ಯೋಜನೆ ಅನುಷ್ಠಾನ ತೀವ್ರತೆಗೆ ಸೂಚನೆ


Team Udayavani, Jul 3, 2021, 5:07 PM IST

r5ತತಯತ

ಆಳಂದ: ಇಲಾಖೆಗಳಿಗೆ ಸರ್ಕಾರ ವಹಿಸಿದ ಯೋಜನೆಗಳ ಸಮರ್ಪಕ ಅನುಷ್ಠಾನ ಸೇರಿದಂತೆ ರಸ್ತೆ, ಕಟ್ಟಡ ಸೇರಿದಂತೆ ಇನ್ನಿತರ ಇಲಾಖೆಗಳಿಗೆ ವಹಿಸಿದ್ದ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕೈಗೊಂಡು ಪೂರ್ಣಗೊಳಿಸಬೇಕು ಎಂದು ಶಾಸಕ ಸುಭಾಷ ಗುತ್ತೇದಾರ ಸಂಬಂಧಿ ತ ಅ ಧಿಕಾರಿಗಳಿಗೆ ಸೂಚನೆ ನೀಡಿದರು.

ತಾಪಂ ಕಚೇರಿಯಲ್ಲಿ ಶುಕ್ರವಾರ ಕರೆಯಲಾಗಿದ್ದ ತ್ತೈಮಾಸಿಕ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್‌ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಆದ್ದರಿಂದ ಅಧಿ ಕಾರಿಗಳು ಕಚೇರಿಗೆ ಆಗಮಿಸಿ, ಕೇಂದ್ರಸ್ಥಾನದಲ್ಲೇ ಇದ್ದು ಇಲಾಖೆ ಯೋಜನೆಗಳನ್ನು ಜನತೆಗೆ ತಲುಪಿಸಬೇಕು ಎಂದು ತಾಕೀತು ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಜಿಲ್ಲಾ ಮಟ್ಟದ ಸಭೆಯಲ್ಲಿ ಕಾಮಗಾರಿಗಳ ಕ್ರಿಯಾ ಯೋಜನೆ ಕೇಳಿದ್ದಾರೆ.

ಅಧಿಕಾರಿಗಳು ಸಮನ್ವಯ ಸಾಧಿ ಸಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಕ್ಕೆ ತುರ್ತು ಹಾಗೂ ಮುಂದಿನ ದಿನಗಳಿಗೆ ಅಗತ್ಯ ಕಾಮಗಾರಿಗಳ ಕುರಿತು ವಿಸ್ತೃತ ವರದಿಯನ್ನು ಶೀಘ್ರವೇ ಸಿದ್ಧಪಡಿಸಿ ಕಳುಹಿಸಿಕೊಡಬೇಕು ಎಂದು ಹೇಳಿದರು. ತಾಲೂಕಿನ ಎಲ್ಲ ಹಳ್ಳಿಗಳಿಗೆ ಕುಡಿಯಲು ಗಂಡೋರಿ ನಾಲಾ ನೀರು ತರುವುದು, ದೊಡ್ಡ ಗ್ರಾಮ ಮತ್ತು ಆಳಂದ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ, ಅಮರ್ಜಾ ಸೇರಿದಂತೆ ಬೃಂದಾವನ ಮಾದರಿಯಲ್ಲಿ ಆರು ಕೆರೆಗಳನ್ನು ಅಭಿವೃದ್ಧಿ ಪಡಿಸುವ ಕ್ರಿಯಾ ಯೋಜನೆ ಪ್ರಸ್ತಾಪಿಸಬೇಕು ಎಂದರು. ವಿದ್ಯುತ್‌ ಟ್ರಾನ್ಸ್‌ಫಾರಂಗಳು ಸುಟ್ಟು ತಿಂಗಳಾದರೂ ದುರುಸ್ತಿ ಕಾರ್ಯ ಕೈಗೊಳ್ಳುತ್ತಿಲ್ಲ. ಇದರಿಂದ ಬೆಳೆ ಹಾನಿಯಾಗುತ್ತಿದೆ. ಹೀಗಾದರೆ ಹೇಗೆ ಎಂದು ಜೆಸ್ಕಾಂ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿದ ಶಾಸಕರು, ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಹಾಜರಿದ್ದ ಜೆಸ್ಕಾಂ ಎಇಇ ಮಾಣಿಕರಾವ್‌ ಕುಲಕರ್ಣಿಗೆ ಸೂಚಿಸಿದರು.

