ಡಿಸಿ ಕಚೇರಿ ಮೆಟ್ಟಿಲೆದುರು ಧರಣಿ ಮಾಡುವಂತಿಲ್ಲ
Team Udayavani, Jun 24, 2022, 12:40 PM IST
ಕಲಬುರಗಿ: ಧರಣಿ, ಸತ್ಯಾಗ್ರಹ, ಮುಷ್ಕರ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದು ಕಚೇರಿ ಮೆಟ್ಟಿಲುಗಳ ಮೇಲೆ ಕುಳಿತು ಮುಷ್ಕರ ಹಾಗೂ ಪ್ರತಿಭಟನೆ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಕಚೇರಿಗೆ ಬರುವವರಿಗೆ ಮತ್ತು ಕಚೇರಿ ಕೆಲಸಕ್ಕೆ ಅಡಚಣೆಯಾಗುತ್ತಿದ್ದು, ಸುಗಮ ಕಾರ್ಯನಿರ್ವಹಣೆ ಮತ್ತು ಶಾಂತಿ, ಸುವ್ಯವಸ್ಥೆ ಕಾಪಾಡಲು ಆವರಣ ಪ್ರವೇಶಕ್ಕೆ ತಡೆ ನೀಡಿ ಮೆಟ್ಟಿಲುಗಳ ಎದುರು ಪ್ರತಿಭಟನೆ, ಮುಷ್ಕರ, ಸತ್ಯಾಗ್ರಹ ಕೈಗೊಳ್ಳದಂತೆ ಗುರುಕರ್ ಬುಧವಾರ ಆದೇಶ ಹೊರಡಿಸಿದ್ದಾರೆ.
ಪ್ರತಿಭಟನೆ, ಮುಷ್ಕರನಿರತ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಅನುಕೂಲವಾಗುವಂತೆ ಡಿಸಿ ಕಚೇರಿಗೆ ಪ್ರವೇಶಿಸುವ ಎಡ ಭಾಗದ ಪ್ರವೇಶ ದ್ವಾರದಲ್ಲಿ (ನಗರಾಭಿವೃದ್ಧಿ ಕಚೇರಿ ಪಕ್ಕದಲ್ಲಿ) ಪ್ರತ್ಯೇಕವಾಗಿ ಸ್ಥಳಾವಕಾಶ ನೀಡಿದ್ದು, ಅಲ್ಲಿಯೇ ಮನವಿ ಪತ್ರ ಸಲ್ಲಿಸುವಂತೆ ಡಿಸಿ ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