ಏನೇ ಸಮಸ್ಯೆಗಳಿದ್ದರೂ ಕುಳಿತು ಮಾತನಾಡೋಣ ಬನ್ನಿ 


Team Udayavani, Jan 23, 2017, 3:45 AM IST

BSY–650.jpg

ಕಲಬುರಗಿ: ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೂ ಕುಳಿತು ಮಾತನಾಡೋಣ ಬನ್ನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಪಕ್ಷದ ನಾಯಕರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.

ನಗರದಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕಾರಿಣಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಕುಳಿತು ಮಾತನಾಡಿದರೆ ಎಂತಹ ಸಮಸ್ಯೆಯೂ ಬಗೆಹರಿಯುತ್ತದೆ. ಮಾತನಾಢುವ ವೇಳೆ ತಮ್ಮ ತಪ್ಪಿನ ಬಗ್ಗೆಯೂ ಹೇಳಬಹುದು. ಯಾವುದೇ ಸಂಕೋಚವಿಲ್ಲದೇ ಮಾತುಕತೆಗೆ ಬನ್ನಿ ಎಂದು ರಾಜ್ಯದ ನಾಯಕರಿಗೆ ಆಹ್ವಾನವಿತ್ತರು.

“ನಮ್ಮಲ್ಲಿ ಗೊಂದಲವಿದ್ದರೂ ಎಪಿಎಂಸಿ ಚುನಾವಣೆಯಲ್ಲಿ ಒಟ್ಟಾರೆ 1553 ಸ್ಥಾನಗಳ ಪೈಕಿ 611 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಕಾಂಗ್ರೆಸ್‌ 656ರಲ್ಲಿ, ಜೆಡಿಎಸ್‌ 205 ಸ್ಥಾನಗಳಲ್ಲಿ ಜಯ ಗಳಿಸಿದೆ. ನಾವೆಲ್ಲರೂ ಒಗ್ಗಟ್ಟಾಗಿದ್ದರೆ ಕಾಂಗ್ರೆಸ್‌ಗಿಂತ ಅತಿ ಹೆಚ್ಚಿನ ಹೆಚ್ಚಿನ ಸ್ಥಾನ ಗಳಿಸುವಲ್ಲಿ ಯಾವುದೇ ಸಂಶಯವಿರಲಿಲ್ಲ’ ಎಂದು ಹೇಳಿದರು.

“2018ರ ಚುನಾವಣೆಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದರೆ ಮಿಷನ್‌ 150 ತಲುಪಿ ಆಡಳಿತ ಹಿಡಿಯಲು ಸಾಧ್ಯವಾಗುತ್ತದೆ. ಇದನ್ನೆಲ್ಲ ಮನಗಾಣಲೇಬೇಕಾಗಿದೆ. ಕೆಲವು ಕ್ಷೇತ್ರಗಳಲ್ಲಿ ಇಬ್ಬರು, ಮೂವರು ಆಕಾಂಕ್ಷಿಗಳಿದ್ದರೂ ಎಲ್ಲರೂ ಕೂಡಿಕೊಂಡು ಕೆಲಸ ಮಾಡಿ. ಜನತೆ ಯಾರಿಗೆ ಹೆಚ್ಚು ಒಲವು ವ್ಯಕ್ತಪಡಿಸುತ್ತಾರೆಯೋ ಅವರಿಗೆ ಸ್ಪರ್ಧೆಯ ಅವಕಾಶ ಕೊಟ್ಟರಾಯಿತು. ಕಾರ್ಯಕರ್ತರು ಎದೆಗುಂದುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಮತ್ತೂಮ್ಮೆ ಜನಪರ ಬಿಜೆಪಿ ಸರ್ಕಾರ ರಚನೆಯಾಗುವತ್ತ ಎಲ್ಲರ ಲಕ್ಷéವಿರಬೇಕು’ ಎಂದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ತೆರೆ
– ಬ್ರಿಗೇಡ್‌ ಬಗ್ಗೆಯೇ ನಡೆದ ಚರ್ಚೆ
ಕಲಬುರಗಿ:
ಬಿಸಿಲು ನಾಡು ಕಲಬುರಗಿಯಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಭಾನುವಾರ ತೆರೆ ಬಿತ್ತು. ಆದರೆ, ಪಕ್ಷದ ಸಂಘಟನೆ ಹಾಗೂ ರಾಜ್ಯ ಸರ್ಕಾರದ ಆಡಳಿತ ಕಾರ್ಯವೈಖರಿ ವಿರುದ್ಧ ಪ್ರಮುಖವಾಗಿ ಚರ್ಚೆ ನಡೆಯಲೇ ಇಲ್ಲ. ಬದಲಾಗಿ, ಸಂಗೋಳ್ಳಿ ರಾಯಣ್ಣ ಬ್ರಿಗೇಡ್‌ ವಿಷಯವೇ ಕೇಂದ್ರೀಕೃತವಾಗಿತ್ತು.

