Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

ಶಿಂಧೆ, ಪವಾರ್ ಜನ್ಮ ತಳೆದಿದ್ದಾರೆ ಚುನಾವಣೆ ನಂತರ ಪ್ರೌಢಾವಸ್ಥೆ ಗೆ ಬರುತ್ತಾರೆ...

Team Udayavani, Apr 21, 2024, 3:50 PM IST

yatnal

ಕಲಬುರಗಿ: ರಾಜ್ಯ ಸರ್ಕಾರದಲ್ಲಿ ಅಸ್ಥಿರತೆ ಕಾಡುತ್ತಿದ್ದು, ಲೋಕಸಭಾ ಚುನಾವಣೆ ನಂತರ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯ ವಿಲ್ಲ ಎಂದು ಬಿಜೆಪಿ ಮುಖಂಡ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಬಿಜೆಪಿ ಪ್ರಚಾರದಂಗವಾಗಿ ಇಲ್ಲಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಸಚಿವ ಶಿವಾನಂದ ಪಾಟೀಲ್ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲಿಂಗಾಯಿತ ಸ್ವಾಮೀಜಿಯವರೊಂದಿಗೆ ಮಾತನಾಡಿರುವ ಕಾನ್ಫರೆನ್ಸ್ ಕಾಲ್ ನಲ್ಲಿ ಲಿಂಗಾಯತರ ಆಶೀರ್ವಾದ ಇರಲಿ.‌ ಒಕ್ಕಲಿಗರು- ಲಿಂಗಾಯತರು ಒಂದಾಗಿ ಲೋಕಸಭಾ ಚುನಾವಣೆ ಮುಗಿದ 15 ದಿನದೊಳಗೆ ಸಿಎಂ ಸಿದ್ದರಾಮಯ್ಯ ಅವರನ್ನು ಇಳಿಸುತ್ತೇವೆ ಎಂದಿರುವುದು, ಒಕ್ಕಲಿಗರ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಈ ಚುನಾವಣೆಯಲ್ಲಿ ಕೈ ಹಿಡಿಯಿರಿ, ಒಕ್ಕಲಿಗ ಸಿಎಂ ಆಗೋದನ್ನು ತಪ್ಪಿಸಬೇಡಿ ಎಂದಿರುವುದು ಒಂದೆಡೆಯಾದರೆ,ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಲೋಕಸಭಾ ಕ್ಷೇತ್ರದ ವರುಣಾದಲ್ಲಿ 60 ಸಾವಿರ ಮತಗಳ ಲೀಡ್ ಕೊಡಿಸದಿದ್ದರೆ ಕುರ್ಚಿ ಹೋಗುತ್ತದೆ ಎಂದಿರುವುದು ಅವಲೋಕಿಸಿದರೆ ಸರ್ಕಾರ ಉಳಿಯುವುದೇ ಇಲ್ಲ. ಈಗಾಗಲೇ ಏಕನಾಥ್ ಶಿಂಧೆ, ಅಜಿತ್ ಪವಾರ್ ಜನ್ಮ ತಳೆದಿದ್ದಾರೆ.‌ನಾಮಕರಣ ಮಾಡಲಾಗಿದೆ.‌ ಲೋಕಸಭಾ ಚುನಾವಣೆ ನಂತರ ಪ್ರೌಢಾವಸ್ಥೆ ಗೆ ಬರುತ್ತಾರೆ ಎಂದರು.

