ಪ್ರವಾಹ ಸಂತ್ರಸ್ತರಿಗೆ ನಾಗತಿಹಳ್ಳಿ ನೆರವು

ಭೀಮಾ ನೆರೆ ಪೀಡಿತರ ನೋವಿಗೆ ಸ್ಪಂದನೆ

Team Udayavani, Nov 15, 2020, 3:51 PM IST

ಪ್ರವಾಹ ಸಂತ್ರಸ್ತರಿಗೆ ನಾಗತಿಹಳ್ಳಿ ನೆರವು

ಕಲಬುರಗಿ: ಚಲನಚಿತ್ರ ನಿರ್ದೇಶಕ, ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ ಭೀಮಾ ನದಿ ಪ್ರವಾಹದಿಂದ ಸಂತ್ರಸ್ತರಾದ ಜನರಿಗೆ ನೆರವು ಕಲ್ಪಿಸಿ ಅವರೊಂದಿಗೆ ನ.15ರಂದು ದೀಪಾವಳಿ ಹಬ್ಬ ಆಚರಿಸಲಿದ್ದಾರೆ.

ತಮ್ಮ ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ ಹಾಗೂ ಟೆಂಟ್‌ ಸಿನಿಮಾ ಶಾಲೆ ವತಿಯಿಂದ ನೆರೆ ಪೀಡಿತರಿಗೆ ಸಹಾಯ ಹಸ್ತ ಚಾಚಿದ್ದು, ಜೇವರ್ಗಿ ತಾಲೂಕಿನ ಇಟಗಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಇದಕ್ಕೂ ಪೂರ್ವದಲ್ಲಿ ಶನಿವಾರ ನಗರಕ್ಕೆ ಆಗಮಿಸಿದ ಅವರು, ಪ್ರವಾಹ ಸಂತ್ರಸ್ತರ ದುಃಖದಲ್ಲಿ ಭಾಗಿಯಾಗಿ ನಮ್ಮ ಕೈಲಾದ ನೆರವು ನೀಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೀಮಾ ಪ್ರವಾಹದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪಾರ ಹಾನಿ ಸಂಭವಿಸಿದೆ. ಅದನ್ನು ಕಟ್ಟಿಕೊಡಲು ನಮ್ಮಿಂದ ಸಾಧ್ಯವಿಲ್ಲ.ಆದರೂ, ಪ್ರವಾಹ ಸಂತ್ರಸ್ತರಿಗೆ ಆದಷ್ಟು ನೆರವು ನೀಡುವುದರೊಂದಿಗೆ ಅಲ್ಲಿನ ಜನರಿಗೆ ದೀಪಾವಳಿ ಆಚರಿಸಲಾಗುವುದು ಎಂದರು.

ನಮ್ಮ ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ ಮತ್ತುಟೆಂಟ್‌ ಸಿನಿಮಾ ಶಾಲೆ ವತಿಯಿಂದ ನೆರವು ಸಂಗ್ರಹಿಸಿದ್ದೇವೆ. ಶಿಕ್ಷಕರು, ಕಲಾವಿದರು,ವಿದ್ಯಾರ್ಥಿಗಳು, ಸ್ನೇಹಿತರನ್ನು ಒಳಗೊಂಡು ಸಣ್ಣ ನೆರವು ನೀಡಲು ಬಂದಿದ್ದೇವೆ. ಸಂತ್ರಸ್ತರಿಗೆ ಅಕ್ಕಿ, ಬೇಳೆ, ಸಕ್ಕರೆ, ಉಪ್ಪು, ಅಡುಗೆ ಎಣ್ಣೆ, ದೀಪ, ಮಕ್ಕಳಿಗೆಓದುವ-ಬರೆಯುವ ಸಲಕರಣೆಗಳನ್ನು ವಿತರಿಸಿ ಸಿಹಿ ಹಂಚಿ, ದೀಪಾವಳಿ ಆಚರಿಸಲಾಗುವುದು ಎಂದು ಹೇಳಿದರು.

ಪ್ರಕೃತಿ ವಿಕೋಪ ಎಚ್ಚರಿಕೆ ಅಗತ್ಯ: ಪ್ರಕೃತಿ ವಿಕೋಪಗಳು ಬಹುದೊಡ್ಡ ಹಾನಿ ತಂದೊಡ್ಡುತ್ತವೆ. ಬೇರೆ-ಬೇರೆ ಕಡೆಗಳಲ್ಲಿ ಅದನ್ನು ಅರಿತುಕೊಂಡು ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಆದರೆ, ನಮ್ಮಲ್ಲಿ ಮುಂಚಿತವಾಗಿಯೇ ಅರಿತುಕೊಳ್ಳುವಲ್ಲಿ ನಾವುವಿಫಲರಾಗುತ್ತಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಕೃತಿ ಹಾನಿಯನ್ನು ನಾವು ಪದೇ-ಪದೇ ನೋಡುತ್ತಿದ್ದೇವೆ. ಆದರೆ, ಇದರಿಂದ ಪಾಠ ಕಲಿತು ಸುಧಾರಿಸುತ್ತಿದ್ದೇವೆ ಅನಿಸುತ್ತಿಲ್ಲ. ಇದು ಆದ್ಯತೆಯ ಪ್ರಶ್ನೆಯೋ ಅಥವಾ ಅಧ್ಯಯನ ಕೊರತೆಯೋತಿಳಿಯುತ್ತಿಲ್ಲ. ಇಂತಹ ಸಂಕಷ್ಟದಿಂದ ಪಾರಾಗಲುಪ್ರವಾಹ, ಅತಿವೃಷ್ಟಿ, ಬರದಂತಹ ವಿಕೋಪಗಳ ಬಗ್ಗೆ ವೈಜ್ಞಾನಿಕ ಅಧ್ಯಯನ ಮತ್ತು ಅರಿವು ಅಗತ್ಯವಾಗಿದೆ ಎಂದರು.

