ಅಧ್ಯಕ್ಷಗಾದಿಗಾಗಿ ಡಿಮ್ಯಾಂಡಪ್ಪೋ ಡಿಮ್ಯಾಂಡ್‌!

ಮೀಸಲು ನಿಗದಿಗೂ ಮುನ್ನವೇ ತಂತ್ರಗಾರಿಕೆ , ಪಕ್ಷಗಳ ಬೆಂಬಲಿತರ ಮೇಲೆ ಹದ್ದಿನ ಕಣ್ಣು

Team Udayavani, Jan 3, 2021, 4:03 PM IST

ಅಧ್ಯಕ್ಷಗಾದಿಗಾಗಿ ಡಿಮ್ಯಾಂಡಪ್ಪೋ ಡಿಮ್ಯಾಂಡ್‌!

ಜೇವರ್ಗಿ: ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಗ್ರಾಮ ಪಂಚಾಯಿತಿ ಚುನಾವಣೆಮುಗಿಯುತ್ತಿದ್ದಂತೆ, ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಬೆಂಬಲಿತ ಸದಸ್ಯರುಹಾಗೂ ಯಾರ ಬೆಂಬಲವೂ ಇಲ್ಲದೇ ಆರಿಸಿ ಬಂದವರಿಗೂ ಡಿಮ್ಯಾಂಡ್‌ ಹೆಚ್ಚಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷಸ್ಥಾನಗಳಿಗೆ ಚುನಾವಣೆ ಅಧಿಕಾರಿಗಳಾದಜಿಲ್ಲಾಧಿ ಕಾರಿಗಳು ಮೀಸಲು ನಿಗದಿಪಡಿಸಲುಇನ್ನು ಕಾಲಾವಕಾಶ ಹಿಡಿಯುತ್ತದೆ.ಆದರೂ ಪಂಚಾಯಿತಿಯಲ್ಲಿ ತಮ್ಮ ಪಕ್ಷದಬೆಂಬಲಿತರೇ ಗದ್ದುಗೆ ಹಿಡಿಯುವಂತೆಮಾಡಲು ರಾಜಕೀಯ ನಾಯಕರು ತಂತ್ರಗಾರಿಕೆ ಶುರು ಮಾಡಿದ್ದಾರೆ.ಚುನಾವಣೆಯಲ್ಲಿ ವಿವಿಧ ಪಕ್ಷಗಳಬೆಂಬಲದಿಂದ ಗೆಲುವು ಸಾಧಿ ಸಿರುವಸದಸ್ಯರು ಯಾವ್ಯಾವ ವರ್ಗಕ್ಕೆ ಸೇರಿದವರುಎನ್ನುವ ಪಟ್ಟಿಯನ್ನು ರಾಜಕೀಯಪಕ್ಷಗಳು ಸಿದ್ಧಪಡಿಸಿಕೊಂಡಿವೆ. ಯಾವ ವರ್ಗದ ಸದಸ್ಯರು ಪಕ್ಷಗಳೊಂದಿಗೆಗುರುತಿಸಿಕೊಂಡಿಲ್ಲವೋ ಅಂತಹವರನ್ನುಸೆಳೆಯುವ ಪ್ರಯತ್ನ ನಡೆಯುತ್ತಿದೆ.

ಚುನಾವಣೆಯಲ್ಲಿ ಇಂತಹದೇ ಪಕ್ಷದ ಬೆಂಬಲಿಗರು ಎಂದು ಹೇಳಿಕೊಂಡುಗೆದ್ದವರ ಮೇಲೂ ರಾಜಕೀಯ ನಾಯಕರಿಗೆ ವಿಶ್ವಾಸವಿಲ್ಲ. ಹಣ, ಅಧಿಕಾರದಂತಹ ಆಮಿಷಕ್ಕೆ ಒಳಗಾಗಿ ಎಲ್ಲಿ ಕೈ ಕೊಡುತ್ತಾರೋ ಎನ್ನುವ ಆತಂಕವೂ ಕಾಡುತ್ತಿದೆ. ಈಗಾಗಲೇ ತಾಲೂಕಿನ ಕೆಲವು ಕಡೆ ಒಂದು ಪಕ್ಷದ ಬೆಂಬಲ ಪಡೆದು ಜಯ ಸಾಧಿಸಿ ಮತ್ತೂಂದು ಪಕ್ಷದ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಪಕ್ಷದ ಬೆಂಬಲಿತ ಸದಸ್ಯರ ಮೇಲೆ ಹದ್ದಿನ ಕಣ್ಣು ಇಡುತ್ತಿದ್ದಾರೆ.

ಪಂಚಾಯಿತಿ ವರಿಷ್ಠ ಸ್ಥಾನಗಳಿಗೆ ಯಾವುದೇ ಮೀಸಲಾತಿ ನಿಗದಿಯಾದರೂಆ ವರ್ಗದ ಸದಸ್ಯರು ಪಕ್ಷದೊಂದಿಗೆಇರುವಂತೆ ನೋಡಿಕೊಳ್ಳಲಾಗುತ್ತಿದೆ.ಇದಕ್ಕಾಗಿ ಅವರ ಇಷ್ಟಾರ್ಥ ಈಡೇರಿಸುವಕಾರ್ಯವೂ ನಡೆದಿದೆ. ಒಟ್ಟಿನಲ್ಲಿ ಸದಸ್ಯರಿಗೆ ಫುಲ್‌ ಡಿಮ್ಯಾಂಡ್‌ ಬಂದಿದೆ.ತಾಲೂಕಿನ 23 ಗ್ರಾಪಂಗಳಲ್ಲಿಬಿಜೆಪಿ, ಕಾಂಗ್ರೆಸ್‌ ಬೆಂಬಲಿಗರು ಪಾರುಪತ್ಯ ಮೆರೆದಿದ್ದಾರೆ. ಮೂರ್‍ನಾಲ್ಕು ಪಂಚಾಯಿತಿಗಳಲ್ಲಿ ಜೆಡಿಎಸ್‌ ಬೆಂಬಲಿಗರುಚುನಾಯಿತರಾಗಿದ್ದಾರೆ. ಕೆಲ ಮೂಲಗಳಪ್ರಕಾರ ಬಿಜೆಪಿ ಹಾಗೂ ಕಾಂಗ್ರೆಸ್‌ ಅಧಿಕಾರಹಿಡಿಯಲು ಸಮಬಲ ಸಾ ಧಿಸಬಹುದು ಎಂದು ಅಂದಾಜಿಸಲಾಗಿದೆ.

ಆಡಳಿತಾರೂಢ ಬಿಜೆಪಿ ಮೀಸಲಾತಿ ರಾಜಕೀಯ ಮಾಡಿದಲ್ಲಿ ಕಾಂಗ್ರೆಸ್‌ ಹಾಗೂಜೆಡಿಎಸ್‌ ಬೆಂಬಲಿಗರು ಸುಲಭವಾಗಿ ಸಿಗುವ ಅಧಿಕಾರ ಪಡೆಯಲು ಸಾಕಷ್ಟುಕಸರತ್ತು ನಡೆಸಬೇಕಾಗುತ್ತದೆ. ಮೀಸಲುನಿಗದಿ ನಂತರವಷ್ಟೇ ಗ್ರಾಮ ಪಂಚಾಯಿತಿಗಳ ರಾಜಕೀಯ ಮೇಲಾಟ ನಡೆಯಲಿದೆ.

 

ವಿಜಯಕುಮಾರ ಎಸ್‌.ಕಲ್ಲಾ

ಟಾಪ್ ನ್ಯೂಸ್

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.