ವಿದ್ಯಾರ್ಥಿಗಳ ಬೌದ್ಧಿಕಮಟ್ಟ ಗಮನಿಸಿ
Team Udayavani, Aug 31, 2018, 11:08 AM IST
ಕಲಬುರಗಿ: ವರ್ಗವೊಂದರಲ್ಲಿ ಎಲ್ಲ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಒಂದೇ ಇರೋದಿಲ್ಲ. ಅವರವರ ಬುದ್ಧಿಮಟ್ಟಕ್ಕೆ
ಅನುಗುಣವಾಗಿ ಶಿಕ್ಷಕರು ಪಾಠ ಮಾಡುವುದು ಹೆಚ್ಚು ಸಮಂಜಸ ಎನಿಸುತ್ತದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಪ್ರಾಧ್ಯಾಪಕರಿಗೆ ಸಲಹೆ ನೀಡಿದರು.
ನಗರದ ದೊಡ್ಡಪ್ಪ ಅಪ್ಪಾ ಸಭಾ ಮಂಟಪದಲ್ಲಿ ಶರಣಬಸವ ವಿವಿಯು ಗುರುವಾರ ಹಮ್ಮಿಕೊಂಡಿದ್ದ ಸಿಬ್ಬಂದಿ ಪುಷ್ಟಿಕರಣ
(ಫ್ಯಾಕಲ್ಟಿ ಎನ್ರಿಚ್) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ತಮ್ಮ ಹುದ್ದೆ ಎಂದಿಗೂ ಅಲಕ್ಷಿಸಬಾರದು. ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಬೇಕು. ಮಕ್ಕಳ ಉತ್ತಮ ಭವಿಷ್ಯ
ಶಿಕ್ಷಕರ ಕೈಯಲ್ಲಿದೆ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮುಖಾಂತರ ಪಾಠ ಬೋಧಿಸಬೇಕು. ಶಿಕ್ಷಿಸುವುದರಿಂದ
ಮಕ್ಕಳಲ್ಲಿ ಕಲಿಕೆ ಆಸಕ್ತಿ ಕಡಿಮೆಯಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶರಣಬಸವ ವಿವಿ ಕುಲಪತಿ ಡಾ| ನಿರಂಜನ್ ನಿಷ್ಠಿ ಮಾತನಾಡಿ, ಶಿಕ್ಷಕ ಹುದ್ದೆ ಗೌರಯುತವಾದದ್ದು. ಮಕ್ಕಳ ಭವಿಷ್ಯ ಬದಲಾಯಿಸುವ ಜವಾಬ್ದಾರಿ ಶಿಕ್ಷಕರ ಕೈಯಲ್ಲಿದೆ. ಶ್ರದ್ಧೆಯಿಂದ ಕಾಯಕ ಮಾಡುವ ಮೂಲಕ ಪೂಜ್ಯ ಡಾ| ಶರಣಬಸವಪ್ಪ ಅಪ್ಪಾಜಿ ಅವರ ಕನಸನ್ನು ಸಾಕಾರಗೊಳಿಸಬೇಕು. ಈ ವಿಶ್ವವಿದ್ಯಾಲಯವನ್ನು ರಾಷ್ಟ್ರಮಟ್ಟದಲ್ಲಿ ಬೆಳೆಸುವುದು ತಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಸಹ ಕುಲಪತಿಗಳಾದ ಡಾ| ವಿ.ಡಿ. ಮೈತ್ರಿ , ಕುಲಸಚಿವ ಡಾ| ಅನೀಲಕುಮಾರ ಬಿಡವೆ, ಡೀನ್ ಡಾ| ಲಿಂಗರಾಜ ಶಾಸ್ತ್ರೀ
ಶಿಕ್ಷಕರ ಕಲಿಕೆ ಪುಷ್ಠಿಕರಣದ ಬಗ್ಗೆ ವಿವರಿಸಿದರು. ವಿದ್ಯಾರ್ಥಿನಿ ಶಿವರಂಜಿನಿ ಪ್ರಾರ್ಥಿಸಿದರು. ಪ್ರೊ| ಅಮೃತಾ ಪತ್ತಾರ
ನಿರೂಪಿಸಿದರು, ಡಾ| ಬಸವರಾಜ ಮಠಪತಿ ಸ್ವಾಗತಿಸಿದರು.
ಕುಲಸಚಿವ (ಮೌಲಮಾಪನ) ಡಾ| ಶಿವದತ್ತ ಹೊನ್ನಳ್ಳಿ, ಡಾ| ಲಕ್ಷ್ಮೀ ಪಾಟೀಲ, ಹಿರಿಯ ಪತ್ರಕರ್ತ ಟಿ.ವಿ. ಶಿವಾನಂದನ್, ಪ್ರೊ| ವಾಣಿಶ್ರೀ, ಪ್ರೊ| ಶಿಲ್ಪ ಬಿ.ಎಂ., ಪ್ರೊ| ಗೀತಾ ಹರವಾಳ, ಡಾ| ಶಿವಕುಮಾರ ರಾಚೋಟಿ,
ಡಾ| ಶಿವಕುಮಾರ ಜವಳಗಿ, ಡಾ| ನಿರ್ದೋಷ ಪಾಟೀಲ, ಡಾ| ಕಿರಣ ಮಾಕಾ, ಡಾ| ರಾಜಶೇಖರ ಯರಗೋಳ
ಹಾಗೂ ವಿವಿಧ ವಿಭಾಗಗಳ ಡೀನ್ಗಳು, ಮುಖ್ಯಸ್ಥರು, ಪ್ರಾಧ್ಯಾಪಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