ಈ ಹಿಂದೆ ಕೊಡಗಿನಲ್ಲಿ ಪ್ರವಾಹ ಉಂಟಾಗಿತ್ತು. ಕಳೆದ ಬಾರಿ ಉತ್ತರ ಕರ್ನಾಟಕದಲ್ಲಿ ಈಗಕಲ್ಯಾಣ ಕರ್ನಾಟಕ ಭಾಗದ ಪ್ರವಾಹದಿಂದ ಹಾನಿ ಸಂಭವಿಸಿದೆ. ಸಂತ್ರಸ್ತರಿಗೆ ಹಲವರು ನೆರವಾಗುತ್ತಿದ್ದಾರೆ. ಬೆಂಗಳೂರು-ಕಲಬುರಗಿ ಭೌಗೋಳಿಕವಾಗಿ ಮಾತ್ರ ದೂರ ಇವೆ. ನನಗೆವೈಯಕ್ತಿಕವಾಗಿ ಆ ಭಾಗ-ಈ ಭಾಗ ಎಂಬ ಮಾನಸಿಕಅಂತರ ಇಲ್ಲ ಎಂದರು. ಮಹಿಪಾಲರೆಡ್ಡಿ ಮುನ್ನೂರ, ಸುಜಾತಾ ಜಂಗಮಶೆಟ್ಟಿ, ಪ್ರಕಾಶ ಹರಕೋಡೆ, ಪರಮೇಶ್ವರ, ಸಂತೋಷ ಇದ್ದರು.

ದಾನ ಮನಸ್ಥಿತಿ ಬದಲಾಗಲಿ : ಸಂಕಷ್ಟದಲ್ಲಿರುವ ಜನರಿಗೆ ನೆರವು, ದಾನ ನೀಡುವುದು ಒಂದು ಉತ್ತಮ ಕಾರ್ಯ. ಆದರೆ, ಬದಲಾದ ಸನ್ನಿವೇಶದಲ್ಲಿ ದಾನವನ್ನು ಅನುಮಾನದಿಂದ ನೋಡುವಂತೆ ಆಗಿದೆ. ದಾನ ಕೊಡುವುದು ಮತ್ತು ಸ್ವೀಕರಿಸುವುದು, ಕೇಳುವುದರ ಬಗ್ಗೆಯೂ ಅನಮಾನ ಮೂಡಿಸುವಂತಹ ಸನ್ನಿವೇಶ ಸೃಷ್ಟಿಯಾಗಿದೆ ಎಂದು ನಾಗತಿಹಳ್ಳಿ ಚಂದ್ರಶೇಖರ ನುಡಿದರು. ದಾನ ಜೀವವಾದ ಸಂತ್ರಸ್ತರಿಗೆ ತಲುಪುವುದೋ, ಸ್ವಾರ್ಥಕ್ಕೆ ಬಳಕೆಯಾಗುವುದೋ ಎಂದು ತಿಳಿಯದೆ ಇಂತಹ ಅನುಮಾನ ಮೂಡಲು ಕಾರಣವಾಗಿರಬಹುದು. ಬಟ್ಟೆ ದಾನ ಮಾಡಿ ಎಂದರೆ, ಮನೆಯಲ್ಲಿ ತಾವು ತೊಡದ ಬಟ್ಟೆ ಕೊಡಲಾಗುತ್ತದೆ. ಬೇಡವಾದ ವಸ್ತುಗಳನ್ನು ಕೊಡುವುದು ದಾನವಲ್ಲ, ಅದು ಮನೆ ಸ್ವತ್ಛ ಮಾಡಿಕೊಳ್ಳಲು ನೆಪವನ್ನಾಗಿ ಪರಿಭಾವಿಸಲಾಗಿದೆ ಎಂದರು.

ಕಲಬುರಗಿಗೆ ಅನೇಕಬಾರಿ ಸಾಂಸ್ಕೃತಿಕ ಕಾರಣಕ್ಕಾಗಿ ಭೇಟಿ ಕೊಟ್ಟಿದ್ದೇನೆ. ಆದರೆ, ಇದು ಭಿನ್ನ ಹಾಗೂ ಹೃದಯಕ್ಕೆ ಹತ್ತಿರವಾದ ಭೇಟಿಯಾಗಿದೆ.ಈ ಭೇಟಿ ಪ್ರವಾಹ ಸಂತ್ರಸ್ತರೊಂದಿಗೆ ದೀಪಾವಳಿ ಆಚರಿಸಿ, ಅವರಲ್ಲಿ ಜೀವನದ ಭರವಸೆ ತುಂಬುವ ಸಣ್ಣ ಪ್ರಯತ್ನ ಮಾಡುತ್ತಿದೆ. ನಾಗತಿಹಳ್ಳಿ ಚಂದ್ರಶೇಖರ, ಚಲನಚಿತ್ರ ನಿರ್ದೇಶಕ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.