ಕಮಿಷನರೇಟ್‌ ಕಚೇರಿಗೆ ನೂತನ ಕಟ್ಟಡ


Team Udayavani, Oct 22, 2019, 12:04 PM IST

gb-tdy1

ಕಲಬುರಗಿ: ಕಳೆದ ಫೆಬ್ರವರಿಯಲ್ಲಿ ಕಾರ್ಯಾರಂಭವಾಗಿರುವ ಕಲಬುರಗಿ ನಗರ ಪೊಲೀಸ್‌ ಆಯುಕ್ತಾಲಯದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಪೊಲೀಸ್‌ ಇಲಾಖೆ ಸಿದ್ಧತೆ ನಡೆಸಿದ್ದು, 18.05 ಕೋಟಿ ರೂ. ವೆಚ್ಚದಲ್ಲಿ ಹೊಸ ಕಚೇರಿ ತಲೆ ಎತ್ತಲಿದೆ.

ನಗರದ ಸೂಪರ್‌ ಮಾರ್ಕೆಟ್‌ನ ಹಳೆ ಪಾರ್ಕಿಂಗ್‌ ಸ್ಥಳದಲ್ಲಿ ಪೊಲೀಸ್‌ ಆಯುಕ್ತಾಲಯ ನಿರ್ಮಾಣವಾಗಲಿದೆ. ರಾಜ್ಯ ಪೊಲೀಸ್‌ ಗೃಹ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಕಟ್ಟಡ ನಿರ್ಮಾಣದ ಹೊಣೆ ಹೊತ್ತಿದೆ. ರಾಯಚೂರು ಜಿಲ್ಲೆ ಮಾನ್ವಿಯ ಎಂ. ಈರಣ್ಣ ಎಂಬುವರು ಗುತ್ತಿಗೆ ಪಡೆದಿದ್ದಾರೆ. ಹನ್ನೊಂದು ತಿಂಗಳೊಳಗೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವ ಯೋಜನೆ ಹಾಕಿಕೊಳ್ಳಲಾಗಿದೆ.

ಫೆ.23ರಿಂದ ನಗರದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪ್ರಾದೇಶಿಕ ಕಚೇರಿ (ಹಳೆ ಐಜಿಪಿ ಕಚೇರಿ)ಯಲ್ಲಿ ಕಮಿಷನರೇಟ್‌ ಕಚೇರಿ ತಾತ್ಕಾಲಿಕವಾಗಿ ಆರಂಭವಾಗಿದೆ. ಸುಮಾರು 39.56 ಲಕ್ಷ ರೂ. ವೆಚ್ಚದಲ್ಲಿ ಕಚೇರಿ ನವೀಕರಿಸಿ ಅದರಲ್ಲೇ ಕಾರ್ಯಾಲಯನಡೆಸಲಾಗುತ್ತಿದೆ.

ಆರಂಭದಲ್ಲಿ ಈಶಾನ್ಯ ವಲಯದ ಐಜಿಪಿ ಮನೀಷ್‌ ಖಬೇಕರ್‌ ಪ್ರಭಾರಿ ಆಯುಕ್ತರಾಗಿ ಜವಾಬ್ದಾರಿ ನಿರ್ವಹಿಸಿಕೊಂಡಿದ್ದರು. ಈಗ ಆಯುಕ್ತಾಲಯದ ಮೊದಲ ಪೂರ್ಣಪ್ರಮಾಣದ ಆಯುಕ್ತರಾಗಿ ಎಂ.ಎನ್‌ .ನಾಗರಾಜು ಕಾರ್ಯ ನಿರ್ವಹಿಸುತ್ತಿದ್ದಾರೆ. ಸೆ.9ರಂದು ಅಧಿಕಾರ ವಹಿಸಿಕೊಂಡಿರುವ ಎಂ.ಎನ್‌.ನಾಗರಾಜು, ರವಿವಾರ (ಅ.20) ಆಯುಕ್ತಾಲಯಕ್ಕೆ ಗುರುತಿಸಿರುವ ಸ್ಥಳ ಪರಿಶೀಲಿಸಿದರು. ಅಲ್ಲಿ ಮುಳ್ಳು-ಕಂಟಿ ಬೆಳೆದಿದ್ದು, ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ಸಿಗಲಿದೆ ಎನ್ನುತ್ತವೆ ಪೊಲೀಸ್‌ ಇಲಾಖೆಯ ಮೂಲಗಳು.

ಸುಸಜ್ಜಿತ ಕಟ್ಟಡ: ಕಲಬುರಗಿ ಪೊಲೀಸ್‌ ಆಯುಕ್ತಾಲಯ ರಾಜ್ಯದ ಆರನೇ ಆಯುಕ್ತಾಲಯ ಎಂಬ ಹೆಗ್ಗಳಿಕೆ ಹೊಂದಿದೆ. ಆಯುಕ್ತಾಲಯವು ಒಟ್ಟು 8,720 ಚದರ ಮೀಟರ್‌ ವಿಸ್ತೀರಣೆದಲ್ಲಿ ತಲೆ ಎತ್ತಲಿದೆ. ಸ್ಟಿಲ್ಟ್  ಮಹಡಿ, ನೆಲ ಮಹಡಿ, ಮೊದಲ ಮಹಡಿ ಹಾಗೂ ಎರಡನೇ ಮಹಡಿ ಕಟ್ಟಡ ಇದಾಗಿದೆ.

