ನಾಗಾಇದಲಾಯಿ ಸಣ್ಣ ನೀರಾವರಿ ಕೆರೆಯಲ್ಲಿ ಬಿರುಕು: ಆತಂಕದಲ್ಲಿ ಗ್ರಾಮಸ್ಥರು
Team Udayavani, Aug 2, 2022, 2:14 PM IST
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ನಾಗಾಇದಲಾಯಿ ಗ್ರಾಮದಲ್ಲಿರುವ ಸಣ್ಣ ನೀರಾವರಿ ಕೆರೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕೆಂದು ಶಾಸಕ ಅವಿನಾಶ್ ಜಾಧವ್ ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕೆರೆಯನ್ನು 2020 ರಲ್ಲಿ ದುರಸ್ತಿ ಮಾಡಿದ್ದರೂ ಆಗಾಗ ಕೆರೆಯ ಮಣ್ಣಿನ ಕುಸಿತವಾಗುತ್ತಿತ್ತು. ಕೆಲವು ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದೆ. ಯಾವುದೇ ಕ್ಷಣದಲ್ಲಿ ಒಡೆಯುವ ಸಾಧ್ಯತೆ ಇರುವುದರಿಂದ ಕೆರೆಯ ಕೆಳಭಾಗದಲ್ಲಿರುವ ಗ್ರಾಮಸ್ಥರು ಮುನ್ನೆಚ್ಚರಿಕೆ ಕ್ರಮವಾಗಿ ಎಚ್ಚರಿಕೆಯಿಂದ ಇರಬೇಕೆಂದು ಶಾಸಕರು ಮನವಿ ಮಾಡಿದರು.
ನಾಗಾಇದಲಾಯಿ ಗ್ರಾಮದಲ್ಲಿ ಸಣ್ಣ ನೀರಾವರಿ ಕೆರೆ ಕಳೆದ 2020 ಅಕ್ಟೋಬರ್ 14 ರಂದು ನೀರಿನ ರಭಸಕ್ಕೆ ಒಡೆದು ಹೋಗಿತ್ತು. ಸಚಿವ ಜೆ.ಸಿ.ಮಾಧುಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಸರಕಾರದಿಂದ 4 ಕೋಟಿ ರೂಪಾಯಿ ಮಂಜೂರು ಮಾಡಿಸಿದರು ಅದರ ದುರಸ್ತಿ ಕಾಮಗಾರಿ ಕೆಲಸ ಕಳೆದ ಮೇ ತಿಂಗಳಲ್ಲಿ ಪೂರ್ಣ ಗೊಳಿಸಲಾಗಿದೆ. ಮಳೆಗಾಲ ಪ್ರಾರಂಭದಲ್ಲೇ ಕೆರೆಯಲ್ಲಿ ಮತ್ತೆ ಬಿರುಕುಗಳು ಕಾಣಿಸುತ್ತಿವೆ. ವೇಸ್ಟ್ ವೇರ್ ಮೂಲಕ ನೀರು ಹೊರಕ್ಕೆ ಹರಿದು ಬಿಡಲಾಗುತ್ತಿದೆ. ಕೆರೆ ನೀರು ಸಂಗ್ರಹಣೆ ಮಾಡುತ್ತಿಲ್ಲ.ಕೆರೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಕುರಿತು ತಜ್ಞರಿಂದ ಪರಿಶೀಲನೆ ನಡೆಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