ಟ್ರಾಫಿಕ್ ಸಮಸ್ಯೆಗಿಲ್ಲ ನಿಯಂತ್ರಣ
Team Udayavani, Dec 12, 2021, 11:53 AM IST
ಶಹಾಬಾದ: ಪ್ರತಿನಿತ್ಯ ನೂರಾರು ವಾಹನಗಳ ಸಂಚಾರಕ್ಕೆ ಸಾಕ್ಷಿಯಾಗುವ ನೆಹರು ವೃತ್ತದಲ್ಲಿ ಟ್ರಾಫಿಕ್ ಸಮಸ್ಯೆ ದಿನೇ ದಿನೇ ಬಿಗಡಾಯಿಸುತ್ತಿದೆ. ಫುಟ್ಪಾತ್ ಜಾಗ ಅತಿಕ್ರಮಣ, ವಾಹನಗಳ ಸಂಖ್ಯೆ ಹೆಚ್ಚಳ, ನಗರ ಬೆಳವಣಿಗೆಯಿಂದ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬರುತ್ತಿಲ್ಲ. ಇದು ನಗರಸಭೆ ಗಮನಕ್ಕೆ ಬಂದರೂ ಜಾಣ ಮೌನ ವಹಿಸುತ್ತಿದೆ.
ನಗರದ ನೆಹರು ವೃತ್ತದಲ್ಲಿ ಸಂಚಾರ ಕಿರಿಕಿರಿಗೆ ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಪ್ರಾಣ ಸಂಕಟ ಎದುರಿಸುವ ಸ್ಥಿತಿ ನಿರ್ಮಾಣವಾಗಿದೆ. ನೆಹರು ವೃತ್ತದ ಸುತ್ತಲೂ ರಸ್ತೆ ಬದಿಯಲ್ಲಿ ಹಣ್ಣಿನ ಅಂಗಡಿ, ತಳ್ಳೋ ಬಂಡಿ ನಿಲ್ಲಿಸಲಾಗುತ್ತಿದೆ. ಇದರಿಂದ ಟ್ರಾಫಿಕ್ಸಮಸ್ಯೆ ಉಲ್ಬಣವಾಗಿದೆ. ಇದರಿಂದ ಸಾರ್ವಜನಿಕರಿಗೆ ವಾಹನ ಸವಾರರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ.
ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ನಗರದ ಮುಖ್ಯ ವೃತ್ತ ಇದಾಗಿದ್ದರಿಂದ ನಗರದೊಳಗೆ ಪ್ರವೇಶಿಸುವ ಎಲ್ಲ ವಾಹನಗಳು ಇಲ್ಲಿಂದಲೇ ಸಾಗಬೇಕು. ಅಲ್ಲದೇ ಇಕ್ಕಟ್ಟಾದ ರಸ್ತೆ, ಅದರ ಮಧ್ಯೆ ಕುಡಿಯುವ ನೀರಿನ ವಾಲ್ ಇದೆ. ಈ ರಸ್ತೆ ನಾಲ್ಕು ರಸ್ತೆಗಳ ಸಂಪರ್ಕ ಕೊಂಡಿಯಾಗಿದೆ. ದ್ವಿಚಕ್ರ ವಾಹನಗಳ ಜತೆಗೆ, ಬಸ್, ಲಾರಿ, ಟಂಟಂ ಹೀಗೆ ಎಲ್ಲ ಬಗೆಯ ವಾಹನಗಳು ಇದೇ ಮಾರ್ಗದಿಂದಲೇ ಸಂಚರಿಸಬೇಕು.
ಈ ವೃತ್ತದಿಂದಲೇ ನಗರಸಭೆ, ಪೊಲೀಸ್ ಕಚೇರಿ, ತಹಶೀಲ್ದಾರ್ ಕಾರ್ಯಾಲಯ, ನಗರಸಭೆ, ರೈಲ್ವೆ ನಿಲ್ದಾಣ, ಅಂಚೆ ಕಚೇರಿ, ಬಸ್ ನಿಲ್ದಾಣ ಸೇರಿದಂತೆ ಅನೇಕ ಕಚೇರಿಗಳಿಗೆ ಹೋಗಲು ಇದೇ ಮಾರ್ಗ ಸೂಕ್ತವಾಗಿದ್ದರಿಂದ ಸಂಚಾರ ಸಮಸ್ಯೆ ವಿಪರೀತವಾಗಿದೆ. ಆದರೆ ಸಮಸ್ಯೆ ನಿಯಂತ್ರಿಸಲು ಯಾರೂ ಮುಂದಾಗುತ್ತಿಲ್ಲ. ಜನತೆ ಎದುರಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಮುಖಮಾಡುತ್ತಿಲ್ಲ.
ಕೂಡಲೇ ರಸ್ತೆಯ ಬದಿಯ ಎಲ್ಲ ಡಬ್ಟಾ ಅಂಗಡಿಗಳನ್ನು ತೆರವುಗೊಳಿಸಿ ಸುಲಭ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