ಯಡ್ರಾಮಿ ತಾಲೂಕಲ್ಲಿ ಮೂಲಸೌಕರ್ಯ ಮರೀಚಿಕೆ; ಹೆಸರಿಗಷ್ಟೇ ತಾಲೂಕು

ಶಾಸಕ ಡಾ|ಅಜಯಸಿಂಗ್‌ ಇಚ್ಛಾಶಕ್ತಿ ತೋರಬೇಕು ಎಂಬುದು ಜನರ ಆಶಯವಾಗಿದೆ.

Team Udayavani, May 29, 2023, 6:11 PM IST

ಯಡ್ರಾಮಿ ತಾಲೂಕಲ್ಲಿ ಮೂಲಸೌಕರ್ಯ ಮರೀಚಿಕೆ; ಹೆಸರಿಗಷ್ಟೇ ತಾಲೂಕು

ಯಡ್ರಾಮಿ: ತಾಲೂಕು ರಚನೆಯಾಗಿ ನಾಲ್ಕು ವರ್ಷಗಳೇ ಕಳೆದರೂ ಮೂಲಭೂತ ಸೌಕರ್ಯಗಳು ಮರೀಚಿಕೆ ಎಂಬಂತಾಗಿದೆ. ತಾಲೂಕು ಕೇಂದ್ರ ಹೊಂದಿರಬೇಕಾದ ಮೂಲ ಸೌಲಭ್ಯಗಳು ಸಿಗದೇ ಹೆಸರಿಗಷ್ಟೇ ತಾಲೂಕು ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನಲ್ಲಿ ಸದ್ಯ ತಹಶೀಲ್ದಾರ್‌ ಕಚೇರಿ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಕಾರ್ಯಾಲಯಗಳನ್ನು ಹೊರತು ಪಡಿಸಿದರೆ ತಾಲೂಕು ಕೇಂದ್ರದಲ್ಲಿರಬೇಕಾದ ಕೃಷಿ ಸಹಾಯಕ ನಿರ್ದೇಶಕ ಕಚೇರಿ, ಬಿಇಒ,
ಅರಣ್ಯ, ಪೊಲೀಸ್‌ ವೃತ್ತ ನಿರೀಕ್ಷಕರ ಕಚೇರಿ, ಬಸ್‌ ಡಿಪೋ, ಉಪ ನೋಂದಣಿ ಕಚೇರಿ, ಭೂ ಮಾಪನ ಇಲಾಖೆ, ತೋಟಗಾರಿಕೆ, ಅಗ್ನಿಶಾಮಕ, ಸಮಾಜ ಕಲ್ಯಾಣ, ಲೋಕೋಪಯೋಗಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಮಹಿಳಾ ಮತ್ತು ಮಕ್ಕಳ ಇಲಾಖೆ ಕಚೇರಿ ಸೇರಿದಂತೆ ಇತರೆ ಕಾರ್ಯಾಲಯಗಳನ್ನು ತೆರೆಯಬೇಕು.

ತಾಲೂಕಿನ ಜನತೆ ಈಗಲೂ ಸರಕಾರಿ ಕೆಲಸಗಳಿಗಾಗಿ ಜೇವರ್ಗಿಗೆ ತೆರಳುವುದು ಸಾಮಾನ್ಯವಾಗಿದೆ. ರೈತರು, ವೃದ್ಧರು, ಮಹಿಳೆಯರು, ವಿದ್ಯಾರ್ಥಿಗಳು, ಅಂಗವಿಕಲರು ಪರದಾಡುವಂತಾಗಿದೆ. ಡಾ|ಅಜಯಸಿಂಗ್‌ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದು, ಈ ಬಾರಿಯಾದರೂ ತಾಲೂಕಿನಲ್ಲಿ ಎಲ್ಲ ಕಚೇರಿಗಳು ಆರಂಭವಾಗಲಿವೆ ಎಂಬ ನಿರೀಕ್ಷೆಯಲ್ಲಿ ಈ ಭಾಗದ ಜನರಿದ್ದಾರೆ.

