ಮೃತ್ಯುಕೂಪ ಮುಚ್ಚಿದ ಪುರಸಭೆ
Team Udayavani, Nov 30, 2018, 11:03 AM IST
ಸೇಡಂ: ಪಟ್ಟಣದ ವಿದ್ಯಾನಗರ ಮತ್ತು ವೆಂಕಟೇಶ ನಗರ ಬಡಾವಣೆಯಲ್ಲಿ ತೆರೆದ ಬಾವಿ ಮತ್ತು ಗುಂಡಿಗಳನ್ನು ಮುಚ್ಚಲು ಪುರಸಭೆ ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡರು ಮುಂದಾಗಿದ್ದಾರೆ. ಈ ಕುರಿತು ನ. 25ರಂದು ಮೃತ್ಯುಕೂಪದಂತಿವೆ ತೆರೆದ ಗುಂಡಿಗಳು ತಲೆಬರಹದಡಿ “ಉದಯವಾಣಿ’ ವರದಿ ಪ್ರಕಟಿಸಿತ್ತು. ಅಂದೇ ಪುರಸಭೆ ಮುಖ್ಯಾಧಿಕಾರಿ ಶರಣಯ್ಯಸ್ವಾಮಿ ಕರೆ ಮಾಡಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದು, ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು.
ನಂತರ ಸ್ಥಳೀಯ ಮುಖಂಡ ವೆಂಕಟೇಶ ಪಾಟೀಲ, ರವಿ ಗೊಬ್ಬಿ ಮತ್ತು ಪುರಸಭೆ ಸಿಬ್ಬಂದಿ ಸೇರಿ ವೆಂಕಟೇಶ ನಗರದ ನಡುರಸ್ತೆಯಲ್ಲಿದ್ದ ಅಪಾಯಕಾರಿ ತೆರೆದ ಬಾವಿಗೆ ಸುರಕ್ಷತಾ ಕಲ್ಲುಗಳನ್ನು ಇರಿಸಿದ್ದಾರೆ. ಅಲ್ಲದೇ ಶೀಘ್ರವೇ ತೆರೆದ ಬಾವಿ ಮತ್ತು ತಗ್ಗುಗಳನ್ನು ಮುಚ್ಚಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್