ಜಿಲ್ಲಾಡಳಿತ ನಿರ್ಧಾರಕ್ಕೆ ಮುಸ್ಲಿಂ ಮುಖಂಡರ ಆಕ್ರೋಶ
Team Udayavani, Nov 6, 2017, 11:56 AM IST
ಜೇವರ್ಗಿ: ಪಟ್ಟಣದ ಮಿನಿ ವಿಧಾನಸೌಧ ಕಚೇರಿಯ ಸಭಾಂಗಣದಲ್ಲಿ ನ.10 ರಂದು ಆಯೋಜಿಸಲಾಗಿರುವ ಟಿಪ್ಪು ಸುಲ್ತಾನ ಜಯಂತಿ ಅಂಗವಾಗಿ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ಸಹಾಯಕ ಆಯುಕ್ತ ರಾಜಪ್ಪ, ತಹಶೀಲ್ದಾರ್ ಯಲ್ಲಪ್ಪ ಸುಬೆದಾರ, ಲೋಕೋಪಯೋಗಿ ಇಲಾಖೆ ಎಇಇ ಪಲ್ಲಾ ಸತ್ಯಶೀಲರೆಡ್ಡಿ ಸೇರಿದಂತೆ ಅನೇಕ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ, ಬರುವ ನ.10 ರಂದು ತಾಲೂಕಾಡಳಿತದ ವತಿಯಿಂದ ಪಟ್ಟಣದಲ್ಲಿ ಟಿಪ್ಪು ಸುಲ್ತಾನ ಜಯಂತಿ ಆಯೋಜಿಸಲಾಗಿದ್ದು, ಬೆಳಗ್ಗೆ 9:00 ಗಂಟೆಗೆ ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮ ನಡೆಸಲಾಗುವುದು. ಯಾವುದೇ ಮೆರವಣಿಗೆ ಹಾಗೂ ಜಯಂತಿಗೆ ಸಂಬಂಸಿದ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್ಗಳನ್ನು ಹಾಕದಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಅಲ್ಲದೇ ಅಂದು ಜಿಲ್ಲಾದ್ಯಂತ 144 ಕಲಂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದ್ದರಿಂದ ಟಿಪ್ಪು ಅಭಿಮಾನಿಗಳು ಹಾಗೂ ಮುಸ್ಲಿಂ ಬಾಂಧವರು ಸಹಕರಿಸಬೇಕು ಎಂದು ಮನವಿ ಮಾಡಿದರು.
ನಂತರ ಗದ್ದಲ ಎಬ್ಬಿಸಿದ ಮುಸ್ಲಿಂ ಮುಖಂಡರು ಕಾಟಾಚಾರಕ್ಕೆ ಟಿಪ್ಪು ಸುಲ್ತಾನ ಜಯಂತಿ ಆಚರಿಸುತ್ತಿದ್ದೀರಾ ? ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮೈಸೂರು ಹುಲಿ ಟಿಪ್ಪು ಸುಲ್ತಾನ ಜಯಂತಿ ಆಚರಣೆ ಮಾಡುವುದಕ್ಕೆ ಅಡೆತಡೆ ಉಂಟು ಮಾಡುತ್ತಿರುವ ಜಿಲ್ಲಾಡಳಿತ ನಿರ್ಧಾರಕ್ಕೆ ಧಿಕ್ಕಾರ ಕೂಗಿದರು. ನ.10 ರಂದು ನಡೆಯುವ ಟಿಪ್ಪು ಸುಲ್ತಾನ ಜಯಂತಿ ಅದ್ಧೂರಿಯಿಂದ ಆಚರಣೆ ಮಾಡಬೇಕು. ಆಚರಣೆಗೆ ಯಾವುದೇ ನಿರ್ಬಂಧ ಹೇರಬಾರದು ಎಂದು ಆಗ್ರಹಿಸಿ ಸಭೆ ಬಹಿಷ್ಕರಿಸಿ ಹೊರನಡೆದರು.
ತಾಪಂ ಮಾಜಿ ಅಧ್ಯಕ್ಷ ಅಮೀರ ಹಮ್ಜಾ ಲಖಣಾಪುರ, ಮಹಿಬೂಬ ಪಾಶಾ ಕೋಬಾಳ, ಕಾಶಿಂ ಕೂಡಿ, ಮಹಿಬೂಬಸಾಬ ಕೆಂಭಾವಿ, ಮಹಿಬೂಬ ಮನಿಯಾರ ಮಳ್ಳಿ, ಬಸೀರ್ ಇನಾಮದಾರ, ಹಬೀಬ ಜಮಾದಾರ, ಗೌಸ್ ಮೈನೋದ್ದೀನ್ ಖಾದ್ರಿ ಗಂವ್ಹಾರ, ಬಾಬು ಪಾಟೀಲ ಮುತ್ತಕೋಡ, ಭಗವಂತ್ರಾಯ ಬೆಣ್ಣೂರ, ಇಬ್ರಾಹಿಂ ಪಟೇಲ ಹಾಗೂ ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