ವಾಡಿ ಪುರಸಭೆ ವ್ಯಾಪ್ತಿಯಲ್ಲಿ ಒಟ್ಟು 23 ವಾರ್ಡ್‌ಗಳಿದ್ದು, ಪ್ರತಿದಿನ ಪೌರಕಾರ್ಮಿಕರು ಹತ್ತು ಟನ್‌ ಕಸ ಸಂಗ್ರಹಿಸಿ ಘನತ್ಯಾಜ್ಯ ಘಟಕದಲ್ಲಿ ವಿಲೇವಾರಿ ಮಾಡುತ್ತಾರೆ.

ಸುಮಾರು ಐದು ಎಕರೆ ವಿಸ್ತೀರ್ಣದ ಘನತ್ಯಾಜ್ಯ ಘಟಕದಲ್ಲೀಗ ಜಿಲ್ಲಾಡಳಿತ ಸುಮಾರು 55 ಲಕ್ಷ ರೂ. ವೆಚ್ಚದ ಕಸ ಸಂಸ್ಕರಣಾ ಯಂತ್ರಗಳನ್ನು ಸ್ಥಾಪಿಸಿದೆ. ಇತ್ತೀಚೆಗೆ ಪಟ್ಟಣಕ್ಕೆ ಭೇಟಿ ನೀಡಿದ್ದ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶಿವಶರಣಪ್ಪ ನಂದಗಿರಿ, ಇಇ ಶಿವಣಗೌಡ ಪೊಲೀಸ್‌ ಪಾಟೀಲ, ಎಇಇ ಮೋಹಿನ್‌ ಹುಸೇನ ಪುರಸಭೆ ಮುಖ್ಯಾ ಧಿಕಾರಿ ವಿಠಲ ಹಾದಿಮನಿ, ಕಿರಿಯ ಆರೋಗ್ಯ ನೈರ್ಮಲ್ಯ ನಿರ್ದೇಶಕ ಬಸವರಾಜ ಪೂಜಾರಿ ಸಮ್ಮುಖದಲ್ಲಿ ಕಸ ಸಂಸ್ಕರಣಾ ಯಂತ್ರಗಳನ್ನು ಅಳವಡಿಸಿ, ತಾತ್ಕಾಲಿಕ ವಿದ್ಯುತ್‌ ಸಂಪರ್ಕ ನೀಡಿ ಯಂತ್ರಗಳ ಕಾರ್ಯ ಪರಿಶೀಲಿಸಿದ್ದಾರೆ.

ಜಿಲ್ಲಾಡಳಿತ ಈ ಯಂತ್ರಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ ಒದಗಿಸುವ ಮೂಲಕ ಪುರಸಭೆಗೆ ಹಸ್ತಾಂತರಿಸಲಿದ್ದು, ಕಸವನ್ನು ರಸ ಮಾಡುವ ದಿನಗಳು ಹತ್ತಿರವಾಗುತ್ತಿವೆ. ಪ್ರಸಕ್ತ ಕಟ್ಟಣದ ವಿವಿಧ ಬಡಾವಣೆಗಳಲ್ಲಿ ಮನೆ-ಮನೆಯಿಂದ ಕಸ ಸಂಗ್ರಹಕ್ಕೆ ಹೊಸ ವಾಹನಗಳು ಬಳಕೆಯಾಗುತ್ತಿವೆ. 40ಕ್ಕೂ ಹೆಚ್ಚು ಪೌರಕಾರ್ಮಿಕರು ನಗರದ ಸ್ವತ್ಛತೆಗೆ ಶ್ರಮಿಸುತ್ತಿದ್ದಾರೆ.

ಚರಂಡಿಗಳ ಹೂಳೆತ್ತುವ ಕಾಯಕದಿಂದ ಸಂಗ್ರಹವಾಗುತ್ತಿರುವ ಘನತ್ಯಾಜ್ಯವನ್ನು ಎಸ್‌ ಡಬ್ಯು ಎಂ ಘಟಕಕ್ಕೆ ಸಾಗಿಸಲಾಗುತ್ತಿದೆ. ಘಟಕದಲ್ಲಿ ರಾತ್ರಿ -ಹಗಲು ಸಿಬ್ಬಂದಿ ಕಾವಲು ಸೇವೆಯಲ್ಲಿದ್ದಾರೆ. ಘಟಕದಲ್ಲಿ ಕಸದ ಜತೆಗೆ ಬಳಕೆಯಾಗದ ಕೋಟ್ಯಂತರ ರೂ. ಮೌಲ್ಯದ ಹಲವು ಯಂತ್ರೋಪಕರಣಗಳು ಮಳೆ-ಗಾಳಿಗೆ ತುಕ್ಕು ಹಿಡಿದು ಹಾಳಾಗುತ್ತಿವೆ. ಆಟೋ, ಟಿಪ್ಪರ್‌ ಗಳು, ಕಸದ ತೊಟ್ಟಿ ವಿಲೇವಾರಿ ವಾಹನ, ತ್ರಿಚಕ್ರ ವಾಹನಗಳು, ಶೌಚ ಗುಂಡಿಯ ಮಲ ವಿಲೇವಾರಿ ವಾಹನ ಕೆಟ್ಟು ನಿಂತಿವೆ.

ಈ ಮೊದಲು ಸುಮಾರು ಹತ್ತು ಲಕ್ಷ ರೂ. ಖರ್ಚು ಮಾಡಿ ಖರೀದಿಸಲಾಗಿದ್ದ ಕಸ ಸಂಸ್ಕರಣ ಯಂತ್ರ ಒಮ್ಮೆಯೂ ಬಳಕೆಯಾಗದೆ ಮೂಲೆ ಸೇರಿದೆ. ಸದ್ಯ 55 ಲಕ್ಷ ರೂ. ವೆಚ್ಚದಡಿ ಖರೀದಿಸಲಾದ ಹೊಸ ಯಂತ್ರಗಳನ್ನಾದರೂ ಪುರಸಭೆ ಆಡಳಿತ ಸಮರ್ಪಕವಾಗಿ ಉಪಯೋಗ ಮಾಡಿಕೊಳ್ಳುತ್ತದೋ ಇಲ್ಲವೋ ಎಂದು ಕಾಯ್ದು ನೋಡಬೇಕಿದೆ.

ಟಾಪ್ ನ್ಯೂಸ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.