ಈಗಾಗಲೇ ತಾಲೂಕು ಆಡಳಿತ ಸೌಧ ಹಾಗೂ ನ್ಯಾಯಾಲಯ ಕಟ್ಟಡದ ನಿರ್ಮಾಣಕ್ಕೆ ತಲಾ ಐದು ಎಕರೆ ಭೂಮಿ ಮಂಜೂರಾಗಿದೆ. ಸದ್ಯದ ರಾಜ್ಯ ಸರ್ಕಾರದಿಂದ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ತರುವಲ್ಲಿ ಡಾ| ಅಜಯಸಿಂಗ್‌ ಹೆಚ್ಚಿನ ಮುತುವರ್ಜಿ ವಹಿಸಿದರೆ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಕಳೆದ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಧೋರಣೆ ಅನುಸರಿಸಿತ್ತು ಎಂಬುದು ಶಾಸಕರ ಪ್ರಬಲ ಆರೋಪ.

ಆದರೀಗ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದಿರುವುದರಿಂದ ಅನುದಾನ ತರುವಲ್ಲಿ ಯಾವ ಅಡೆತಡೆಯಾಗದು. ನೂತನ ಯಡ್ರಾಮಿ ತಾಲೂಕಿನ ಜನತೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಶಾಸಕ ಡಾ|ಅಜಯಸಿಂಗ್‌ ಇಚ್ಛಾಶಕ್ತಿ ತೋರಬೇಕು ಎಂಬುದು ಜನರ ಆಶಯವಾಗಿದೆ.

ಯಡ್ರಾಮಿ ತಾಲೂಕು ಎಂದು ಹೇಳಲು ನಾಚಿಕೆ ಬರುತ್ತಿದೆ. ತಾಲೂಕಾಗಿ ನಾಲ್ಕು ವರ್ಷಗಳೇ ಕಳೆದಿವೆ. ಆದರೆ ಅನೇಕ ಕಚೇರಿಗಳು ಇರದೇ ಇರುವುದರಿಂದ ಜೇವರ್ಗಿಗೆ ಅನಿವಾರ್ಯವಾಗಿ ತೆರಳಬೇಕಾಗುವ ದಯನೀಯ ಸ್ಥಿತಿ ಇಲ್ಲಿನ ಜನತೆಯದ್ದಾಗಿದೆ. ಶಾಸಕರು ಕೂಡಲೇ ತಾಲೂಕಿನಲ್ಲಿರಬೇಕಾದ ಎಲ್ಲ ಕಚೇರಿಗಳನ್ನು ಆರಂಭಿಸಿ ಜನರ ಗೋಳು ತಪ್ಪಿಸಬೇಕಿದೆ.
ಆನಂದ ಯತ್ನಾಳ, ಜೆಡಿಎಸ್‌ ಯುವ ಮುಖಂಡ

ಶಾಸಕ ಡಾ|ಅಜಯಸಿಂಗ್‌ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ ಬಾರಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ
ಬಂದಿರುವುದರಿಂದ ಯಡ್ರಾಮಿಗೆ ಬೇಕಾದ ಅಗತ್ಯ ಅನುದಾನ ತಂದು ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ಮಾಡುತ್ತಾರೆನ್ನುವ ಅಚಲ ವಿಶ್ವಾಸವಿದೆ.
*ಮಲ್ಲಿಕಾರ್ಜುನ ಹಲಕರ್ಟಿ, ಕಾಂಗ್ರೆಸ್‌ ಮುಖಂಡ

ಈ ಬಾರಿ ಕಾಂಗ್ರೆಸ್‌ನ ಬಹುಮತದ ಸರ್ಕಾರ ಬಂದಿದೆ. ಯಡ್ರಾಮಿಯಲ್ಲಿ ಮಿನಿ ವಿಧಾನಸೌಧದ ಕಟ್ಟಡ ನಿರ್ಮಾಣ ಮಾಡುತ್ತೇವೆ. ಹೆಚ್ಚಿನ ಅನುದಾನದೊಂದಿಗೆ ತಾಲೂಕಿನಲ್ಲಿರಬೇಕಾದ ಕಚೇರಿ ಆರಂಭಕ್ಕೆ ಪ್ರಯತ್ನಿಸುತ್ತೇನೆ.
* ಡಾ|ಅಜಯಸಿಂಗ್‌, ಶಾಸಕ

*ಸಂತೋಷ ನವಲಗುಂದ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.