ಎರಡು ದಿನಗಳ ಕಾರ್ಯಕಾರಿಣಿಯಲ್ಲಿ ಬಿಜೆಪಿಯ ಎಲ್ಲ ನಾಯಕರ ಹಾಗೂ ಕಾರ್ಯಕರ್ತರ ಬಾಯಲ್ಲಿ, ಇಬ್ಬರು ನಾಯಕರ ವಾಕ್ಸಮರ ಎಲ್ಲಿಯವರೆಗೆ ಹೋಗುತ್ತದೋ? ಯಾವಾಗ ಮುಕ್ತಾಯವಾಗುತ್ತದೋ ಎನ್ನುವ ಪ್ರಶ್ನೆ, ಆತಂಕ ಕಂಡು ಬಂತು. ಪಕ್ಷದಲ್ಲಿ ಭಿನ್ನಮತವಿದೆ ಎಂದು ಪಕ್ಷದ ರಾಜ್ಯಮಟ್ಟದ ಎಲ್ಲ ನಾಯಕರು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಆದಷ್ಟು ಬೇಗನೆ, ಇದನ್ನು ಇತ್ಯರ್ಥಪಡಿಸುವಂತೆ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ ಎನ್ನುತ್ತಿರುವುದನ್ನು ಗಮನಿಸಿದರೆ ಬಿಎಸ್‌ವೈ-ಈಶ್ವರಪ್ಪ ಭಿನ್ನಮತ ನಿವಾರಣೆಯ ಚೆಂಡು ಪಕ್ಷದ ವರಿಷ್ಠರ ಅಂಗಳಕ್ಕೆ ತಲುಪಿದೆ ಎನ್ನುವುದು ಸ್ಪಷ್ಟವಾಗುತ್ತದೆ.

ಪ್ರಮುಖ ನಿರ್ಣಯಗಳು:
– ರಾಜ್ಯದ ಬರ ನಿರ್ವಹಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿನ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮಾಡುವುದು.
– 371ನೇ ವಿಧಿಯ ಪರಿಣಾಮಕಾರಿ ಜಾರಿಗೆ ಹೋರಾಟ ನಡೆಸುವುದು.
– ನೋಟು ಅಪನಗದೀಕರಣಗೊಳಿಸಿದ್ದಕ್ಕೆ ಪ್ರಧಾನಿಗೆ ಅಭಿನಂದನೆ.
–  ಮುಂದಿನ ಕಾರ್ಯಕಾರಿಣಿ ಸಭೆಯನ್ನು ಏ.6 ಮತ್ತು 7ರಂದು ಮೈಸೂರಲ್ಲಿ ನಡೆಸುವುದು.

ಬ್ರಿಗೇಡ್‌ಗೆ ಪಕ್ಷದ ರಾಷ್ಟ್ರೀಯ ನಾಯಕರು ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸವಿದೆ. ಜ.26ರಂದು ಕೂಡಲ ಸಂಗಮದ ಬ್ರಿಗೇಡ್‌ ಸಮಾವೇಶದಲ್ಲಿ ಪಾಲ್ಗೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಬ್ರಿಗೇಡ್‌ ಸಮಾವೇಶ ನಿಲ್ಲೋದಿಲ್ಲ.
– ಕೆ.ಎಸ್‌.ಈಶ್ವರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ.

ಈ ಜನ್ಮದಲ್ಲಿ ಬ್ರಿಗೇಡ್‌ ಪಕ್ಷದ ಸಂಘಟನೆ ಎಂದು ನಾನು ಒಪ್ಪುವುದಿಲ್ಲ. ಬ್ರಿಗೇಡ್‌ ಹೆಸರಲ್ಲಿ ಪಕ್ಷ ಸಂಘಟನೆಗೆ ಧಕ್ಕೆಯಾಗುತ್ತಿದೆ.
– ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.