ನಂತರ ಪ್ರಧಾನಮಂತ್ರಿ ಗ್ರಾಮೀಣ ಸಡಕ್‌ ಇಲಾಖೆ ರಸ್ತೆಗೆ ಎಂಸ್ಯಾಂಡ್‌ ಬದಲು ಭೂಸಾ ಬಳಕೆ ಮಾಡಲಾಗುತ್ತಿದೆ ಎಂದು ಅ ಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಕೃಷಿ ನಿರ್ದೇಶಕ ಶರಣಗೌಡ ಪಾಟೀಲ ಬಿತ್ತನೆ ಕ್ಷೇತ್ರ ಗುರಿ ಸಾಧನೆ, ಬೀಜಗಳ ವಿತರಣೆ, ಮಳೆ ಕುರಿತು ಮಾಹಿತಿ ನೀಡಿದರು. ಗ್ರಾಮೀಣ ನೀರು ಸರಬರಾಜು ಎಇಇ ಚಂದ್ರಮೌಳಿ ಕುಡಿಯುವ ನೀರು ಪೂರೈಕೆ ಕೈಗೊಂಡ ಕಾಮಗಾರಿ ಮತ್ತು ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ತಿಳಿಸಿದರು. ಕ್ಷೇತ್ರ ಶಿಕ್ಷಣಾ ಧಿಕಾರಿ ಭರತರಾಜ ಸಾವಳಗಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ, ವಿದ್ಯಾರ್ಥಿಗಳಿಗೆ ಆಹಾರ ಪೂರೈಸುವ ಕುರಿತು ಶಾಸಕರ ಗಮನಕ್ಕೆ ತಂದರು.

ತಾಪಂ ಇಒ ನಾಗಮೂರ್ತಿ ಕೆ. ಶೀಲವಂತ ನಿರ್ವಹಿಸಿದರು. ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ನಿಗಮದ ನಿರ್ದೇಶಕ ಮಲ್ಲಿಕಾರ್ಜುನ ತಡಕಲ್‌, ಮುಖಂಡ ಮಲ್ಲಣ್ಣಾ ನಾಗೂರೆ ಇದ್ದರು. ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ| ಸಂಜಯ ರೆಡ್ಡಿ, ಮಿನುಗಾರಿಕೆ ಇಲಾಖೆ ಅಧಿ ಕಾರಿ ಶಂಕರ ಗೊಂದಳಿ, ಅರಣ್ಯ ಇಲಾಖೆ ಅ ಧಿಕಾರಿ ಚಂದ್ರಶೇಖರ ಹೇಮಾ, ಪ್ರಾದೇಶಿಕ ಅ ಧಿಕಾರಿ ರಾಘವೇಂದ್ರ, ಪಿಡಬುಡಿ ಅಧಿ ಕಾರಿ ಕರಬಸಪ್ಪ ಪಿಸರ್ಗಿ, ಶರಣಯ್ಯ ಹಿರೇಮಠ, ಕೈಗಾರಿಕೆ ಜಾಫರ್‌ ಅನ್ಸಾರಿ, ರೇಷ್ಮೆ ನಿರೀಕ್ಷಣಾ ಧಿಕಾರಿ ಡಿ.ಬಿ. ಪಾಟೀಲ, ಸಿಡಿಪಿಒ ಶವಮೂರ್ತಿ ಕುಂಬಾರ, ನೀರಾವರಿ ಇಲಾಖೆ ಎಇಇ ಶಾಂತಪ್ಪ, ಅಕ್ಷರ ದಾಸೋಹ ಅ ಧಿಕಾರಿ ಡಾ| ರಾಜಕುಮಾರ ಪಾಟೀಲ ಹಾಗೂ ಆಹಾರ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಇನ್ನಿತರ ಅ ಧಿಕಾರಿಗಳ ಪ್ರಗತಿ ವರದಿ ಮಂಡಿಸಿದರು.

ಕೋವಿಡ್‌ ನಿಯಂತ್ರಣ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೃಷಿ, ತೋಟಗಾರಿಕೆ, ಪಶು ಸಂಗೋಪನಾ, ಪ್ರಾದೇಶಿಕ ಅರಣ್ಯ ಇಲಾಖೆ ಸೇರಿದಂತೆ ಕೆಲವು ಪ್ರಮುಖ ಇಲಾಖೆ ಯೋಜನೆಗಳಿಗೆ ಅನುದಾನ ಬಾರದ್ದಕ್ಕೆ ಕಾರ್ಯಕ್ರಮ ಅನುಷ್ಠಾನಕ್ಕೆ ಹಿನ್ನೆಡೆಯಾಗಿದೆ ಎಂದು ಅಧಿ ಕಾರಿಗಳು ಶಾಸಕರ ಗಮನಕ್ಕೆ ತಂದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

1-weeqw

PU Exam ನಕಲು ಮಾಡಲು ಸಹಕಾರ ನೀಡಿಲ್ಲವೆಂದು ಪೇದೆ‌ ಮೇಲೆಯೇ ಹಲ್ಲೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.