ನೈಸರ್ಗಿಕ ಗಾಳಿ ಮತ್ತು ಬೆಳಕು ಹೊಂದಿರುವ ಕಟ್ಟಡ ವಿನ್ಯಾಸ ಮಾಡಲಾಗಿದೆ. ಸ್ಟಿಲ್ಟ್ ಮಹಡಿಯಲ್ಲಿ ವಾಹನ ನಿಲುಗಡೆ, ಚಾಲಕರು, ಭದ್ರತಾ ಸಿಬ್ಬಂದಿ ಮತ್ತು ಶೌಚಾಲಯದ ಕೋಣೆ ಹೊಂದಿರಲಿದೆ. ನೆಲ ಮಹಡಿಯಲ್ಲಿ ಮಹಿಳಾ ಪೊಲೀಸ್‌ ವಿಭಾಗ, ಸೈಬರ್‌ ವಿಭಾಗ, ಪಾಸ್‌ಪೋರ್ಟ್‌ ವಿಭಾಗ, ಅಕೌಂಟ್‌ ವಿಭಾಗ, ಕಂಪ್ಯೂಟರ್‌-ಸರ್ವರ್‌ ಕೋಣೆ, ದಾಖಲಾತಿ ಕೋಣೆ, ಸಿಸಿಆರ್‌ಬಿ ಮತ್ತು ಸಿಸಿಐ ಸಿಬ್ಬಂದಿ ಕೊಠಡಿ ಇರಲಿದೆ.

ಮೊದಲ ಮಹಡಿ ಆಯುಕ್ತಾಲಯದ ಮುಖ್ಯ ವಿಭಾಗಗಳನ್ನು ಹೊಂದಿರಲಿದೆ. ಆಯುಕ್ತರ ಕಚೇರಿ, ಮೀಟಿಂಗ್‌ ಹಾಲ್‌, ಕಾನೆ#ರನ್ಸ್‌ ಹಾಲ್‌, ಅಧಿಕಾರಿಗಳ ವಿಶ್ರಾಂತಿ ಕೋಣೆ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗ, ನ್ಯಾಯಾಂಗ ವಿಭಾಗ, ನ್ಯಾಯಾಂಗ ಸಿಬ್ಬಂದಿ ಕೋಣೆ, ವೈರ್‌ಲೆಸ್‌ ವಿಭಾಗ, ಎಸಿಪಿ, ಡಿಸಿಪಿ 1, 2 ಮತ್ತು 3 ಕೊಠಡಿಗಳು, ಬೆರಳೆಚ್ಚು, ಫೋಟೋಗ್ರಫಿ, ಪುರುಷ ಮತ್ತು ಮಹಿಳೆಯರ ಪ್ರತ್ಯೇಕ ಊಟದ ಕೋಣೆಗಳನ್ನು ನಿರ್ಮಿಸಲಾಗುತ್ತದೆ.

ಎರಡನೇ ಮಹಡಿಯಲ್ಲಿ ಕಂಪ್ಯೂಟರ್‌ ತರಬೇತಿ ವಿಭಾಗ, ಸಿಸಿಟಿವಿ ನಿಗಾ ವಿಭಾಗ, ಟ್ರಾಫಿಕ್‌ ನಿಯಂತ್ರಣ ಕೊಠಡಿ, ಎಸಿಪಿ, ಡಿಸಿಪಿ 4, 5 ಮತ್ತು 6 ಕೋಣೆ ಮತ್ತು ಗ್ರಂಥಾಲಯ ಇರಲಿದೆ. ಪೊಲೀಸ್‌ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಎ, ಬಿ, ಸಿ ಮತ್ತುಡಿ ಹೀಗೆ ನಾಲ್ಕು ಉಪ ವಿಭಾಗಗಳು ಕಾರ್ಯ ನಿರ್ವಹಿಸುತ್ತಿವೆ. ಗ್ರಾಮೀಣ ಉಪ ವಿಭಾಗದ ನಾಲ್ಕು (ಗ್ರಾಮೀಣ, ವಿಶ್ವವಿದ್ಯಾಲಯ, ಫರತಾಬಾದ್‌ ಮತ್ತು ಎಂ.ಬಿ.ನಗರ) ಠಾಣೆಗಳು ಸಹ ಆಯುಕ್ತಾಲಯದ ವ್ಯಾಪ್ತಿಗೆ ಒಳಪಟ್ಟಿವೆ.

 

-ರಂಗಪ್ಪ ಗಧಾರ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.