ಕಸದ ರಾಶಿ ವಿಲೇವಾರಿಗೆ ಶಹಾಬಾದ ನಗರಸಭೆ ನಿರ್ಲಕ್ಷ್ಯ


Team Udayavani, Jan 15, 2019, 7:14 AM IST

gul-4.jpg

ಶಹಾಬಾದ: ನಗರದ ರಸ್ತೆ ಪಕ್ಕದಲ್ಲೆಡೆ ಕಸದ 12ನಾಯಿ, ದನಗಳ ಹಿಂಡು. ಇದು ಶಹಾಬಾದ ನಗರಸಭೆ ವ್ಯಾಪ್ತಿಯ ಇಂಡಿಯಾ ಲಾಡ್ಜ್ ಮುಂಭಾಗದಲ್ಲಿ ಕಂಡು ಬರುವ ದೃಶ್ಯ. ನಗರದ ರಾಘವೇಂದ್ರ ಮಂದಿರದ ಪಕ್ಕದ ರಸ್ತೆ ಹಾಗೂ ಇಂಡಿಯಾ ಲಾಡ್ಜ್ ಮುಂಬಾಗದ ಪೆಟ್ರೋಲ್‌ ಪಂಪ್‌ ಪಕ್ಕದಲ್ಲಿ ಕಸ ಚೆಲ್ಲಾಪಿಲ್ಲಿಯಾಗಿ ಬೀಳುತ್ತಿದೆ. ಇದನ್ನು ಕೇಳುವರು ಇಲ್ಲದಂತಾಗಿದೆ.

ಬೀದಿ ವ್ಯಾಪಾರಿಗಳು, ಹೋಟೆಲ್‌, ಲಾಡ್ಜ್ ಹಾಗೂ ಕಲ್ಯಾಣಮಂಟಪದವರು ಕಸವನ್ನು ಮನಬಂದಂತೆ ರಸ್ತೆ ಮೇಲೆ ಎಸೆಯುತ್ತಿದ್ದಾರೆ. ಸಾಕಷ್ಟು ಕಸ ಸಂಗ್ರಹವಾಗಿದ್ದರೂ ವಿಲೇವಾರಿ ಮಾಡುವಲ್ಲಿ ನಗರಸಭೆ ಮುಂದಾಗುತ್ತಿಲ್ಲ. ಇದರಿಂದ ಕಸ ಕೊಳೆತು ದುರ್ನಾತ ಬೀರುತ್ತಿದ್ದು, ರೋಗಗಳಿಗೆ ಆಹ್ವಾನ ನೀಡಿದಂತಾಗಿದೆ. ಸಾರ್ವಜನಿಕರು, ಪ್ರಯಾಣಿಕರು ನಿತ್ಯ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾದರೂ ಕಸದ ವಿಲೇವಾರಿ ಸಮರ್ಪಕ ರೀತಿಯಲ್ಲಿ ಮಾಡುತ್ತಿಲ್ಲ. ಇದರಿಂದ ನಗರದ ಅಂದ ಹಾಳಾಗುತ್ತಿದೆ. ಸ್ವಚ್ಛತೆ ಎಂಬುದು ಮಾಯವಾಗುತ್ತಿದೆ.

ನಗರಸಭೆಯಿಂದ ಗುತ್ತಿಗೆ ಆಧಾರಿತ ಕಾರ್ಮಿಕರನ್ನು ತೆಗೆದುಕೊಳ್ಳಲಾಗಿದೆ. ಆದರೆ ಇಲ್ಲಿ ಸ್ವಚ್ಛತೆ ಮಾಡಿಸಲು ಅಧಿಕಾರಿಗಳು ಮುಂದಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

ಹಂದಿಗಳು ಎಲ್ಲೆಂದರಲ್ಲಿ ಓಡಾಡಿಕೊಂಡಿವೆ. ಇನ್ನೂ ಬೀಡಾಡಿ ದನಗಳು ಕಸದ ತೊಟ್ಟಿಯಲ್ಲಿ ಕಂಡ ಆಹಾರಕ್ಕಾಗಿ ಹಂದಿಗಳೊಂದಿಗೆ ಪೈಪೋಟಿಗಿಳಿಯುತ್ತವೆ. ಇದರಿಂದ ನಗರದ ತುಂಬೆಲ್ಲ ಕಸ ಹರಡಿ ಅಂದ ಹಾಳಾಗುತ್ತಿದೆ. ಸೊಳ್ಳೆಗಳ ಸಂಖ್ಯೆ ಹೆಚ್ಚಾಗಿ ಇಲ್ಲಿನ ಜನರು ನಿತ್ಯ ನರಕಯಾತನೆ ಪಡುವಂತಾಗಿದೆ. ನಗರದಲ್ಲಿ ಬಿದ್ದಿರುವ ಕಸದ ರಾಶಿ ವಿಲೇವಾರಿ ಮಾಡುವರೇ ಎಂದು ಕಾದು ನೋಡಬೇಕಾಗಿದೆ.

ಪ್ರವೀಣ ರಾಜನ್‌, ಉಪನ್ಯಾಸಕರು.
ನಗರಸಭೆ ಅಧಿಕಾರಿಗಳು ನಗರದಲ್ಲಿ ಸುತ್ತು ಹಾಕುವುದೇ ಇಲ್ಲ. ಹವಾನಿಯಂತ್ರಿತ ಕೊಠಡಿಯಲ್ಲೇ ಕುಳಿತು ಹೋಗುತ್ತಿದ್ದಾರೆ. ನಗರದಲ್ಲಿರುವ ಸಮಸ್ಯೆ ಅರಿಯಬೇಕಾದರೆ ನಗರದಲ್ಲಿ ಸುತ್ತು ಹಾಕಿ ತುಂಬಿರುವ ಕಸ ವಿಲೇವಾರಿ ಮಾಡಿಸಲು ಮುಂದಾಗಲಿ. ಬೀದಿಗೆ ಬಿದ್ದಿರುವ ಕಸಕ್ಕೆ ಕಡಿವಾಣ ಹಾಕಿಸಲಿ.

 ಬಡಾವಣೆ ನಿವಾಸಿಗಳು
ಶ್ರೀಮಂತರ ಹಾಗೂ ಪ್ರಬಲ ರಾಜಕೀಯ ಮುಖಂಡರ ವಾರ್ಡ್‌ಗಳ ಸ್ವಚ್ಛತೆಗೆ ಮುಂದಾಗುವ ಅಧಿಕಾರಿಗಳು ಪೆಟ್ರೋಲ್‌ ಪಂಪ್‌ ಹಾಗೂ ರಾಘವೇಂದ್ರ ಮಂದಿರದ ಪಕ್ಕದ ರಸ್ತೆ ಮೇಲೆ ಕಸ ಬಿದ್ದರೂ ವಿಲೇವಾರಿ ಮಾಡಿಸಲು ಮುಂದಾಗುತ್ತಿಲ್ಲ. ಕಸ ದಾಟಿಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಪೌರಾಯುಕ್ತರೇ ಈ ಕಡೆ ಗಮನಹರಿಸಬೇಕು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.