ಯಡ್ರಾಮಿ ತಾಲೂಕಲ್ಲಿ ಮೂಲಸೌಕರ್ಯ ಮರೀಚಿಕೆ; ಹೆಸರಿಗಷ್ಟೇ ತಾಲೂಕು

ಶಾಸಕ ಡಾ|ಅಜಯಸಿಂಗ್‌ ಇಚ್ಛಾಶಕ್ತಿ ತೋರಬೇಕು ಎಂಬುದು ಜನರ ಆಶಯವಾಗಿದೆ.

Team Udayavani, May 29, 2023, 6:11 PM IST

ಯಡ್ರಾಮಿ ತಾಲೂಕಲ್ಲಿ ಮೂಲಸೌಕರ್ಯ ಮರೀಚಿಕೆ; ಹೆಸರಿಗಷ್ಟೇ ತಾಲೂಕು

ಯಡ್ರಾಮಿ: ತಾಲೂಕು ರಚನೆಯಾಗಿ ನಾಲ್ಕು ವರ್ಷಗಳೇ ಕಳೆದರೂ ಮೂಲಭೂತ ಸೌಕರ್ಯಗಳು ಮರೀಚಿಕೆ ಎಂಬಂತಾಗಿದೆ. ತಾಲೂಕು ಕೇಂದ್ರ ಹೊಂದಿರಬೇಕಾದ ಮೂಲ ಸೌಲಭ್ಯಗಳು ಸಿಗದೇ ಹೆಸರಿಗಷ್ಟೇ ತಾಲೂಕು ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನಲ್ಲಿ ಸದ್ಯ ತಹಶೀಲ್ದಾರ್‌ ಕಚೇರಿ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಕಾರ್ಯಾಲಯಗಳನ್ನು ಹೊರತು ಪಡಿಸಿದರೆ ತಾಲೂಕು ಕೇಂದ್ರದಲ್ಲಿರಬೇಕಾದ ಕೃಷಿ ಸಹಾಯಕ ನಿರ್ದೇಶಕ ಕಚೇರಿ, ಬಿಇಒ,
ಅರಣ್ಯ, ಪೊಲೀಸ್‌ ವೃತ್ತ ನಿರೀಕ್ಷಕರ ಕಚೇರಿ, ಬಸ್‌ ಡಿಪೋ, ಉಪ ನೋಂದಣಿ ಕಚೇರಿ, ಭೂ ಮಾಪನ ಇಲಾಖೆ, ತೋಟಗಾರಿಕೆ, ಅಗ್ನಿಶಾಮಕ, ಸಮಾಜ ಕಲ್ಯಾಣ, ಲೋಕೋಪಯೋಗಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಮಹಿಳಾ ಮತ್ತು ಮಕ್ಕಳ ಇಲಾಖೆ ಕಚೇರಿ ಸೇರಿದಂತೆ ಇತರೆ ಕಾರ್ಯಾಲಯಗಳನ್ನು ತೆರೆಯಬೇಕು.

ತಾಲೂಕಿನ ಜನತೆ ಈಗಲೂ ಸರಕಾರಿ ಕೆಲಸಗಳಿಗಾಗಿ ಜೇವರ್ಗಿಗೆ ತೆರಳುವುದು ಸಾಮಾನ್ಯವಾಗಿದೆ. ರೈತರು, ವೃದ್ಧರು, ಮಹಿಳೆಯರು, ವಿದ್ಯಾರ್ಥಿಗಳು, ಅಂಗವಿಕಲರು ಪರದಾಡುವಂತಾಗಿದೆ. ಡಾ|ಅಜಯಸಿಂಗ್‌ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದು, ಈ ಬಾರಿಯಾದರೂ ತಾಲೂಕಿನಲ್ಲಿ ಎಲ್ಲ ಕಚೇರಿಗಳು ಆರಂಭವಾಗಲಿವೆ ಎಂಬ ನಿರೀಕ್ಷೆಯಲ್ಲಿ ಈ ಭಾಗದ ಜನರಿದ್ದಾರೆ.

ಈಗಾಗಲೇ ತಾಲೂಕು ಆಡಳಿತ ಸೌಧ ಹಾಗೂ ನ್ಯಾಯಾಲಯ ಕಟ್ಟಡದ ನಿರ್ಮಾಣಕ್ಕೆ ತಲಾ ಐದು ಎಕರೆ ಭೂಮಿ ಮಂಜೂರಾಗಿದೆ. ಸದ್ಯದ ರಾಜ್ಯ ಸರ್ಕಾರದಿಂದ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ತರುವಲ್ಲಿ ಡಾ| ಅಜಯಸಿಂಗ್‌ ಹೆಚ್ಚಿನ ಮುತುವರ್ಜಿ ವಹಿಸಿದರೆ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಕಳೆದ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಧೋರಣೆ ಅನುಸರಿಸಿತ್ತು ಎಂಬುದು ಶಾಸಕರ ಪ್ರಬಲ ಆರೋಪ.

