ಪಾರ್ಟಿ ಮಾಡುತ್ತಿದ್ದ ಸ್ನೇಹಿತರಿಂದಲೇ ಯುವಕನ ಕೊಲೆ
Team Udayavani, Sep 19, 2019, 3:22 PM IST
ಕಲಬುರಗಿ: ಯುವಕನೋರ್ವನನ್ನು ಸ್ನೇಹಿತರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದಲ್ಲಿ ನಡೆದಿದೆ.
ಪ್ರಶಾಂತ್ ಕೊಟರಗಿ (28) ಕೊಲೆಯಾದ ಯುವಕ. ನಗರದ ಹೊರವಲಯದ ಅಫಜಲ್ಪುರ ರಸ್ತೆಯ ಖರ್ಗೆ ಕಾಲೋನಿಯ ಮನೆಯೊಂದರಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ಪ್ರಶಾಂತ ತನ್ನ ಸ್ನೇಹಿತರೊಡನೆ ಪಾರ್ಟಿ ಮಾಡುತ್ತಿದ್ದ. ಈ ವೇಳೆ ಯಾವುದೋ ವಿಷಯಕ್ಕೆ ಜಗಳವಾಗಿದೆ. ಇದೇ ಕೋಪದಲ್ಲಿ ಪ್ರಶಾಂತ್ ನ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಇಂದು ಬೆಳಿಗ್ಗೆ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಮಹೇಶ ಮತ್ತು ವಿನೋದ ಕೊಲೆ ಆರೋಪಿಗಳೆಂದು ಗುರುತಿಲಾಗಿದೆ.
ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್