ಕುಡಿವ ನೀರಿನ ಬವಣೆಗೆ ಬೇಕಿದೆ ಶಾಶ್ವತ ಪರಿಹಾರ


Team Udayavani, Jun 1, 2018, 11:12 AM IST

gul-3.jpg

ಅಫಜಲಪುರ: ತಾಲೂಕಿನ ಜನರಿಗೆ ಬೇಸಿಗೆ ಬಂತೆಂದರೆ ಆತಂಕ ಶುರುವಾಗುತ್ತದೆ. ಜನ-ಜಾನುವಾರುಗಳು ನೀರಿಲ್ಲದೆ ಪರಿತಪಿಸುವಂತೆ ಆಗುತ್ತಿದೆ. ಈ ಸಮಸ್ಯೆ ಇಂದು-ನಿನ್ನೆಯದಲ್ಲ. ಪ್ರತಿ ವರ್ಷವೂ ಇದ್ದದ್ದೆ. ಹೀಗಾಗಿ ಶಾಶ್ವತವಾಗಿ ಕುಡಿಯುವ ನೀರಿನ ಬವಣೆ ತಪ್ಪಿಸುವರು ಯಾರು ಇಲ್ಲವೇ ಎಂದು ತಾಲೂಕಿನ ಜನ ಪ್ರಶ್ನಿಸುತ್ತಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ ಅನೇಕ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇವುಗಳೆಲ್ಲ ಶಾಶ್ವತ ಪರಿಹಾರವಲ್ಲ. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವುದರಿಂದ ಸಮಸ್ಯೆ ಪರಿಹಾರ ಆಗುವುದಿಲ್ಲ. ಬೇಸಿಗೆಯಲ್ಲಿ ಮಕ್ಕಳು, ಮಹಿಳೆಯರು, ಬಾಣಂತಿಯರು, ವೃದ್ಧರು ಸೇರಿದಂತೆ ಎಲ್ಲರೂ ಕುಡಿಯುವ ನೀರಿಗಾಗಿ ಕಿ.ಮೀ. ಗಟ್ಟಲೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 

ಹಳ್ಳಿಗಳಲ್ಲಿ ಆಹಾಕಾರ: ತಾಲೂಕಿನ ಚಿಂಚೋಳಿ, ರೇವೂರ (ಕೆ), ಬಳೂರ್ಗಿ, ಬಳೂರ್ಗಿ ತಾಂಡಾ, ಕೋಗನೂರ, ಅಂಕಲಗಿ, ಚಿಣಮಗೇರಾ, ಚವಡಾಪುರ, ಮಾಶಾಳ, ಹೊಸೂರ, ಭೋಗನಳ್ಳಿ, ಸಿದ್ದನನೂರ, ಅತನೂರ, ಗೊಬ್ಬೂರ (ಬಿ), ಅವರಾದ, ಇಗಳಗಿ, ಹಿಂಚಗೇರಾ, ಆನೂರ, ತೆಲ್ಲೂರ, ರೇವೂರ (ಬಿ), ಅರ್ಜುಣಗಿ, ಹಳಿಯಾಳ, ಜೇವರ್ಗಿ (ಬಿ), ಕರ್ಜಗಿ, ಉಡಚಾಣ ಹಟ್ಟಿ, ಶಿವೂರ, ಹೊಸೂರ, ಬಿಂಗೋಳಿ ತಾಂಡಾ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಭೀಕರ ಸಮಸ್ಯೆ ಕಾಡುತ್ತಿದೆ. 

ಅಫಜಲಪುರ ನಗರಕ್ಕೂ ಈ ಸಮಸ್ಯೆ ತಪ್ಪಿಲ್ಲ. ನಗರದ ಹತ್ತಿರದಲ್ಲೇ ಭೀಮಾ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಿಸಲಾಗಿದೆ. ಇಲ್ಲಿ ನೂರಾರು ಕಿ.ಮೀ ನೀರು ನಿಲ್ಲಿಸಲಾಗಿದೆ. ಆದರೂ ಪಟ್ಟಣಕ್ಕೆ ಕುಡಿಯುವ ನೀರು ಸರಿಯಾಗಿ ಸಿಗುತ್ತಿಲ್ಲ. ನದಿಯಲ್ಲಿ ನೀರಿದ್ದರೂ ಶುದ್ಧೀಕರಿಸದೇ ಸರಬರಾಜು ಮಾಡಲಾಗುತ್ತಿದೆ.

ಇದರಿಂದ ಪಟ್ಟಣದ ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರಿತಪಿಸುವಂತೆ ಆಗಿದೆ. ಒಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಅಂತಜರ್ಲ ಮಟ್ಟದ ಕುಸಿತ ಹಾಗೂ ನೀರಿನ ಮೂಲಗಳ ಕೊರತೆ ಕಾರಣದಿಂದ ನೀರು ಲಭ್ಯವಾಗುತ್ತಿಲ್ಲ. ಅದರಂತೆ ಪಟ್ಟಣಕ್ಕೆ ಸರಿಯಾಗಿ ನದಿ ನೀರು ಪೂರೈಕೆಯಾಗುತ್ತಿಲ್ಲ. ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಭೀಕರ ಸಮಸ್ಯೆ ಎದುರಿಸಬೇ ಕಾದ ಸಂದರ್ಭ ಬಂದರೂ ಬರಬಹುದು.

ಬಹುಗ್ರಾಮ ಕುಡಿಯುವ ನೀರು ಯೋಜನೆ: ತಾಲೂಕಿನ ಮಾಶಾಳ, ಉಡಚಾಣ, ದೇಸಾಯಿ ಕಲ್ಲೂರ ಸೇರಿದಂತೆ ಅನೇಕ ಕಡೆಗಳಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಅಡಿಯಲ್ಲಿ ಕೋಟ್ಯಂತರ ರೂ. ಖರ್ಚು ಮಾಡಿ ನೀರಿನ ವ್ಯವಸ್ಥೆ ಮಾಡಬೇಕಾಗಿತ್ತು. ಆದರೆ ಯೋಜನೆ ವಿಫಲವಾಗಿದೆ. ಬಹುಗ್ರಾಮ ಕುಡಿಯುವ ನೀರು ಯೋಜನೆಗಳು ಕೆಲವು ಕಡೆ ಪೂರ್ಣಗೊಂಡಿವೆ. ಕೆಲವು ಕಡೆ ಪೂರ್ಣಗೊಂಡಿಲ್ಲ. ಹನಿ ನೀರು ಸಹ ಈ ಯೋಜನೆಯಿಂದ ಜನರಿಗೆ ಲಭ್ಯವಾಗಿಲ್ಲ. ತಪ್ಪದ ಅಲೆದಾಟ: ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಮಹಿಳೆಯರು, ಬಾಣಂತಿಯರು, ವಿದ್ಯಾರ್ಥಿಗಳು, ವೃದ್ಧರು ಎನ್ನದೆ ಕೊಡಗಳನ್ನು ಹಿಡಿದುಕೊಂಡು ದಿನವಿಡಿ ಖಾಸಗಿಯವರ ಹೊಲ ಗದ್ದೆಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಸದ್ಯ 150 ಬೋರವೇಲ್‌ಗ‌ಳ ಬೇಡಿಕೆ ಬಂದಿದೆ. ಆದಷ್ಟು ಬೇಗ ಬೋರವೆಲ್‌ ಕೊರೆಸಿ ಗ್ರಾಮಸ್ಥರಿಗೆ ನೀರು ಒದಗಿಸಲಾಗುವುದು.
ಎಂ.ವೈ. ಪಾಟೀಲ, ಶಾಸಕರು

 ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.