ಆದರೀಗ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದಿರುವುದರಿಂದ ಅನುದಾನ ತರುವಲ್ಲಿ ಯಾವ ಅಡೆತಡೆಯಾಗದು. ನೂತನ ಯಡ್ರಾಮಿ ತಾಲೂಕಿನ ಜನತೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಶಾಸಕ ಡಾ|ಅಜಯಸಿಂಗ್‌ ಇಚ್ಛಾಶಕ್ತಿ ತೋರಬೇಕು ಎಂಬುದು ಜನರ ಆಶಯವಾಗಿದೆ.

ಯಡ್ರಾಮಿ ತಾಲೂಕು ಎಂದು ಹೇಳಲು ನಾಚಿಕೆ ಬರುತ್ತಿದೆ. ತಾಲೂಕಾಗಿ ನಾಲ್ಕು ವರ್ಷಗಳೇ ಕಳೆದಿವೆ. ಆದರೆ ಅನೇಕ ಕಚೇರಿಗಳು ಇರದೇ ಇರುವುದರಿಂದ ಜೇವರ್ಗಿಗೆ ಅನಿವಾರ್ಯವಾಗಿ ತೆರಳಬೇಕಾಗುವ ದಯನೀಯ ಸ್ಥಿತಿ ಇಲ್ಲಿನ ಜನತೆಯದ್ದಾಗಿದೆ. ಶಾಸಕರು ಕೂಡಲೇ ತಾಲೂಕಿನಲ್ಲಿರಬೇಕಾದ ಎಲ್ಲ ಕಚೇರಿಗಳನ್ನು ಆರಂಭಿಸಿ ಜನರ ಗೋಳು ತಪ್ಪಿಸಬೇಕಿದೆ.
ಆನಂದ ಯತ್ನಾಳ, ಜೆಡಿಎಸ್‌ ಯುವ ಮುಖಂಡ

ಶಾಸಕ ಡಾ|ಅಜಯಸಿಂಗ್‌ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ ಬಾರಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ
ಬಂದಿರುವುದರಿಂದ ಯಡ್ರಾಮಿಗೆ ಬೇಕಾದ ಅಗತ್ಯ ಅನುದಾನ ತಂದು ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ಮಾಡುತ್ತಾರೆನ್ನುವ ಅಚಲ ವಿಶ್ವಾಸವಿದೆ.
*ಮಲ್ಲಿಕಾರ್ಜುನ ಹಲಕರ್ಟಿ, ಕಾಂಗ್ರೆಸ್‌ ಮುಖಂಡ

ಈ ಬಾರಿ ಕಾಂಗ್ರೆಸ್‌ನ ಬಹುಮತದ ಸರ್ಕಾರ ಬಂದಿದೆ. ಯಡ್ರಾಮಿಯಲ್ಲಿ ಮಿನಿ ವಿಧಾನಸೌಧದ ಕಟ್ಟಡ ನಿರ್ಮಾಣ ಮಾಡುತ್ತೇವೆ. ಹೆಚ್ಚಿನ ಅನುದಾನದೊಂದಿಗೆ ತಾಲೂಕಿನಲ್ಲಿರಬೇಕಾದ ಕಚೇರಿ ಆರಂಭಕ್ಕೆ ಪ್ರಯತ್ನಿಸುತ್ತೇನೆ.
* ಡಾ|ಅಜಯಸಿಂಗ್‌, ಶಾಸಕ

*ಸಂತೋಷ ನವಲಗುಂದ

ಟಾಪ್ ನ್ಯೂಸ್

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Suspended

Kalaburagi;ಅವ್ಯವಹಾರಕ್ಕೆ ಸಂಬಂಧಿಸಿ ಮೂವರು ಇಂಜಿನಿಯರ್ ಗಳ ಅಮಾನತು

8-chincholi

Chincholi: ಜನತಾ ದರ್ಶನ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ‌ನಡೆಸಿದ ಜಿಲ್ಲಾಧಿಕಾರಿ

4-wadi

Wadi: ಬೀದಿಗೆ ಬಿದ್ದ ರೈಲು ನಿಲ್ದಾಣ ಸಫಾಯಿ ಕಾರ್ಮಿಕರು;

Farmer: ಯುವ ರೈತ ಮೃತ್ಯು… ಶುಭಕಾರ್ಯ ನಡೆಯಬೇಕಿದ್ದ ಮನೆಯಲ್ಲಿ ಮಡುಗಟ್ಟಿದ ಶೋಕ

Tragedy: ಯುವ ರೈತ ಮೃತ್ಯು… ಶುಭಕಾರ್ಯ ನಡೆಯಬೇಕಿದ್ದ ಮನೆಯಲ್ಲಿ ಮಡುಗಟ್ಟಿದ ಶೋಕ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.