ಸಿದ್ದರಾಮಯ್ಯ- ಡಿಕೆಸಿ ನಡುವಿನ ಗುದ್ದಾಟದ ಎಲ್ಲ ಅಂಶಗಳನ್ನು ಅವಲೋಕಿಸಿದರೆ ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಇಳಿಸಲು ಎಲ್ಲ ರೀತಿಯ ಅಜೆಂಡಾ ರೆಡಿ ಆಗಿದೆ ಎಂಬುದು ನಿರೂಪಿಸುತ್ತದೆ.‌ ಹೀಗಾಗಿ ಸಿಎಂ ಸಿದ್ಧ ರಾಮಯ್ಯ ಸಿಎಂ ಆಗಿ ಮುಂದುವರೆಯಲು ಹಾಲು ಮತದವರು ಎಚ್ಚರವಾಗಿರಬೇಕು.‌ ಏಲ್ಲೆಲ್ಲಿ ಡಿಕೆಶಿ ಚೀಲಾಗಳು ನಿಂತಿದ್ದಾರೆಯೋ ಅವರನ್ನು ಸೋಲಿಸಿದರೆ ಸಿದ್ದರಾಮಯ್ಯ ಸುರಕ್ಷಿತವಾಗಿ ಇರುತ್ತಾರೆ ಎಂದರು.

ಚೊಂಬು ಕಾಂಗ್ರೆಸ್ ಕೊಡುಗೆ
ದೇಶದಲ್ಲಿ ಚೊಂಬು ಕೊಟ್ಟಿರುವುದು ಕಾಂಗ್ರೆಸ್. ಚಂದ್ರಶೇಖರ ಅವರು ಪ್ರಧಾನಮಂತ್ರಿಯಾಗಿದ್ದ ವೇಳೆಯಲ್ಲಿ ಸಾಲಕ್ಕಾಗಿ ದೇಶದ ಚಿನ್ನ ಅಡವು ಇಡಲಾಗಿತ್ತು.‌ ಚಂದ್ರಶೇಖರ ಅವರನ್ನು ಬೆಂಬಲ‌ ನೀಡಿದವರ್ಯಾರು? ಮೋದಿ ಅವರು ಪಿಎಂ ಆದ ನಂತರ ಅಮೃತ ಕಲಶ ನೀಡಿದ್ದಾರೆ.‌ ಮೋದಿ‌ ಅವರು 14 ವರ್ಷ ಸಿಎಂ ಹಾಗೂ 10 ಪಿಎಂ ಆಗಿ ಕೇವಲ 2.30 ಕೋ.ರೂ ಮೊತ್ತ ಆಸ್ತಿ ಹೊಂದಿದ್ದಾರೆ. ಆದರೆ ಇದೇ ಡಿಕೆಶಿ ಸಹೋದರರು 2 ಸಾವಿರಕ್ಕೂ ಅಧಿಕ ಆಸ್ತಿ ಹೊಂದಿದ್ದಾರೆ. ಇವರು ಕೆಲ ವರ್ಷಗಳ ಹಿಂದೆ ಏನು ಮಾಡುತ್ತಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಗ್ಯಾರಂಟಿ ದುರಹಂಕಾರ
ಗ್ಯಾರಂಟಿಗಳ ಗಳಿಂದ ಗೆಲ್ಲುತ್ತೇವೆ ಎಂಬ ಅಂಹಕಾರ ಕಾಂಗ್ರೆಸ್ ಹೊಂದಿದೆ.‌ ಇದೇ ಕಾರಣಕ್ಕೆ ಆಡಳಿತ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನಡೆದುಕೊಂಡ ರೀತಿ ಒಂದೇ ವರ್ಗದ ಪರ‌ನಿಂತಿರುವುದು ಕಂಡು ಬರುತ್ತಿದೆ.‌ ಬಿಜೆಪಿ ಯಾವುದೇ ಧರ್ಮದ ವಿರೋಧವಿಲ್ಲ. ಇಲ್ಲಿಯ ಅನ್ನ ತಿಂದು ಬೇರೆಯವರಿಗೆ ಜೈ ಅನ್ನುವರಿಗೆ ತಮ್ಮ‌ಬೆಂಬಲವಿಲ್ಲ. ಮೋದಿ ಹಾಡು ಮಾಡಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಒಟ್ಟಾರೆ ಗ್ಯಾರಂಟಿ ಹವಾ ದಲ್ಲಿ‌ ತೇಲಲಾಗುತ್ತಿದೆ ಎಂದರು.

ಸಂಸದ ಡಾ.‌ಉಮೇಶ ಜಾಧವ್, ಬಿಜೆಪಿ‌ ನಗರಾಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.