ರಾಜೀನಾಮೆ ನೀಡಲ್ಲ: ಗೃಹ ಸಚಿವ ರಾಮಲಿಂಗಾರೆಡ್ಡಿ
Team Udayavani, Mar 9, 2018, 6:40 AM IST
ಕಲಬುರಗಿ: ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ಅವರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ರಾಜೀನಾಮೆ ನೀಡುವ ಅಗತ್ಯವಿಲ್ಲ. ಆದರೆ ಲೋಕಾಯುಕ್ತ ಕಚೇರಿಗೆ ಪಾರ್ಲಿಮೆಂಟ್ ಮಾದರಿ ಭದ್ರತೆ ನೀಡುತ್ತೇವೆಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಟಲ್ ಡಿಟೆಕ್ಟರ್ ದೋಷದಿಂದ ಚಾಕು ಪತ್ತೆಯಾಗಿಲ್ಲ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಈಗಾಗಲೇ ಮುಖ್ಯಮಂತ್ರಿ ಸೂಚಿಸಿದ್ದಾರೆ. ಪ್ರಮುಖವಾಗಿ ಭದ್ರತೆ ಲೋಪಕ್ಕೆ ಸಂಬಂಧಿಸಿದಂತೆ ಸದ್ಯದಲ್ಲಿಯೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಘಟನೆ ಸಂಬಂಧಿಸಿದಂತೆ ಕೇಂದ್ರದ ಗೃಹ ಇಲಾಖೆ ವರದಿ ಕೇಳಿಲ್ಲ. ಲೋಕಾಯುಕ್ತರೊಂದಿಗೆ ಆರೋಪಿ ಈ ಮೊದಲು ಜಗಳ ಮಾಡಿದ್ದ. ಆತನ ಹಿನ್ನೆಲೆಯನ್ನೂ ಕಲೆ ಹಾಕಲಾಗಿದೆ ಎಂದು ಹೇಳಿದರು.
ಅರ್ಹತೆಯಿದ್ದರೆ ಟಿಕೆಟ್ ನೀಡಲಿ
ನನ್ನ ಪುತ್ರಿ ಜಯನಗರ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದು ನಿಜ. ಅರ್ಹತೆ ಇದ್ದರೆ ಪಕ್ಷ ಟಿಕೆಟ್ ನೀಡಲಿ. ನನ್ನ ಮಗಳು ಎನ್ನುವ ಕಾರಣಕ್ಕೆ ಟಿಕೆಟ್ ಕೊಡಬೇಕಾಗಿಲ್ಲ. ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದಾಳೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಹಾಗೂ ತಮ್ಮ ಈ ಐದು ವರ್ಷಗಳ ಅಪರಾಧ ಪ್ರಕರಣಗಳನ್ನು ತುಲನೆ ಮಾಡಿದರೆ ಕಾಂಗ್ರೆಸ್ ಸರ್ಕಾರದಲ್ಲಿಯೇ ಕಡಿಮೆಯಾಗಿರುವುದನ್ನು ಅಂಕಿ ಸಂಖ್ಯೆಗಳೇ ನಿರೂಪಿಸುತ್ತವೆ. ಬಿಜೆಪಿಯವರು ಬೆಂಗಳೂರು ಉಳಿಸಿ ಎಂಬುದಾಗಿ ಪಾದಯಾತ್ರೆ ಮಾಡ್ತಾ ಇಲ್ಲ. ಬಿಜೆಪಿಯನ್ನು ಉಳಿಸಿ ಎಂಬ ನಿಟ್ಟಿನಲ್ಲಿ ಹೋರಾಟ ಕೈಗೊಂಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